ಈ ಸಲವೂ ಬರ ಚಿಂತನೆ ಅಗತ್ಯ 


Team Udayavani, Dec 28, 2018, 9:43 AM IST

drouht.jpg

ರಾಜ್ಯಕ್ಕೆ ಈ ಸಲವೂ ಬರದ ಬೇಗೆ ತಟ್ಟಿದೆ. 156 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಅಂದರೆ ರಾಜ್ಯದ ಶೇ. 88 ಭಾಷ ಬರಕ್ಕೆ ತುತ್ತಾಗಿದೆ ಎಂದಾಯಿತು. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳನ್ನು ಮಾತ್ರ ಬರಪೀಡಿತ ಪ್ರದೇಶಗಳ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ರಾಜ್ಯಕ್ಕೆ ಈ ಸಲ ಮುಂಗಾರು ಮತ್ತು ಹಿಂಗಾರು ಎರಡೂ ಮಳೆ ಹಂಗಾಮು ಕೈಕೊಟ್ಟಿದೆ. ಮುಂಗಾರು ಮಳೆ ಕೊರತೆಯಾದ ಹಿನ್ನೆಲೆಯಲ್ಲಿ ಅರಂಭದಲ್ಲೇ 100 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿತ್ತು. ಇದೀಗ ಹಿಂಗಾರು ಮಳೆಯೂ ಬಾರದ ಕಾರಣ ಇನ್ನೂ 56 ತಾಲುಕುಗಳನ್ನು ಬರದ ವ್ಯಾಪ್ತಿಗೆ ಘೋಷಿಸಲಾಗಿತ್ತು. 

ನಾಲ್ಕು ಜಿಲ್ಲೆಗಳನ್ನು ಬರದ ವ್ಯಾಪ್ತಿಯಿಂದ ಹೊರಗಿಟ್ಟಿದ್ದರೂ ಇಲ್ಲಿ ಸಮೃದ್ಧ ಪರಿಸ್ಥಿತಿ ಇದೆ ಎಂದು ಆಡಳಿತದಲ್ಲಿರುವವರು ಭಾವಿಸಬೇಕಾಗಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್‌ ತಿಂಗಳಲ್ಲಿ ಮಾತ್ರ ಧಾರಾಳ ಮಲೆ ಸುರಿದಿದೆ. ಬೇಸಿಗೆ ಕಾಲಿಡುವ ಮೊದಲೇ ನದಿ, ಕೆರೆಗಳು ಒಣಗಿ ಈ ಸಲ ಏಪ್ರಿಲ್‌-ಮೇ ತಿಂಗಳಲ್ಲಿ ಕುಡಿಯುವ ನೀರಿಗೆ ತತ್ವಾರವಾದೀತು ಎಂಬ ಆತಂಕ ಆವರಿಸಿದೆ. ಕರಾವಳಿ ಭಾಗಕ್ಕೂ ಹಿಂಗಾರು ಕೈಕೊಟ್ಟಿದೆ. ಪರಿಸ್ಥಿತಿ ಇಷ್ಟು ಕಳವಳಕಾರಿ ಹಂತದಲ್ಲಿದ್ದರೂ ಕಿಂಡಿ ಅಣೆಕಟ್ಟೆಗಳಿಗೆ ಹಲಗೆ ಅಳವಡಿಸುವಂಥ ಚಿಕ್ಕಪುಟ್ಟ ಕೆಲಗಳೂ ಆಗದೆ ಜನರು ಕಂಗಾಲಾಗಿದ್ದಾರೆ. ಕ್ರಮೇಣ ಈ ಭಾಗವೂ ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. 

ರಾಜ್ಯಕ್ಕೆ ಬರವೇನೂ ಹೊಸತಲ್ಲ. ಜತೆಗೆ ಬರ ಪರಿಹಾರ ಎಂಬ ವಿಫ‌ಲ ಪ್ರಹಸನವನ್ನೂ ಜನತೆ ಸಾಕಷ್ಟು ನೋಡಿದ್ದಾರೆ. ಅಧಿಕಾರಿಗಳು, ಸಚಿವರ ಮತ್ತು ಕೇಂದ್ರದ ತಂಡ ಹೋಗಿ ಪರಿಶೀಲನೆ ನಡೆಸುವುದು, ಇವರು ನೀಡುವ ವರದಿಯನ್ನಾಧರಿಸಿ ಪರಿಹಾರ ಕ್ರಮಗಳಿಗೆ ಅನುದಾನ ಬಿಡುಗಡೆ ಯಾಗುವುದು, ಇದು ಸಂತ್ರಸ್ತರ ಕೈ ಸೇರುವಾಗ ಯಾವುದೋ ಕಾಲ ವಾಗುವುದು. ಕೆಲವಾರು ವರ್ಷಗಳಿಂದ ರಾಜ್ಯ ಪದೇ ಪದೇ ಬರಕ್ಕೆ ತುತ್ತಾಗುತ್ತಿದೆ. ಅದರಲ್ಲೂ ಕಳೆದ ಮೂರು ವರ್ಷಗಳಿಂದೀಚೆಗೆ ಬರ ಬಿಡದೆ ಕಾಡಿದೆ. ಇಂಥ ಪರಿಸ್ಥಿತಿಯಲ್ಲಿ ಯಾವುದೇ ಆಡಳಿತ ವ್ಯವಸ್ಥೆಯಾದರೂ ತಕ್ಷಣದ ಪರಿಹಾರದ ಜತೆಗೆ ಶಾಶ್ವತ ಪರಿಹಾರದ ಕ್ರಮಗಳನ್ನೂ ಕೈಗೊಳ್ಳಬೇಕಿತ್ತು.  ಬರ ಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ, ಜಾನುವಾರು ಗಳಿಗೆ ಮೇವು ಒದಗಿಸುವುದು, ಜನರು ಗುಳೇ ಹೋಗುವುದನ್ನು ತಡೆಯಲು ಉದ್ಯೋಗ ಖಾತರಿಯಡಿಯಲ್ಲಿ ಉದ್ಯೋಗ ಒದಗಿಸುವುದೆಲ್ಲ ತತ್‌ಕ್ಷಣಕ್ಕೆ ಆಗಬೇಕಾದ ಕೆಲಸಗಳೇ. ಹಾಗೆಂದು ಪ್ರತಿ ವರ್ಷವೂ ಇದನ್ನೇ ಮಾಡುತ್ತಿದ್ದರೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದು ಯಾವಾಗ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ರೈತರನ್ನು ಪರಂಪರಾಗತ ಮಳೆ ಆಧಾರಿತ ಕೃಷಿ ಪದ್ಧತಿಯಿಂದ ನವೀನ ಪದ್ಧತಿಗಳತ್ತ ತಿರುಗಿಸುವ ಯೋಜನೆಗಳನ್ನು ಜಾರಿಗೆ ತರುವ ಗಂಭೀರ ಪ್ರಯತ್ನವನ್ನು ಯಾವ ಸರಕಾರವೂ ಮಾಡಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಸ್ರೇಲ್‌ ಮಾದರಿಯ ಕೃಷಿ ಪದ್ಧತಿಯ ಕುರಿತು ಪ್ರಸ್ತಾಪ ಮಾಡುತ್ತಿದ್ದರೂ ಅನುಷ್ಠಾನದತ್ತ ಮುತುವರ್ಜಿ ತೋರಿಸುತ್ತಿಲ್ಲ. 

ಕೃಷಿ ಪದ್ಧತಿಯನ್ನು ಬದಲಾಯಿಸಬೇಕು ಎಂಬ ಸಂಕಲ್ಪ ಅವರಿಗಿರಬಹುದು. ಆದರೆ ಅಧಿಕಾರಕ್ಕೇರಿ ಆರು ತಿಂಗಳು ಕಳೆದಿದ್ದರೂ ಇನ್ನೂ ಸಮ್ಮಿಶ್ರ ಸರಕಾರದೊಳಗಿನ ಗೊಂದಲಗಳೇ ಮುಗಿದಿಲ್ಲ. ಮಂತ್ರಿ ಮಂಡಲ ವಿಸ್ತರಣೆ, ಅತೃಪ್ತರ ಮುನಿಸು ಶಮನ, ಖಾತೆ ಹಂಚಿಕೆಯಂತಹ ಸಮಸ್ಯೆಗಳ ಬಲೆಯಲ್ಲಿ ಸಿಲುಕಿ ತೊಳಲಾಡುತ್ತಿರುವ ಈ ಸಮ್ಮಿಶ್ರ ಸರಕಾರದಿಂದ ಬರ ಸಂತ್ರಸ್ತರ ಕಲ್ಯಾಣವಾದೀತೆ ಎಂಬ ಅನುಮಾನ ಜನತೆಯಲ್ಲಿದೆ. 

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.