ಅಂಜನಾದ್ರಿ ಬೆಟ್ಟಕ್ಕೆ ಸಚಿವ ಗೋಯೆಲ್ ಭೇಟಿ
Team Udayavani, Dec 26, 2018, 7:20 AM IST
ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಭೇಟಿ ನೀಡಿ, ಆಂಜನೇಯ ಸ್ವಾಮಿಯ ದರ್ಶನ ಪಡೆದರು. ಕೇಂದ್ರ ಸಚಿವರ ಜತೆ ಕಾಂಗ್ರೆಸ್ ಶಾಸಕ ಆನಂದ ಸಿಂಗ್ ಕುಟುಂಬ ವರ್ಗದವರೂ ಅಂಜನಾದ್ರಿ ಕಿಷ್ಕಿಂದಾ ಪ್ರದೇಶಕ್ಕೆ ಭೇಟಿ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆ ವೇಳೆ ಹೊಸಪೇಟೆ (ವಿಜಯನಗರ) ಕಾಂಗ್ರೆಸ್ ಶಾಸಕ ಆನಂದಸಿಂಗ್ ಅವರಿಗೆ ಸಚಿವ ಸ್ಥಾನ ಲಭಿಸದಿರುವುದರಿಂದ ಆನಂದಸಿಂಗ್ ಮುನಿಸಿಕೊಂಡಿದ್ದು, ಬಿಜೆಪಿ ಸಖ್ಯ ಬೆಳೆಸುವ ಅನುಮಾನವಿದೆ. ರೈಲ್ವೆ ಸಚಿವ ಗೋಯೆಲ್ ಜತೆ ಆನಂದ ಸಿಂಗ್ ಕುಟುಂಬ ಕಾಣಿಸಿಕೊಂಡಿರುವುದು ಈ ಅನುಮಾನಕ್ಕೆ ಪುಷ್ಟಿ ನೀಡಿದೆ.
ಶಾಸಕ ಪರಣ್ಣ ಮುನವಳ್ಳಿ ರೈಲ್ವೆ ಸಚಿವರನ್ನು ಸ್ವಾಗತಿಸಿದರು. ಈ ವೇಳೆ, ಸುದ್ದಿಗಾರರೊಂದಿಗೆ ಮಾತನಾಡಿದ ಗೋಯೆಲ್, ಕೇಂದ್ರದ ಮಹತ್ವಾಕಾಂಕ್ಷೆಯ ಶ್ರೀರಾಮ ಸರ್ಕ್ನೂಟ್ ಯೋಜನೆಯಲ್ಲಿ ಹಂಪಿ ಕಿಷ್ಕಿಂದಾ ಅಂಜನಾದ್ರಿ ಪರ್ವತ ಪ್ರದೇಶ ಸೇರ್ಪಡೆಯಾಗಿದ್ದು, ಮುಂಬರುವ ದಿನಗಳಲ್ಲಿ ಅಂಜನಾದ್ರಿ ಪರ್ವತ, ಪಂಪಾ ಸರೋವರ ಪ್ರದೇಶಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ