ಹೊಸ ಕೈ ರಾಜ್ಯಗಳಲ್ಲಿ “ಸಂಪುಟ ಸಂಕಟ’
Team Udayavani, Dec 28, 2018, 6:50 AM IST
ಜೈಪುರ/ಭೋಪಾಲ್: ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಇತ್ತೀಚೆಗೆ ಅಧಿಕಾರ ಗದ್ದುಗೆ ಹಿಡಿದಿರುವ ಕಾಂಗ್ರೆಸ್ಸಿಗೆ ರಾಜ್ಯಭಾರ ಹೂವಿನ ಹಾದಿಯಾಗಿಲ್ಲ ಎಂದು ಕೆಲವು ಆಂತರಿಕ ಮೂಲಗಳು ತಿಳಿಸಿವೆ.
ರಾಜಸ್ಥಾನದಲ್ಲಿ ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಖಾತೆ ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಅಶೋಕ್ ಗೆಹೊÉàಟ್ ಹಾಗೂ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನಡುವೆ ವಿರಸ ಏರ್ಪಟ್ಟ ಹಿನ್ನೆಲೆಯಲ್ಲಿ ಖುದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರೇ ಅಖಾಡಕ್ಕಿಳಿಯಬೇಕಾಗಿದೆ. ರಾಹುಲ್ ಸಮ್ಮುಖದಲ್ಲಿ ನಡೆದ ಹಲವಾರು ರಾಜಿ, ಒಪ್ಪಂದಗಳ ತರು ವಾಯ ಬುಧವಾರ ಮಧ್ಯರಾತ್ರಿ 2:30ರ ಹೊತ್ತಿಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಅತ್ತ, ಮಧ್ಯಪ್ರದೇಶದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಮುಖ್ಯಮಂತ್ರಿ ಕಮಲ್ನಾಥ್, ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಮಾಜಿ ಸಿಎಂ ದಿಗ್ವಿಜಯ ಸಿಂಗ್ ಖಾತೆಗಳಿಗಾಗಿ ಸ್ಪರ್ಧೆಗಿಳಿದಿದ್ದಾರೆ ಎನ್ನಲಾಗಿದೆ. ಈ ನಡುವೆ, ಮಧ್ಯಪ್ರದೇಶದಲ್ಲಿ ಚುನಾವಣೆಗೂ ಮುನ್ನ ತಮ್ಮ ಬೆಂಬಲ ಪಡೆದಿದ್ದ ಕಾಂಗ್ರೆಸ್, ಸಂಪುಟದಲ್ಲಿ ನಮಗೆ ಯಾವುದೇ ಸ್ಥಾನ ನೀಡಿಲ್ಲ ಎಂದು ಸಮಾಜವಾದಿ ನಾಯಕ ಅಖೀಲೇಶ್ ಯಾದವ್ ಕಿಡಿಕಾರಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ಸೇತರ ಮೈತ್ರಿ ಮಾಡಿ ಕೊಳ್ಳುವುದಾಗಿ ಅವರು ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ