ಗೆಲುವಿನೊಂದಿಗೆ ಲೀಗ್‌ ಮುಗಿಸಿದ ಬೆಂಗಳೂರು


Team Udayavani, Dec 28, 2018, 6:35 AM IST

pro-kab.jpg

ಕೋಲ್ಕತಾ: ಪ್ಲೇ ಆಫ್ಗೆ ತೇರ್ಗಡೆಯಾಗಬೇಕಾದರೆ ಗೆಲ್ಲಲೇಬೇಕಾದ ಪ್ರೊ ಕಬಡ್ಡಿಯ ಕೋಲ್ಕತಾ ಚರಣದ ಅಂತಿಮ ಲೀಗ್‌ ಪಂದ್ಯದಲ್ಲಿ ಯುಪಿ ಯೋಧಾ ತಂಡವು ತನ್ನ ವಲಯದ ದ್ವಿತೀಯ ಸ್ಥಾನಿ ಬಂಗಾಲ್‌ ವಾರಿಯರ್ ತಂಡವನ್ನು 41-25 ಅಂಕಗಳಿಂದ ಭರ್ಜರಿಯಾಗಿ ಸೋಲಿಸಿದೆ. 

ಈ ಗೆಲುವಿನ ಮೂಲಕ ಯುಪಿ ಯೋಧಾ ತಂಡವು “ಬಿ’ ವಲಯದಿಂದ ಮೂರನೇ ತಂಡವಾಗಿ ಪ್ಲೇ ಆಫ್ಗೆ ತೇರ್ಗಡೆಯಾಗಿದೆ ಮಾತ್ರವಲ್ಲದೇ ಪ್ಲೇ ಆಫ್ಗೆ ತೇರ್ಗಡೆಯಾಗುವ ಕನಸು ಕಾಣುತ್ತಿದ್ದ ಹಾಲಿ ಚಾಂಪಿಯನ್‌ ಪಾಟ್ನಾ ಪೈರೇಟ್ಸ್‌ ತಂಡವನ್ನು ಕೂಟದಿಂದ ಹೊರಗಟ್ಟಿದೆ. ಯೋಧಾ ತಂಡ ಒಟ್ಟು 57 ಅಂಕ ಗಳಿಸಿದ್ದರೆ ಪಾಟ್ನಾ 55 ಅಂಕ ಗಳಿಸಿ ನಾಲ್ಕನೇ ಸ್ಥಾನ ಪಡೆಯಲಷ್ಟೇ ಶಕ್ತವಾಯಿತು. ಪಾಟ್ನಾ ಬುಧವಾರದ ಪಂದ್ಯದಲ್ಲಿ ಗುಜರಾತ್‌ಗೆ ಶರಣಾಗಿದ್ದು ದೊಡ್ಡ ಹೊಡೆತವಾಗಿದೆ.

ರಿಶಾಂಕ್‌ ದೇವಾಡಿಗ, ಶ್ರೀಕಾಂತ್‌ ಜಾಧವ್‌, ನಿತೇಶ್‌ ಕುಮಾರ್‌ ಮತ್ತು ಸಚಿನ್‌ ಕುಮಾರ್‌ ಅವರ ಅಮೋಘ ಆಟದಿಂದಾಗಿ ಯುಪಿ ಸುಲಭ ಗೆಲುವು ಕಾಣುವಂತಾಯಿತು.

ಬುಲ್ಸ್‌ಗೆ ಅಗ್ರಸ್ಥಾನ
ಪ್ರೊ ಕಬಡ್ಡಿ ಆರನೇ ಆವೃತ್ತಿ ಕೋಲ್ಕತಾ ಚರಣದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ 40-32 ಅಂಕಗಳ ಅಂತರದಿಂದ ಜೈಪುರ ಪಿಂಕ್‌ ಪ್ಯಾಂಥರ್ ತಂಡವನ್ನು ಸೋಲಿಸಿದೆ. ಇದರೊಂದಿಗೆ “ಬಿ’ ಗುಂಪಿನಲ್ಲಿರುವ ಬೆಂಗಳೂರು ತಂಡದ ಒಟ್ಟಾರೆ ಗೆಲುವು 13ಕ್ಕೆ ಏರಿದೆ. ಬುಲ್ಸ್‌ ಈಗಾಗಲೇ ನಾಕೌಟ್‌ ಸುತ್ತಿಗೆ ಲಗ್ಗೆ ಇರಿಸಿದ್ದು ಯಶಸ್ವಿಯಾಗಿ ಲೀಗ್‌ ಹಂತವನ್ನು ಮುಗಿಸಿದ್ದು ಅಗ್ರಸ್ಥಾನವನ್ನು ಅಲಂಕರಿಸಿದೆ. ಹೀಗಾಗಿ ಡಿ.31ರಂದು ಕೊಚ್ಚಿಯಲ್ಲಿ ನಡೆಯಲಿರುವ ಕ್ವಾಲಿಫೈಯರ್‌ 1 ಪಂದ್ಯದಲ್ಲಿ ಬೆಂಗಳೂರು ತಂಡವು “ಎ’ ಗುಂಪಿನ ಅಗ್ರಸ್ಥಾನಿ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ ತಂಡವನ್ನು ಎದುರಿಸಲಿದೆ. ಈ ಪಂದ್ಯದ ವಿಜೇತ ತಂಡವು ನೇರವಾಗಿ ಜ. 5ರಂದು ನಡೆಯುವ ಫೈನಲಿಗೇ ತೇರ್ಗಡೆಯಾಗಲಿದ್ದರೆ ಸೋತ ತಂಡಕ್ಕೆ ಫೈನಲಿಗೇರಲು ಇನ್ನೊಂದು ಅವಕಾಶ ಲಭಿಸಲಿದೆ.

ಪವನ್‌ ಅಬ್ಬರದ ರೈಡಿಂಗ್‌
ಪವನ್‌ ಸೆಹ್ರಾವತ್‌ (16 ಅಂಕ) ತಮ್ಮ ಎಂದಿನ ಶೈಲಿಯಲ್ಲಿಯೇ ರೈಡಿಂಗ್‌ ನಡೆಸಿದರು. ಇವರ ಅಬ್ಬರದ ಎದುರು ಜೈಪುರ ಮಂಕಾಯಿತು. ರೋಹಿತ್‌ ಕುಮಾರ್‌ (5 ಅಂಕ) ಹಾಗೂ ಸುಮಿತ್‌ ಸಿಂಗ್‌ (4 ಅಂಕ) ರೈಡಿಂಗ್‌ನಿಂದ ಗಮನ ಸೆಳೆದರು. ಅಮಿತ್‌, ಆಶಿಷ್‌ ಹಾಗೂ ಮಹೇಂದ್ರ ಸಿಂಗ್‌ ಭರ್ಜರಿ ಟ್ಯಾಕಲ್‌ ನಡೆಸಿ ಜೈಪುರ ಓಟಕ್ಕೆ ಬ್ರೇಕ್‌ ಹಾಕಿದರು. ಜೈಪುರ ಪರ ದೀಪಕ್‌ (13 ಅಂಕ) ಹಾಗೂ ಸೆಲ್ವಮಣಿ (8 ಅಂಕ) ರೈಡಿಂಗ್‌ನಿಂದ ಅಬ್ಬರಿಸಿದರೂ ತಂಡ ಗೆಲ್ಲಲಿಲ್ಲ.

ಎರಡು ದಿನ ವಿಶ್ರಾಂತಿ
ಗುರುವಾರಕ್ಕೆ ಲೀಗ್‌ ಹಂತದ ಪಂದ್ಯಗಳು ಮುಗಿದಿದ್ದು ಡಿ. 30ರಿಂದ ಪ್ಲೇ ಆಫ್ ಪಂದ್ಯಗಳು ನಡೆಯಲಿವೆ. ಡಿ. 30ರಂದು ಎಲಿಮಿನೇಟರ್‌ 1 ಮತ್ತು 2 ಪಂದ್ಯಗಳು ಕೊಚ್ಚಿಯಲ್ಲಿ ನಡೆಯಲಿದೆ. ಡಿ. 28 ಮತ್ತು 29 ಪ್ರೊ ಕಬಡ್ಡಿಗೆ ವಿಶ್ರಾಂತಿ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.