ಅನಂತು-ನುಸ್ರತ್‌ ಪ್ರೇಮ್‌ ಕಹಾನಿ


Team Udayavani, Dec 28, 2018, 6:00 AM IST

49.jpg

ತಮ್ಮ ಹಿಂದಿನ ಎರಡು ಚಿತ್ರಗಳಲ್ಲಿ ಯಂಗ್‌ ಆ್ಯಂಡ್‌ ಎನರ್ಜಿಟಿಕ್‌ ಕಾಲೇಜ್‌ ಹುಡುಗನಾಗಿ ಕಾಣಿಸಿಕೊಂಡಿದ್ದ ವಿನಯ್‌ ರಾಜಕುಮಾರ್‌, ಈ ಚಿತ್ರದಲ್ಲಿ ಕೊಂಚ ಸೀರಿಯಸ್‌ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು “ಅನಂತು ವರ್ಸಸ್‌ ನುಸ್ರತ್‌’ ಚಿತ್ರದಲ್ಲಿ. ಚಿತ್ರ ಇಂದು ತೆರೆಕಾಣುತ್ತಿದೆ. ಅನಂತ ಕೃಷ್ಣ ಕ್ರಮಧಾರಿತ್ತಾಯ ಎನ್ನುವ ಹೆಸರಿನ ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬದ ಹುಡುಗನಾಗಿ, ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಬಹುತೇಕ ಸನ್ನಿವೇಶಗಳು ಭಾವನಾತ್ಮಕವಾಗಿ ಸಾಗುವುದರಿಂದ, ವಿನಯ್‌ ತಮ್ಮ ಮೈಂಡ್‌ ಗೇಮ್‌ನಲ್ಲಿ ಪ್ರೇಕ್ಷಕರನ್ನು ಹಿಡಿದು ಕೂರಿಸುತ್ತಾರಂತೆ. 

“ಅನಂತು ವರ್ಸಸ್‌ ನುಸ್ರತ್‌’ ಚಿತ್ರದಲ್ಲಿ ನಾಯಕಿಯಾಗಿ ಅನಿವಾಸಿ ಕನ್ನಡತಿ ಲತಾ ಹೆಗಡೆ, ವಿನಯ್‌ ರಾಜಕುಮಾರ್‌ ಅವರಿಗೆ ಜೋಡಿಯಾಗಿದ್ದರೆ. ಈ ಹಿಂದೆ “ಅತಿರಥ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ಲತಾಗೆ ಇದು ಎರಡನೇ ಕನ್ನಡದ ಚಿತ್ರ. ಈ ಚಿತ್ರದಲ್ಲಿ ಲತಾ ಹೆಗಡೆ ನುಸ್ರತ್‌ ಎನ್ನುವ ಹೆಸರಿನ ಸಂಪ್ರದಾಯಸ್ಥ ಮುಸ್ಲಿಂ ಹುಡುಗಿಯಾಗಿ ಜೊತೆಗೆ ಜಡ್ಜ್ ಆಗಿ ಕಾಣಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಕೇವಲ ಬೋಲ್ಡ್‌ ಆ್ಯಂಡ್‌ ಗ್ಲಾಮರಸ್‌ ಪಾತ್ರಗಳಲ್ಲಿ ಮಿಂಚಿದ್ದ ಲತಾಗೆ ಈ ಚಿತ್ರದಲ್ಲಿ ಅಭಿನಯಕ್ಕೂ ಸಾಕಷ್ಟು ಸ್ಕೋಪ್‌ ಇದೆಯಂತೆ. 

“ಅನಂತು ವರ್ಸಸ್‌ ನುಸ್ರತ್‌’ ಚಿತ್ರ ಪಕ್ಕಾ ಇಂದಿನ ಕಾಲಮಾನಕ್ಕೆ ಹೊಂದಿಕೆಯಾಗುವ ಕಥೆ ಎನ್ನುವುದು ಚಿತ್ರತಂಡದ ಒಕ್ಕೊರಲ ಅಭಿಪ್ರಾಯ. ಮೂವತ್ತೈದು – ನಲವತ್ತು ವರ್ಷಗಳ ಹಿಂದೆ ಬೆಂಗಳೂರಿನಂತಹ ಮಹಾನಗರಗಳಲ್ಲಿ ವಿವಾಹ ವಿಚ್ಛೇದನ ಪ್ರಕರಣಗಳ ಸಂಖ್ಯೆ ಅತಿ ವಿರಳವಾಗಿತ್ತು. ಒಂದು ವರ್ಷಕ್ಕೆ ಹೆಚ್ಚೆಂದರೆ, ಐನೂರು ಪ್ರಕರಣಗಳು ಕೋರ್ಟ್‌ನಲ್ಲಿ ದಾಖಲಾಗುತ್ತಿದ್ದವು. ಆದರೆ ಇಂದು ದಿನವೊಂದಕ್ಕೆ ಇದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿಚ್ಛೇದನ ಪ್ರಕರಣಗಳು ದಾಖಲಾಗುತ್ತಿವೆ. ವಿವಾಹ ವಿಚ್ಛೇದನ ಪ್ರಕರಣಗಳ ವಿಲೇವಾರಿಗಾಗಿಯೇ ಪ್ರತ್ಯೇಕ ಕೌಟುಂಬಿಕ ನ್ಯಾಯಾಲಯಗಳ ಸ್ಥಾಪನೆಯಾಗಿದೆ. ಇದು ಹೀಗೆ ಮುಂದುವರೆಯುತ್ತಾ ಹೋದರೆ ಭವಿಷ್ಯದಲ್ಲಿ ಏನಾಗಬಹುದು? ಇಂಥದ್ದೊಂದು ವಿಷಯವನ್ನು ಇಟ್ಟುಕೊಂಡು ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದೆ ಚಿತ್ರತಂಡ. 

ಇತ್ತೀಚೆಗಷ್ಟೇ “ಅನಂತು ವರ್ಸಸ್‌ ನುಸ್ರತ್‌’ ಚಿತ್ರದ ಟ್ರೇಲರ್‌, ಆಡಿಯೋ ಹೊರಬಂದಿದ್ದು, ಪ್ರೇಕ್ಷಕರಿಂದ ಮತ್ತು ಚಿತ್ರರಂಗದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇಲ್ಲಿಯವರೆಗೆ ಹಲವು ಚಿತ್ರಗಳಿಗೆ ಬರಹಗಾರನಾಗಿ ಕೆಲಸ ಮಾಡಿರುವ ಸುಧೀರ್‌ ಶ್ಯಾನುಭೋಗ್‌ ಮೊದಲ ಬಾರಿಗೆ ಅನಂತು ವರ್ಸಸ್‌ ನುಸ್ರತ್‌ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇಂದಿನ ಸಾಮಾಜಿಕ ಮತ್ತು ಕೌಟುಂಬಿಕ ಕಥಾಹಂದರವನ್ನು ಇಟ್ಟುಕೊಂಡು ಅದನ್ನು ಮನರಂಜನಾತ್ಮಕವಾಗಿ ಈ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ ಎನ್ನುವ ನಿರ್ದೇಶಕ ಸುಧೀರ್‌ ಶ್ಯಾನುಭೋಗ್‌, ಚಿತ್ರದ ಮೇಲುನೋಟ ಮತ್ತು ಒಳನೋಟ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುತ್ತವೆ ಎನ್ನುತ್ತವೆ ಎನ್ನುತ್ತಾರೆ. 

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.