ಬಸ್ಪಲ್ಟಿ:ಪಿಎಂ ರ್ಯಾಲಿಗೆ ಹೋಗುತ್ತಿದ್ದ 35 ವಿದ್ಯಾರ್ಥಿಗಳಿಗೆ ಗಾಯ
Team Udayavani, Dec 27, 2018, 2:49 PM IST
ಧರ್ಮಶಾಲಾ (ಹಿಮಾಚಲ ಪ್ರದೇಶ): ಇಲ್ಲಿ ಗುರುವಾರ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಗೆ ತೆರಳುತ್ತಿದ್ದ ಬಸ್ಸೊಂದು ಪಲ್ಟಿಯಾಗಿದ್ದು 35 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾಂಗ್ರಾದ ಜವಾಲಿ ಎಂಬಲ್ಲಿ ಬಸ್ ಸ್ಕಿಡ್ ಆಗಿ ಗುಡ್ಡದ ಬದಿಯಲ್ಲಿ ಪಲ್ಟಿಯಾಗಿ ಅವಘಡ ಸಂಭವಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ಐವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಜನ್ ಆಭಾರ್ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ತೆರಳುತ್ತಿದ್ದರು.
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸರ್ಕಾರ 1 ವರ್ಷ ಪೂರ್ಣ ಗೊಳಿಸಿದ ಸಂಭ್ರಮದಲ್ಲಿ ಈ ರ್ಯಾಲಿ ಆಯೋಜಿಸಲಾಗಿದೆ.