ಬಿಎಸ್ಸೆನ್ನೆಲ್‌ ಗುತ್ತಿಗೆ ನೌಕರರಿಂದ ಸಚಿವರಿಗೆ ಮನವಿ


Team Udayavani, Dec 25, 2018, 11:31 AM IST

25-december-2.gif

ಸುಬ್ರಹ್ಮಣ್ಯ : ಸರಕಾರಿ ಸ್ವಾಮ್ಯದ ಸಂಸ್ಥೆಯ ಕಚೇರಿ ಮತ್ತು ದೂರವಾಣಿ ಕೇಂದ್ರದಲ್ಲಿ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಕಳೆದ ಮೂರು ತಿಂಗಳಿಂದ ಸಂಸ್ಥೆ ವೇತನ ಪಾವತಿಸಿಲ್ಲ. ಈ ಕುರಿತು ಈ ಸಂಸ್ಥೆಯಲ್ಲಿ ದುಡಿಯುತ್ತಿರುವ ಗುತ್ತಿಗೆ ನೌಕರರು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ರವಿವಾರ ಭೇಟಿಯಾಗಿ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಸಲ್ಲಿಸಿದರು.

ಸುದೀರ್ಘ‌ ಅವಧಿಯಿಂದ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ಇದುವರೆಗೆ ಮೂಲ ಸೌಕರ್ಯ ವಂಚಿತರಾಗಿ ಸೇವೆ ನೀಡಿರುವ ನಮಗೆ ಸಂಸ್ಥೆ ಕಾನೂನು ಬದ್ಧ ಸವಲತ್ತು ಮತ್ತು ಯಾವುದೇ ಉದ್ಯೋಗ ಭದ್ರತೆ ನೀಡಿಲ್ಲ. ನೌಕರರನ್ನು ಪದೇ ಪದೆ ಕೆಲಸದಿಂದ ವಜಾಗೊಳಿಸುತ್ತಿದ್ದಾರೆ. ಇದೀಗ ಕಳೆದ ಮೂರು ತಿಂಗಳಿಂದ ನಮಗೆ ಮಾಸಿಕ ವೇತನ ನೀಡಿಲ್ಲ. ಈ ಕುರಿತು ಸಂಬಂದಿಸಿದ ಗುತ್ತಿಗೆದಾರ ಮತ್ತು ದುಡಿಯುತ್ತಿರುವ ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ. ಇದೀಗ ಮೂರು ತಿಂಗಳ ವೇತನ ಸಿಗದೆ ನಮ್ಮ ಜೀವನ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದೆ. ಜತೆಗೆ ನಮ್ಮನ್ನೆ ನಂಬಿ ಜೀವನ ನಡೆಸುತ್ತಿರುವ ನಮ್ಮ ಅವಲಂಬಿತ ಕುಟುಂಬ ಸದಸ್ಯರು ಉಪವಾಸ ಬೀಳುವಂತಾಗಿದೆ. ಈ ಕುರಿತು ತಾವು ಸಂಬಂಧಿಸಿದ ಅಧಿಕಾರಿ ಗಳಿಗೆ ಮತ್ತು ಸರಕಾರ ಮಟ್ಟದಲ್ಲಿ ನಮಗೆ ನ್ಯಾಯ ಒದಗಿಸುವಂತೆ ಸಚಿವರ ಬಳಿ ಮನವಿ ಮಾಡಿದರು.

ಭರವಸೆ
ಮನವಿ ಮತ್ತು ಅಹವಾಲು ಸ್ವೀಕರಿಸಿದ ಕೇಂದ್ರ ಸಚಿವರು ನೌಕರರ ಸಮಸ್ಯೆ ಕುರಿತು ಅರಿವಿದೆ. ಸಂಬಂಧಿಸಿದ ಅಧಿಕಾರಿಗಳ ಬಳಿ ಮಾತನಾಡಿ, ಶೀಘ್ರದಲ್ಲಿ ಬಾಕಿ ವೇತನ ಪಾವತಿಗೆ ಕ್ರಮ ಜರಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ನೌಕರರಿಗೆ ಭರವಸೆ ನೀಡಿದರು.

ದಕ್ಷಿಣ ಕನ್ನಡ ಟೆಲಿಕಾಂ ಸಲಹಾ ಸಮಿತಿ ಸದಸ್ಯ ವೆಂಕಟ್‌ ದಂಬೆಕೋಡಿ, ಗುತ್ತಿಗೆ ನೌಕರರಾದ ಉದಯಕುಮಾರ ಕೊಲ್ಯ, ಕಿಶೋರ್‌ ಮಡಪ್ಪಾಡಿ, ತೀರ್ಥ ರಾಮ ಬಳ್ಳಡ್ಕ, ಸುಬ್ಬಯ್ಯ ಎ.ಕೆ., ನಿತ್ಯಾನಂದ ಬಿ. ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.