ಸರ್ಕಾರಿ ಗೌರವದೊಂದಿಗೆ ಸೂಲಗಿತ್ತಿ ನರಸಮ್ಮ ಅಂತ್ಯಸಂಸ್ಕಾರ
Team Udayavani, Dec 27, 2018, 7:24 AM IST
ತುಮಕೂರು: ಸೂಲಗಿತ್ತಿ ಡಾ.ನರಸಮ್ಮ (97) ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರ ಸಮೀಪದ ಗಂಗಸಂದ್ರದಲ್ಲಿ ಬುಧವಾರ ಸಂಜೆ ನೆರವೇರಿತು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾದ ನರಸಮ್ಮ ಅವರ ಪಾರ್ಥಿವ
ಶರೀರವನ್ನು ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸಚಿವರು, ಶಾಸಕರು, ಸಂಸದರು,
ಮಠಾಧೀಶರು ಸೇರಿದಂತೆ ಗಣ್ಯರು ಆಗಮಿಸಿ ಅವರ ಅಂತಿಮ ದರ್ಶನ ಪಡೆದರು. ಈ ಮಧ್ಯೆ, ಅಂತ್ಯಸಂಸ್ಕಾರಕ್ಕೆ ಜಿಲ್ಲಾಡಳಿತ
ನಗರ ಸಮೀಪವೇ ಎರಡು ಮೂರು ಕಡೆ ಜಾಗ ತೋರಿಸಿತಾದರೂ ಕುಟುಂಬ ಸದಸ್ಯರು ಒಪ್ಪಲಿಲ್ಲ. ಹೀಗಾಗಿ, ಬುಧವಾರ ಮಧ್ಯಾಹ್ನ 2 ಗಂಟೆಯಾದರೂ ಜಾಗದ ಸಮಸ್ಯೆ ಬಗೆಹರಿಯಲಿಲ್ಲ. ನರಸಮ್ಮ ಕುಟುಂಬ ಸದಸ್ಯರು ನಗರದ ಹತ್ತಿರದಲ್ಲಿಯೇ ಅಂತಿಮ
ಸಂಸ್ಕಾರ ಮಾಡಬೇಕು. ಇದಕ್ಕಾಗಿ ಒಂದು ಎಕರೆ ಜಾಗ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಕೊನೆಗೆ ನಗರ ಸಮೀಪದ ಗಂಗಸಂದ್ರ ಸ್ಮಶಾನದ ಸಮೀಪ ಒಂದು ಎಕರೆ ಜಾಗ ನೀಡಲು ಜಿಲ್ಲಾಡಳಿತ ನಿರ್ಧರಿಸಿತು. ಕುಟುಂಬದವರು ಒಪ್ಪಿಗೆ ಸೂಚಿಸಿದ್ದರಿಂದ ಸರಕಾರಿ ಗೌರವಗಳೊಂದಿಗೆ ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ