ರಾಮಮಂದಿರ ನಿರ್ಮಾಣ: ಪ್ರಯಾಗ ಧರ್ಮಸಂಸದ್‌ ನಿರ್ಣಾಯಕ: ಕೇಶವ ಹೆಗಡೆ 


Team Udayavani, Dec 26, 2018, 12:08 PM IST

251218astro08.jpg

ಉಡುಪಿ: ಪ್ರಯಾಗದಲ್ಲಿ (ಅಲಹಾಬಾದ್‌) ಜ. 31 ಮತ್ತು ಫೆ. 1ರಂದು ನಡೆಯುವ “ಧರ್ಮಸಂಸದ್‌’ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿ ನಿರ್ಣಾಯಕವಾಗಲಿದೆ. ಕೇಂದ್ರ ಸರಕಾರ ಅಷ್ಟರೊಳಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್‌ ದಕ್ಷಿಣ ಮಧ್ಯ ಕ್ಷೇತ್ರದ ಸಂಘಟನ ಕಾರ್ಯದರ್ಶಿ ಕೇಶವ ಹೆಗಡೆ ಹೇಳಿದರು.

ರಾಮಮಂದಿರ ನಿರ್ಮಾಣಕ್ಕಾಗಿ ಮಂಗಳವಾರ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಕಾತ್ಯಾಯಿನಿ ಕಲ್ಯಾಣ ಮಂಟಪದಲ್ಲಿ ಜರಗಿದ ಸಾಮೂಹಿಕ ರಾಮತಾರಕ ಮಂತ್ರ ಜಪ ಪಠಣ ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಹಿಂದಿನ ಯುಪಿಎ ಸರಕಾರದ ಹಿಂದೂ ವಿರೋಧಿ ನೀತಿ, ಭ್ರಷ್ಟಾಚಾರ, ದೇಶದ್ರೋಹಿಗಳಿಗೆ ರಕ್ಷಣೆ ಮೊದಲಾದವನ್ನು ನೋಡಿ ಬೇಸತ್ತಿದ್ದ ಜನತೆ ಹಿಂದೂ ಧರ್ಮದ ಪರ ಇರುವ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಅಧಿಕಾರಕ್ಕೇರಿಸಿದ್ದಾರೆ. ಆದರೆ ರಾಮಮಂದಿರ ವಿಚಾರದ ಕುರಿತು ಇನ್ನೂ ಕೂಡ ಕೇಂದ್ರ ಸರಕಾರ ನಿರ್ಣಯ ತೆಗೆದುಕೊಂಡಿಲ್ಲ. ಮುಂದಿನ ಚುನಾವಣೆ ಕೂಡ ನಿರ್ಣಾಯಕ ವಾಗಲಿದೆ. ಕೆಟ್ಟ ಪರಿಣಾಮವೂ ಬೀಳಬಹುದು ಎಂದು ಸಂತರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ಕೇಂದ್ರ ಸರಕಾರ ಎಚ್ಚೆತ್ತುಕೊಂಡು ಸೂಕ್ತ ಕಾಯಿದೆ ಅಥವಾ ಅಧ್ಯಾದೇಶವನ್ನು ತರಬೇಕು. ಮೋದಿ ಸರಕಾರ ದೇಶಕ್ಕಾಗಿ ಅನೇಕ ಉತ್ತಮ ಕೆಲಸಗಳನ್ನು ಮಾಡಿದೆ. 
ಆದರೆ ರಾಮಮಂದಿರ ನಿರ್ಮಾಣ ಮಾಡದೆ ವಿಶ್ವಾಸಕ್ಕೆ ಧಕ್ಕೆ ತಂದಿದೆ ಎಂದು ಕೇಶವ ಹೆಗಡೆ ಹೇಳಿದರು.

ರಾಮ ವಿರೋಧಿಗಳಿಗೆ ಉತ್ತರಿಸೋಣ
ಸಾಹಿತಿ ಬ್ರಹ್ಮಶ್ರೀ ಸೂರಾಲು ದೇವಿಪ್ರಸಾದ್‌ ತಂತ್ರಿ ಅವರು ಮಾತನಾಡಿ “ಭಾರತೀಯರ ಸಂಯಮವನ್ನು ದೌರ್ಬಲ್ಯ ಎಂದು ಭಾವಿಸಿ ನಿರಂತರವಾಗಿ ಆಕ್ರಮಣ ನಡೆಸಲಾಗಿದೆ. ರಾಮನ ಬಗ್ಗೆಯೂ ಕೀಳಾಗಿ ಮಾತನಾಡಲಾಗುತ್ತಿದೆ. ಇಂತಹವರಿಗೆ ಸಮರ್ಪಕ ಉತ್ತರ ನೀಡುವ ಅಗತ್ಯವಿದೆ. ನಾನು ಈ ಕೆಲಸದಲ್ಲಿ ಈಗಾಗಲೇ ತೊಡಗಿಸಿಕೊಂಡಿದ್ದು ಮುಂದೆ ಹಸ್ತಿನಾವತಿಯಿಂದ ಅಯೋಧ್ಯೆವರೆಗೆ ಪರಿಕ್ರಮ ಮಾಡಿ ಮತ್ತಷ್ಟು ಅಧ್ಯಯನ ನಡೆಸಲಿದ್ದೇನೆ. ಮುಂದೆ ಭಾರತದಲ್ಲಿ ಯಾರೂ ರಾಮನ ಚರಿತ್ರೆ ಬಗ್ಗೆ ಪ್ರಶ್ನೆ ಮಾಡಬಾರದು. ಮಾಡಿದರೂ ಅದಕ್ಕೆ ಸ್ಪಷ್ಟ ಉತ್ತರ ನೀಡುವಂತಾಗಬೇಕು. ಇದಕ್ಕೆ ಈ ಅಧ್ಯಯನವೂ ನೆರವಾಗಲಿದೆ ಎಂದು ಹೇಳಿದರು.

ತಾರಕವೆಂದರೆ ತಡೆಗಳನ್ನು ದೂರ ಮಾಡಿ “ಉದ್ಧರಿಸುವುದು’ ಎಂದರ್ಥ. ರಾಮತಾರಕ ಮಂತ್ರ ರಾಮ ಮಂದಿರಕ್ಕೆ ಇರುವ ಅಡ್ಡಿ ಆತಂಕಗಳನ್ನು ದೂರ ಮಾಡಲಿದೆ ಎಂದು ದೇವಿಪ್ರಸಾದ್‌ ತಂತ್ರಿ ಹೇಳಿದರು. ವಿಹಿಂಪ ಜಿಲ್ಲಾ ಉಪಾಧ್ಯಕ್ಷ ನಾರಾಯಣ ಮಣಿಯಾನಿ ಪ್ರಸ್ತಾವನೆಗೈದರು. ಉಪಾಧ್ಯಕ್ಷೆ ಸುಪ್ರಭಾ ಆಚಾರ್ಯ, ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌, ಬಜರಂಗದಳ ಪ್ರಾಂತ ಸಂಚಾಲಕ ದಿನೇಶ್‌ ಮೆಂಡನ್‌ ಉಪಸ್ಥಿತರಿದ್ದರು. ವಿಹಿಂಪ ಜಿಲ್ಲಾ ಕಾರ್ಯದರ್ಶಿ ಪ್ರಮೋದ್‌ ಮಂದಾರ್ತಿ ಸ್ವಾಗತಿಸಿದರು. ಜಯಪ್ರಕಾಶ್‌ ಕಾರ್ಯಕ್ರಮ ನಿರ್ವಹಿಸಿದರು.

ಅಯೋಧ್ಯೆಯಲ್ಲಿಯೇ ಆಗಬೇಕು
ರಾಮ ಹುಟ್ಟಿದ ಸ್ಥಳ ಅಯೋಧ್ಯೆ. ಹಾಗಾಗಿ ಅಲ್ಲಿಯೇ ಭವ್ಯ ರಾಮಮಂದಿರ ನಿರ್ಮಾಣವಾಗ ಬೇಕೇ ಹೊರತು ಬೇರೆಡೆ ಬೇಡ. ಸೋನಿಯಾ ಗಾಂಧಿಯವರ ಜನ್ಮಸ್ಥಳ ಇಟೆಲಿ ಇರುವುದನ್ನು ಹೇಗೆ ಬದಲಾಯಿಸಲಾಗದೋ ಅಂತೆಯೇ ರಾಮನ ಜನ್ಮಸ್ಥಳವನ್ನು ಕೂಡ ಬದಲಿಸಲಾಗದು ಎಂದು ಕೇಶವ ಹೆಗಡೆ ಹೇಳಿದರು. ರಾಮಮಂದಿರದ ಅನಂತರ ಮಥುರೆಯಲ್ಲಿ ಕೃಷ್ಣನಿಗೆ, ಕಾಶಿಯಲ್ಲಿ ವಿಶ್ವನಾಥನಿಗೆ ಮಂದಿರ ನಿರ್ಮಾಣ ವಾಗಬೇಕಿದೆ. ಅಲ್ಲಿಯವರೆಗೆ ಹಿಂದೂ ಜಾಗೃತಿ ಅಭಿಯಾನ ಮುಂದುವರಿ ಯಲಿದೆ ಎಂದರು.

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.