ಬೆಳಕಿನ ಅನಂತರ ಕದ್ರಿ ಪಾರ್ಕ್‌ನಲ್ಲಿ ಕೈಕೊಟ್ಟ ಮೈಕ್‌ !


Team Udayavani, Dec 26, 2018, 10:58 AM IST

26-december-3.gif

ಮಹಾನಗರ : ಕರಾವಳಿ ಉತ್ಸವದಂಗವಾಗಿ ಸೋಮವಾರ ಕರಾವಳಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವಿದ್ಯುತ್‌ ಕೈಕೊಟ್ಟರೆ, ಮಂಗಳವಾರ ಸಂಜೆ ಮತ್ತೆ ಕದ್ರಿ ಪಾರ್ಕ್‌ನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಸಮಸ್ಯೆಯಿಂದಾಗಿ ಕಲಾವಿದರು, ಪ್ರೇಕ್ಷಕರು ಕಿರಿಕಿರಿ ಅನುಭವಿಸಿದ್ದಾರೆ. ಕರಾವಳಿ ಉತ್ಸವ ಉದ್ಘಾಟನೆಗೊಂಡು ಐದು ದಿನ ಕಳೆದಿದ್ದು, ಮೆರುಗು ನೀಡಬೇಕಿದ್ದ ಉತ್ಸವಕ್ಕೆ ಈ ಬಾರಿ ವಿಘ್ನಗಳೇ ಎದುರಾಗುತ್ತಿರುವುದು ವಿಪರ್ಯಾಸ.

ವೇದಿಕೆ ಮೇಲೇರಿ ಕುಳಿತ ಕಲಾಸಕ್ತರು !
ಕದ್ರಿ ಪಾರ್ಕ್‌ ವೇದಿಕೆಯಲ್ಲಿ ಮಂಗಳವಾರ ನಡೆದ ವಿದ್ವಾನ್‌ ಎಸ್‌. ಶಂಕರ್‌ ಅವರ ಕರ್ನಾಟಿಕ್‌ ಶಾಸ್ತ್ರೀಯ ಸಂಗೀತ ಕಾರ್ಯಕ್ರಮದಲ್ಲಿ ಮೈಕ್‌ ಕೈಕೊಟ್ಟಿತ್ತು. ಇದರಿಂದಾಗಿ ಸೇರಿದ್ದ ಪ್ರೇಕ್ಷಕರಿಗೆ ನಿರಾಸೆ ಉಂಟಾಯಿತು. ಕಾರ್ಯಕ್ರಮದ ಆಯೋಜಕರು ಧ್ವನಿವರ್ಧಕವನ್ನು ಸರಿಪಡಿಸುವುದಕ್ಕೆ ಎಷ್ಟೇ ಪ್ರಯತ್ನ ಪಟ್ಟಿದ್ದರೂ ತತ್‌ಕ್ಷಣಕ್ಕೆ ಅದು ಸರಿ ಹೋಗಿರಲಿಲ್ಲ. ಹೀಗಾಗಿ, ವೇದಿಕೆಯಲ್ಲಿದ್ದ ಸಂಗೀತ ಕಲಾವಿದರು, ಧ್ವನಿವರ್ಧಕದ ಸಹಾಯವಿಲ್ಲದೆ, ಹಾಡುಗಾರಿಕೆಯನ್ನು ಮುಂದುವರಿಸಿದ್ದರು. ಇತ್ತ ಪ್ರೇಕ್ಷಕರಿಗೂ ಮೈಕ್‌ನ ಕೊರತೆಯಿಂದಾಗಿ ಹಾಡುಗಾರಿಕೆ ಕೇಳಿಸುತ್ತಿರಲಿಲ್ಲ. ಕೊನೆಗೆ ಕೆಲವು ಕಲಾಸಕ್ತರು ವೇದಿಕೆಯ ಮೇಲೆಯೇ ಒಂದು ಬದಿಯಲ್ಲಿ ಬಂದು ಕುಳಿತುಕೊಂಡು ಸಂಗೀತ ಕೇಳುತ್ತಿದ್ದ ದೃಶ್ಯ ಕಂಡುಬಂತು. ಈ ರೀತಿ ಸುಮಾರು ಅರ್ಧತಾಸು ಮೈಕ್‌ ಇಲ್ಲದೆ ಸಂಗೀತ ಕಲಾವಿದರು ಹಾಡುಗಾರಿಕೆ ನಡೆಸಿದ್ದು, ಅನಂತರ ಸಂಘಟಕರು ಧ್ವನಿವರ್ಧಕ ಸರಿಪಡಿಸಿದರು.

ಬೈಕ್‌ ಹೆಡ್‌ಲೈಟ್‌, ಮೊಬೈಲ್‌ ಟಾರ್ಚ್‌
ಸೋಮವಾರ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮೈಮ್‌ ರಾಮ್‌ ದಾಸ್‌ ಮತ್ತು ತಂಡದವರಿಂದ ಜಾನಪದ ಹಾಡಿನ ಗಾಯನವು ನಡೆಯುತ್ತಿತ್ತು. ಅನೇಕ ಮಂದಿ ಪ್ರೇಕ್ಷಕರು ಸಂಗೀತ ವೀಕ್ಷಿಸುತ್ತಿದ್ದರು. ಇದೇ ವೇಳೆ ಜನರೇಟರ್‌ ಕೈಕೊಟ್ಟ ಕಾರಣದಿಂದಾಗಿ ಸುಮಾರು 20 ನಿಮಿಷಗಳ ಕಾಲ ವೇದಿಕೆಯಲ್ಲಿ ವಿದ್ಯುತ್‌ ವ್ಯವಸ್ಥೆ ಇರಲಿಲ್ಲ. ಆ ವೇಳೆ ತಂಡದ ಸದಸ್ಯರೊಬ್ಬರು ಬೈಕ್‌ ಹೆಡ್‌ಲೈಟ್‌ ಮತ್ತು ಮೊಬೈಲ್‌ ಟಾರ್ಚ್‌ ವೇದಿಕೆಯ ಮೇಲೆ ಬೀರಿದ್ದರು. ಬಳಿಕ ಪ್ರೇಕ್ಷಕರ ಒತ್ತಾಯದ ಮೇರೆಗೆ ಸಂಗೀತ ಕಾರ್ಯಕ್ರಮ ಆರಂಭಗೊಂಡಿತ್ತು. ಕಲಾ ವಿದರು ಸುಮಾರು ಸುಮಾರು ಆರೇಳು ಹಾಡುಗಳನ್ನು ವಿದ್ಯುತ್‌ ಸಂಪರ್ಕ ವಿಲ್ಲದೆಯೇ ಹಾಡಿದರು. ಜನರೇಟರ್‌ ಸರಿಪಡಿಸಿದ ಬಳಿಕ ವೇದಿಕೆಯಲ್ಲಿ ಕಾರ್ಯಕ್ರಮ ಸುಗಮವಾಗಿ ಸಾಗಿತ್ತು.

ಇನ್ನು, ಕಾರ್ಯಕ್ರಮದ ಮೊದಲ ದಿನವೇ ಉದ್ಘಾಟನ ಸಮಾರಂಭ ವೇದಿಕೆಯಲ್ಲಿ ಪ್ರತಿಭಟನೆ ನಡೆದಿತ್ತು. ಎಂಆರ್‌ಪಿಎಲ್‌ ಹೋರಾಟಗಾರರ ತಂಡವೊಂದು ‘ಕರಾವಳಿ ಉಳಿಸಿ ಎಂಆರ್‌ಪಿಎಲ್‌ ವಿಸ್ತರಣೆ ನಿಲ್ಲಿಸಿ’ ಎಂಬ ಪೋಸ್ಟರ್‌ ಪ್ರದರ್ಶಿಸಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಿತ್ತು. ಇನ್ನು ಈ ಬಾರಿ, ಉತ್ಸವದ ಪ್ರಯುಕ್ತ ನಡೆಯುವ ವಸ್ತು ಪ್ರದರ್ಶನದಲ್ಲಿಯೂ ಕೆಲವು ಮಳಿಗೆಗಳು ಆರಂಭವಾಗದೆ ಸಾರ್ವಜನಿಕರಲ್ಲಿ ನಿರಾಶೆ ಮೂಡಿಸಿತ್ತು.

ತತ್‌ಕ್ಷಣ ಎಲ್ಲ ಮಳಿಗೆ ತೆರೆಯಿರಿ
ಕರಾವಳಿ ಉತ್ಸವ ಮೈದಾನದಲ್ಲಿ ಕಾರಣಾಂತರಗಳಿಂದ ಕೆಲವೊಂದು ವಸ್ತು ಪ್ರದರ್ಶನದ ಮಳಿಗೆಗಳು ತೆರದಿರಲಿಲ್ಲ. ಈ ಬಗ್ಗೆ ಸಂಬಂಧಪಟ್ಟವರ ಜತೆ ಈಗಾಗಲೇ ಮಾತನಾಡಿದ್ದು, ತತ್‌ಕ್ಷಣ ಎಲ್ಲ ಮಳಿಗೆಗಳನ್ನು ಗ್ರಾಹಕರ ಉಪಯೋಗಕ್ಕೆ ತೆರೆಯುವಂತೆ ತಿಳಿಸಿದ್ದೇನೆ ಎಂದು ಮನಪಾ ಮೇಯರ್‌ ಭಾಸ್ಕರ್‌ ಕೆ. ತಿಳಿಸಿದ್ದಾರೆ.

 ಸರಿಪಡಿಸಲು ಸೂಚಿಸಿರುವೆ
ಕರಾವಳಿ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುತ್ತಿಗೆದಾರರಿಂದ ಉಂಟಾಗಿರುವ ತಾಂತ್ರಿಕ ಸಮಸ್ಯೆ ನನ್ನ ಗಮನಕ್ಕೂ ಬಂದಿದೆ. ಅದನ್ನು ಸರಿಪಡಿಸುವಂತೆ ಅವರಿಗೆ ಸೂಚಿಸಲಾಗಿದೆ.
– ಯು.ಟಿ. ಖಾದರ್‌,
ಜಿಲ್ಲಾ ಉಸ್ತುವಾರಿ ಸಚಿವ 

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.