ಭಂಡಾರಿ ಸೇವಾ ಸಮಿತಿಯ 2018ನೇ ವಾರ್ಷಿಕ ಸಮ್ಮಿಲನ


Team Udayavani, Dec 25, 2018, 5:23 PM IST

2312mum08.jpg

ಮುಂಬಯಿ: ಆರೂವರೆ ದಶಕದ ಸೇವೆಗೆ ಗುರು ಹಿರಿಯರ ದೂರದೃಷ್ಟಿಯೇ ಕಾರಣ. ಅವರೆಲ್ಲರ ಶ್ರಮದ ಫಲವಾಗಿ ನಾವೆಲ್ಲರೂ ಒಗ್ಗೂಡಿದ್ದೇವೆ. ಬಂಧುಗಳು ಆರೋಗ್ಯ ಬಗ್ಗೆ ಕಾಳಜಿ ವಹಿಸಿ ವಿಮಾ ಯೋಜನೆ  ಹಾಗೂ ವಿದ್ಯಾನಿಧಿ ರೂಪಿಸಿ ಸಮಾಜವನ್ನು ಸ್ವಾಸ್ಥÂವಾಗಿಸಬೇಕು. ಸಮಲೋಚಿತ ಸೇವೇಯಿಂದ ಸಮಾಜದ ಉದ್ಧಾರ ಸಾಧ್ಯವಾಗುವುದು ಆದುದರಿಂದ ಸಮುದಾಯದ ಏಳಿಗೆಗೆ ಸಂಸ್ಥೆಗಳು ನಿಸ್ವಾರ್ಥವಾಗಿ ಸೇವಾತತ್ಪರಾಗಬೇಕು. ಭಂಡಾರಿ ಬಂಧುಗಳು ಮಾನವೀಯತೆ ಮೆರೆದು ಸಮುದಾಯವನ್ನು ಬಲಪಡಿಸಬೇಕು ಎಂದು ಕರಾವಳಿ ಇಂಟರ್‌ನೆಟ್‌ ಸರ್ವೀಸ್‌ ಆ್ಯಂಡ್‌ ಕೇಬಲ್‌ ಟಿವಿ ನೆಟ್‌ವರ್ಕ್‌ನ ಆಡಳಿತ ನಿರ್ದೇಶಕ ಲಕ್ಷ ¾ಣ್‌ ಕರಾವಳಿ ನುಡಿದರು.

ಭಂಡಾರಿ ಸೇವಾ ಸಮಿತಿ ತನ್ನ 2018ನೇ ವಾರ್ಷಿಕ ಸಮ್ಮಿಲನ 2018 ಅನ್ನು ರವಿವಾರ ಮುಲುಂಡ್‌ ಪಶ್ಚಿಮದ ಸರಸ್ವತಿವಾಡಿಯಲ್ಲಿನ ಶ್ರೀ ಕುಛ… ದೇಶಿಯಾ ಸರಸ್ವತಿ ಮಹಾ ಸಂಸ್ಥಾನ್‌ ಟ್ರಸ್ಟ್‌ ಸಭಾಗೃಹದಲ್ಲಿ ಸಂಭ್ರಮಿಸಿದ್ದು ಸಮ್ಮಿಲನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದು ದೀಪ ಪ್ರಜಲಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಲಕ್ಷ್ಮಣ್‌ ಕರಾವಳಿ ಮಾತನಾಡಿದರು. ಭಂಡಾರಿ ಸೇವಾ ಸಮಿತಿ ಅಧ್ಯಕ್ಷ ನ್ಯಾಯವಾದಿ ಆರ್‌.ಎಂ  ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಸಮಾರಂಭಕ್ಕೆ ಅಖೀಲ ಭಾರತ ತುಳು ಒಕ್ಕೂಟ ಮಂಗಳೂರು ಅಧ್ಯಕ್ಷ ಧರ್ಮಪಾಲ ಯು.ದೇವಾಡಿಗ ದೀಪ ಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿ ಶುಭಶಂಸನೆಗೈದರು.

ಗೌರವ ಅತಿಥಿಗಳಾಗಿ ಕಚ್ಚಾರು ಶ್ರೀ ನಾಗೇಶ್ವರ ದೇವಸ್ಥಾನ ಬಾಕೂìರು ಆಡಳಿತ ಮೊಕ್ತೇಸರ ಕಡಂದಲೆ ಸುರೇಶ್‌ ಎಸ್‌. ಭಂಡಾರಿ, ಭಂಡಾರಿ ಮಹಾ ಮಂಡಲ ಅಧ್ಯಕ್ಷ ಸದಾಶಿವ ಎ. ಭಂಡಾರಿ ಸಕಲೇಶಪುರ, ಶಿವಾಸ್‌ ಹೇರ್‌ ಡಿಸೈನರ್‌ ಪ್ರೈವೇಟ್‌ ಲಿಮಿಟೆಡ್‌ನ‌ ಆಡಳಿತ ನಿರ್ದೇಶಕ ಶಿವರಾಮ ಕೆ.ಭಂಡಾರಿ, ತಿರುಮಲ ಸಮೂಹ ಪುಣೆ ಇದರ ಆಡಳಿತ ನಿರ್ದೇಶಕ ಪ್ರಶಾಂತ್‌ ಕಾರ್ಕಳ್‌ ಪುಣೆ, ಸಮಾಜ ಸೇವಕರಾದ ಜಯಕೃಷ್ಣ ಎ. ಶೆಟ್ಟಿ, ಇಂದ್ರಾಳಿ ದಿವಾಕರ ಶೆಟ್ಟಿ, ಭಂಡಾರಿ ಸೇವಾ ಸಮಿತಿ ಮುಂಬಯಿ ಇದರ ಮಾಜಿ ಅಧ್ಯಕ್ಷರುಗಳಾದ ಮಾಧವ ಆರ್‌. ಭಂಡಾರಿ ಮೂಡಬಿದ್ರೆ, ನ್ಯಾ| ಸುಂದರ್‌ ಜಿ.ಭಂಡಾರಿ, ಬಾಲಕೃಷ್ಣ ಪಿ.ಭಂಡಾರಿ, ನ್ಯಾ| ಶೇಖರ ಎಸ್‌.ಭಂಡಾರಿ, ಮಹಿಳಾ ವಿಭಾಗದ ಮಾಜಿ  ಕಾರ್ಯಾಧ್ಯಕ್ಷೆಯರಾದ ಲಲಿತಾ ವಿ.ಭಂಡಾರಿ, ಶೋಭಾ ಸುರೇಶ್‌ ಭಂಡಾರಿ, ಹಾಲಿ ಕಾರ್ಯಾಧ್ಯಕ್ಷೆ ಶಾಲಿನಿ ಆರ್‌. ಭಂಡಾರಿ ವೇದಿಕೆಯಲ್ಲಿ ಆಸೀನರಾಗಿದ್ದರು. ಅತಿಥಿಗಳನ್ನೊಳಗೊಂಡು ಅಧ್ಯಕ್ಷರು ವಿದ್ಯಾನಿಧಿ ಮನವಿ ಪತ್ರ ಬಿಡುಗಡೆಗೊಳಿಸಿದರು.

ಅತಿಥಿಗಳು ಸಮಾಜದ ಸಾಧಕರಾದ ವಿಠಲ್‌ ಕೆ.ಭಂಡಾರಿ ಭಾಂಡೂಪ್‌ ಮತ್ತು ಪುಷ್ಪಾ ವಿಠಲ್‌, ಟಿ.ಎಂ ಶೇಖರ್‌ ಭಂಡಾರಿ ಮುಲುಂಡ್‌ ಮತ್ತು ಶುಭಾ ಶೇಖರ್‌ ದಂಪತಿಗಳನ್ನು ಹಾಗೂ ವನಿತಾ ಎಸ್‌. ಭಂಡಾರಿ ಅವರನ್ನು  ಸಮ್ಮಾನಿಸಿ ಅಭಿನಂದಿಸಿದರು. ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ಹಾಗೂ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನಿಸಲಾಯಿತು. ಭಂಡಾರಿ ಸಮಾಜ ಸದ್ಯ ಭಾರೀ ಸಾಂಘಿಕತೆಯಲ್ಲಿ ಸಾಗುತ್ತಿದೆ. ಮುಂಬಯಿವಾಸಿ ಭಂಡಾರಿಗಳು ಏಕತೆಗೆ ಸರ್ವರಿಗೂ ಮಾದರಿ ಆಗಿದ್ದಾರೆ. ಮುಂಬಯಿ ಸಂಘದಿಂದ ಭಂಡಾರಿ ಸಮುದಾಯ ಜಾಗತಿಕವಾಗಿ ಪ್ರಸಿದ್ಧಿಗೆ ಬಂದಿದೆ ಎನ್ನಲು ಅಭಿಮಾನವೆನಿಸುತ್ತಿದೆ. – ಸದಾಶಿವ ಎ. ಭಂಡಾರಿ ಸಕಲೇಶಪುರ, ಅಧ್ಯಕ್ಷರು, ಭಂಡಾರಿ ಮಹಾ ಮಂಡಲ

ತುಳುವರು ಅಂದರೆ ಏಕತೆಗೆ ಮತ್ತು ಸಂಸ್ಕೃತಿಗೆ ಹೊಂದಿಕೊಳ್ಳುವವರು ಎಂದರ್ಥ. ಮುಂಬಯಿಯ ಎಲ್ಲಾ ತುಳು ಕನ್ನಡಿಗರು ಸಂಘಟನಾ ಚತುರರು. ಈ ಮಧ್ಯೆ ನಮ್ಮ ಭಂಡಾರಿ ಸಂಘವು ಒಳಗೊಂಡಿದೆ. ಇಂದಿಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಸೇರಿದ ಸ್ವಸಮಾಜದ ಬಂಧುಗಳ ಏಕತೆಯಿಂದ ಸಮುದಾಯದ ಅಭಿವೃದ್ಧಿ  ಆಗುವಂತೆ ಭಾಸವಾಗುತ್ತದೆ. ಇಂತಹ ಒಗ್ಗಟ್ಟು ಇನ್ನಷ್ಟು ಬೆಳೆಯಲಿ. – ಸುರೇಶ್‌ ಭಂಡಾರಿ , ಆಡಳಿತ ಮೊಕ್ತೇಸರರು, ಕಚ್ಚಾರು ಶ್ರೀ ನಾಗೇಶ್ವರ ದೇವಸ್ಥಾನ ಬಾಕೂìರುಬೆಳಗ್ಗೆ ಉಪಸ್ಥಿತ ಪದಾಧಿಕಾರಿಗಳನ್ನೊಗೊಂಡು ಅಧ್ಯಕ್ಷರು ದೀಪ ಪ್ರಜ್ವಲಿಸಿ  ವಾರ್ಷಿಕ  ಸಮ್ಮಿಲನಕ್ಕೆ ಚಾಲನೆ ನೀಡಿದರು. ಬಳಿಕ ರಂಗೋಲಿ, ಚಿತ್ರಕಲಾ ಸ್ಪರ್ಧೆ ನಡೆಸಲ್ಪಟ್ಟಿತು. ಸಂಸ್ಥೆಯ ಸದಸ್ಯರು, ಮಹಿಳೆಯರು ಮತ್ತು ಮಕ್ಕಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಾಗೂ ಹರೀಶ್‌ ಶೆಟ್ಟಿ ಎರ್ಮಾಳ್‌ ನಿರ್ದೇಶನದಲ್ಲಿ ಪನ್ವಿ  ಕ್ರಿಯೇಷನ್ಸ್‌ ಸಂಸ್ಥೆ ಸಂಗೀತ, ನೃತ್ಯಗಳ ಮೇಲೈಕೆಯ ಸಂಗೀತ ರಸಮಂಜರಿ ಕಾರ್ಯಕ್ರಮ ಪ್ರಸ್ತುತ ಪಡಿಸಿತು.

ಗಾಯತ್ರಿ ನಾರಾಯಣ ಭಂಡಾರಿ ಪ್ರಾರ್ಥನೆ ಗೈದರು. ಗೌರವ ಪ್ರಧಾನ ಕಾರ್ಯದರ್ಶಿ ಶಶಿಧರ ಡಿ. ಭಂಡಾರಿ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಉಪಾಧ್ಯಕ್ಷರುಗಳಾದ ಪ್ರಭಾಕರ್‌ ಪಿ.ಭಂಡಾರಿ ಮತ್ತು ಪುರುಷೋತ್ತಮ ಜಿ.ಭಂಡಾರಿ, ಕು| ಕ್ಷಮಾ ಆರ್‌.ಭಂಡಾರಿ ಮತ್ತು ಪಲ್ಲವಿ ಆರ್‌.ಭಂಡಾರಿ ಅತಿಥಿಗಳನ್ನು ಪರಿಚಯಿಸಿದರು. ಗೌರವ ಕೋಶಾಧಿಕಾರಿ ಕರುಣಾಕರ ಎಸ್‌.ಭಂಡಾರಿ,  ಜೊತೆ ಕಾರ್ಯದರ್ಶಿ ನ್ಯಾ| ಶಾಂತರಾಜ್‌ ಡಿ.ಭಂಡಾರಿ, ಜೊತೆ ಕೋಶಾಧಿಕಾರಿಗಳಾದ ಪ್ರಕಾಶ್‌ ಕೆ. ಭಂಡಾರಿ  ಮತ್ತು ಸುಭಾಶ್‌ ಜಿ.ಭಂಡಾರಿ, ಮಹಿಳಾ ಕಾರ್ಯಾದರ್ಶಿ ಜಯಸುಧಾ ಟಿ.ಭಂಡಾರಿ ಮತ್ತಿತರ ಪದಾಧಿಕಾರಿಗಳು ಅತಿಥಿಗಳಿಗೆ ಪುಷ್ಪಗುತ್ಛಗಳನ್ನು ನೀಡಿ ಗೌರವಿಸಿದರು. ಜಯಶೀಲ ಭಂಡಾರಿ ಮತ್ತು ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ರೇಖಾ ಎ.ಭಂಡಾರಿ ಮತ್ತು ಸಮ್ಮಾನಿತರನ್ನು ಪರಿಚಯಿಸಿದರು. ಸರಿತಾ ಕೆ.ಬಂಗೇರ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಪುರುಷೋತ್ತಮ ಜಿ. ಭಂಡಾರಿ ಸಭಾ ಕಾರ್ಯಕ್ರಮ ನಿರ್ವಹಿಸಿದರು. ಜೊತೆ ಕಾರ್ಯದರ್ಶಿ ರಂಜಿತ್‌ ಎಸ್‌.ಭಂಡಾರಿ ವಂದನಾರ್ಪಣೆಗೈದರು. 

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.