ಪರಂ ಜತೆ ಭಿನ್ನಾಭಿಪ್ರಾಯವಿಲ್ಲ


Team Udayavani, Dec 28, 2018, 6:00 AM IST

64.jpg

ಹುಬ್ಬಳ್ಳಿ: ಸಮ್ಮಿಶ್ರ ಸರ್ಕಾರ 24 ಗಂಟೆಗಳಲ್ಲಿ ಬಿದ್ದು ಹೋಗುತ್ತದೆ ಎಂಬುದೆಲ್ಲ ಶುದ್ಧ ಸುಳ್ಳು. ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲ. ಪರಮೇಶ್ವರ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈ ಸರ್ಕಾರಕ್ಕೆ ಏನೂ ಆಗಲ್ಲ. ಅಧಿಕಾರಾವಧಿ ಪೂರ್ಣಗೊಳಿಸಲಿದೆ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ. ಆದರೆ, ಅದು ಸಾಧ್ಯವಾಗಲ್ಲ. ಮಾಜಿ ಸಚಿವ ಉಮೇಶ ಕತ್ತಿ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು. ರಮೇಶ ಜಾರಕಿಹೊಳಿ ಮಂತ್ರಿ ಸ್ಥಾನದಿಂದ ತೆಗೆದಿದ್ದಕ್ಕೆ ಬೇಸರಗೊಂಡಿದ್ದಾರೆ. ನನ್ನ ಸಂಪರ್ಕಕ್ಕೂ ಸಿಗುತ್ತಿಲ್ಲ. ಮೂಲತಃ ಅವರು ಕಾಂಗ್ರೆಸ್ಸಿಗರಾಗಿದ್ದು, ಪಕ್ಷದಲ್ಲಿಯೇ ಇರುತ್ತಾರೆ. ಮುಂದೆ ಎಲ್ಲವೂ ಸರಿ ಹೋಗಲಿದೆ ಎಂದರು. 

ಡಿಸಿಎಂ ಡಾ.ಜಿ.ಪರಮೇಶ್ವರ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಎಲ್ಲ ಸಚಿವರಿಗೆ ರಾಹುಲ… ಗಾಂಧಿ ಅವರಿಂದ ಖಾತೆಗಳು ಹಂಚಿಕೆಯಾಗಲಿವೆ. ಗೃಹ ಖಾತೆಯನ್ನು ಇಂಥವರಿಗೆ ಕೊಡಬೇಕೆಂದು ನಾನು ಪಟ್ಟು ಹಿಡಿದಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುತ್ತೇವೆ.
ಆದರೆ, ಯಾರಿಗೆ ಎಷ್ಟು ಸ್ಥಾನ ನೀಡಬೇಕೆಂಬುದು ಇನ್ನೂ ತೀರ್ಮಾನ ಆಗಿಲ್ಲ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮುಖಂಡರ ಸಭೆ ಬಳಿಕ ಸ್ಥಾನ ಹಂಚಿಕೆ ಅಂತಿಮವಾಗಲಿದೆ ಎಂದರು.

ಈಶ್ವರಪ್ಪ ತಲೆಯಲ್ಲಿ ಮೆದುಳಿಲ್ಲ: ಬಳಿಕ, ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಅತೃಪ್ತ ಆತ್ಮಗಳ ನಾಯಕ ಸಿದ್ದರಾಮಯ್ಯ ಎಂದು ಟೀಕಿಸಿದ್ದ ಬಿಜೆಪಿ ನಾಯಕ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದರು. ಈಶ್ವರಪ್ಪ ತಲೆಯಲ್ಲಿ ಮೆದುಳೇ ಇಲ್ಲ. ಅತೃಪ್ತಿ ಇರುವುದು ನನಗಲ್ಲ, ಈಶ್ವರಪ್ಪನಿಗೆ. ಅಧಿಕಾರದಲ್ಲಿ ಇಲ್ಲದೇ ಇರೋರಿಗೆ ಅತೃಪ್ತಿ ಇರುತ್ತದೆ. ರಾಜ್ಯದಲ್ಲಿ ಮುಖ್ಯಮಂತ್ರಿಗಿಂತ ದೊಡ್ಡ ಹುದ್ದೆ ಇಲ್ಲ. ಅಂತಹ ದೊಡ್ಡ ಹುದ್ದೆಯನ್ನು ಅನುಭವಿಸಿದ್ದೇನೆ. ನನ್ನ ಜೀವನದಲ್ಲಿ ಯಾವತ್ತೂ
ಅಧಿಕಾರದ ಹಿಂದೆ ಹೋಗಿಲ್ಲ ಎಂದರು.

ಇಂಗ್ಲಿಷ್‌ ಮಾಧ್ಯಮ ಶಾಲೆಗೆ ಸಿದ್ದು ವಿರೋಧ: ಬಾದಾಮಿ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ 48 ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಆಗಿರಬೇಕು. ಇಂಗ್ಲಿಷ್‌ ಬಗ್ಗೆ ಅತಿಯಾದ ವ್ಯಾಮೋಹ ಇರಬಾರದು. ನಾನೂ ಕನ್ನಡ ಮಾಧ್ಯಮದಲ್ಲೇ ಕಲಿತಿದ್ದೇನೆ. ಆದರೆ, 5ನೇ ತರಗತಿ ಇದ್ದಾಗಲೇ ಇಂಗ್ಲಿಷ್‌ ಕಲಿತಿದ್ದೆ. ಕನ್ನಡ ಕಲಿತವರೆಲ್ಲ ದಡ್ಡರಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತ ನಾನು ದಡ್ಡನಾ ಎಂದು ಪ್ರಶ್ನಿಸಿದರು.

ಸಿದ್ದು ಕೈ ಬೆರಳಿಗೆ ಗಾಯ: ಬಾದಾಮಿಯಲ್ಲಿ ನಡೆದ ಕನಕದಾಸ ಜಯಂತಿ ವೇಳೆ ಸಿದ್ದರಾಮಯ್ಯ ಡೊಳ್ಳು ಬಾರಿಸುತ್ತಿದ್ದರು. ಈ ವೇಳೆ, ಡೊಳ್ಳು ಬಾರಿಸುವ ಕೋಲಿನ ಬಿದಿರು ಚುಚ್ಚಿ ಬಲಗೈನ ಬೆರಳಿಗೆ ಗಾಯವಾಯಿತು. ಕೂಡಲೇ ಕೆಲವು ಕಾರ್ಯಕರ್ತರು ಬೆರಳಿಗೆ ಚುಚ್ಚಿದ್ದ ಸಿಬಿರು ತೆಗೆದು, ಹ್ಯಾಂಡಿ ಪ್ಲಾಸ್ಟರ್‌ ಹಚ್ಚಿ ಪ್ರಥಮ ಚಿಕಿತ್ಸೆ ನೀಡಿದರು.

ಸಿಎಂಗೆ ಟ್ವೀಟ್‌ ತಿರುಗೇಟು
ಮುಂದಿನ ಶೈಕ್ಷಣಿಕ ವರ್ಷದಿಂದ 1 ಸಾವಿರ ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಸಿದ್ದರಾಮಯ್ಯ, ಟ್ವೀಟ್‌ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. 1 ಸಾವಿರ ಇಂಗ್ಲಿಷ್‌ ಶಾಲೆ ಆರಂಭಿಸುವುದು ಸರಿಯಲ್ಲ. ಇದರಿಂದ ಕನ್ನಡ ಭಾಷೆ, ಶೈಕ್ಷಣಿಕ ವಲಯಕ್ಕೆ ಪೆಟ್ಟು ಬೀಳುತ್ತದೆ. ಕರುನಾಡಲ್ಲಿ ಕನ್ನಡವೇ ಸಾರ್ವಭೌಮ. ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಟ್ವೀಟ್‌ನಲ್ಲಿ ಹೇಳಿಕೊಂಡಿದ್ದಾರೆ.

ಸಮ್ಮಿಶ್ರ ಸರ್ಕಾರ ಮುನ್ನಡೆಯಬೇಕೆಂಬ ಆಸೆ ಸಿದ್ದರಾಮಯ್ಯಗೆ ಇಲ್ಲ ಎಂದು ಜೆಡಿಎಸ್‌ನ ಬಸವರಾಜ ಹೊರಟ್ಟಿ ಯಾವ ವಿಚಾರ ಇಟ್ಟುಕೊಂಡು ಹೇಳಿದ್ದಾರೋ ಗೊತ್ತಿಲ್ಲ. ಅವರ ಜತೆಗೆ ನಾನು ಮಾತನಾಡುತ್ತೇನೆ.
● ಸಿದ್ದರಾಮಯ್ಯ, ಮಾಜಿ ಸಿಎಂ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.