ದೇವರಗುಂಡಿ ಜಲಪಾತ: ನೀರಿಗಿಳಿದರೆ ಅಪಾಯ


Team Udayavani, Dec 28, 2018, 11:17 AM IST

28-december-5.jpg

ಅರಂತೋಡು : ತೊಡಿಕಾನ ದೇವರ ಗುಂಡಿ ಜಲಪಾತ ನೋಡಲು ಬಲು ಸುಂದರವಾಗಿದ್ದು, ಪ್ರವಾಸಿ ಪ್ರೇಮಿಗಳನ್ನು ತನ್ನತ್ತ ಸೆಳೆಯುತ್ತಿದೆ. ಆದರೆ ಪ್ರವಾಸಿಗರು ಇಲ್ಲಿ ನೀರಿಗಳಿದರೆ ಮಾತ್ರ ಜೀವಕ್ಕೆ ಅಪಾಯ ಎದುರಾಗಬಹುದು. ಈ ಜಲಪಾತದ ಸೊಬಗನ್ನು ಸವಿಯಲು ಬಂದು ನೀರಿಗಳಿದ ಹಲವಾರು ಮಂದಿ ನೀರಿನ ಸೆಳೆತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಕಾರಣದಿಂದ ಇಲ್ಲಿ ಜಲಪಾತದ ತಳಭಾಗಕ್ಕೆ ಇಳಿಯುವುದನ್ನು ನಿಷೇಧಿಲಾಗಿದೆ.

ತೊಡಿಕಾನದಲ್ಲಿ ಸುಳ್ಯ ಸೀಮೆ ದೇಗುಲವಾದ ಅತೀ ಪುರಾತನ ಶ್ರೀ ಮಲ್ಲಿಕಾರ್ಜುನ ದೇವಾಲಯ ಇದೆ. ಇಲ್ಲಿಗೆ ದಿನ ನಿತ್ಯ ನೂರಾರು ಭಕ್ತರು ಆಗಮಿಸುತ್ತಾರೆ. ದೇಗುಲಕ್ಕೆ ಬರುವ ಕೆಲ ಪರಿಸರ ಪ್ರೇಮಿಗಳು, ಚಾರಣ ಪ್ರಿಯರು ದೇವರ ಗುಂಡಿ ಜಲಪಾತದ ಸೊಬಗು ನೋಡಲು ಹೋಗುತ್ತಾರೆ. ಜಲಪಾರದ ಸೊಬಗು ನೋಡಿ ಜಲಪಾತಕ್ಕೆ ತಲೆಯೊಡ್ಡಿ, ನೀರಿನ ಹೊಂಡಕ್ಕೆ ಇಳಿದು ಸ್ನಾನ ಮಾಡಲು ಇಳಿಯುತ್ತಾರೆ. ಈ ಸಂದರ್ಭ ಸ್ವಲ್ಪ ಎಡವಟ್ಟಾದರೆ ಅಪಾಯ ಎದುರಾಗುತ್ತದೆ.

ಜೀವತೆತ್ತರು ನಾಲ್ಕು ಬಂದಿ
ಜಲಪಾತದ ನೋಡಲು ಬಂದ ನಾಲ್ಕು ಮಂದಿ ನೀರಿಗೆ ಇಳಿದು ಪ್ರಾಣ ಕಳಕೊಂಡಿದ್ದಾರೆ. ನಾಲ್ಕೂ ಮಂದಿ ವಿದ್ಯಾರ್ಥಿಗಳಾಗಿದ್ದು, ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳು. ತೊಡಿಕಾನ ಗ್ರಾಮದ ದ.ಕ. ಮತ್ತು ಕೊಡಗು ಜಿಲ್ಲೆಯ ಗಡಿಭಾಗದಲ್ಲಿರುವ ದೇವರ ಗುಂಡಿ ಜಲಪಾತ ವರ್ಷ ಪೂರ್ತಿ ಹರಿಯುತ್ತಾ, ಪ್ರಕೃತಿ ಪ್ರೇಮಿಗಳನ್ನು ಸಂತೋಷಗೊಳಿಸುತ್ತದೆ. ಬೇಸಗೆ ಕಾಲದಲ್ಲಿ ಇದರಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತದೆ.

ಜಲಪಾತಕ್ಕೆ ಹೀಗೆ ಸಾಗಬೇಕು
ದೇವರ ಗುಂಡಿ ಜಲಪಾತದ ಸೊಬಗು ಸವಿಯಲು ಅಲ್ಲಿಗೆ ಧಾವಿಸಲು ಹಾದಿ ಬಲು ಸುಲಭವಿದೆ. ಸುಳ್ಯದಿಂದ ತೊಡಿಕಾನಕ್ಕೆ ಖಾಸಗಿ ಬಸ್ಸು ಸಂಚಾರವಿದೆ. ಇಲ್ಲಿಗೆ ಬಸ್ಸಲ್ಲಿ ಬರುವುದಾದರೆ 40 ನಿಮಿಷದ ಪ್ರಯಾಣವಿದೆ. ಸ್ವಂತ ವಾಹನವಿದ್ದರೆ ಕೇವಲ 30 ನಿಮಿಷ ಪ್ರಯಾಣ ಮಾಡಬೇಕು . ಸುಳ್ಯದಿಂದ 11 ಕಿ.ಮೀ. ಸುಳ್ಯ-ಮಡಿಕೇರಿ ರಾಜ್ಯ ರಸ್ತೆಯಲ್ಲಿ ಸಾಗಿದರೆ ಅರಂತೋಡಿಗೆ ತಲುಪಿದಾಗ ರಸ್ತೆಯ ಬಲ ಭಾಗದಲ್ಲಿ ಶ್ರೀ ಮಲ್ಲಿಕಾರ್ಜುನ ದೇವಾಲಯದ ದ್ವಾರವಿದೆ. ಈ ದ್ವಾರದ ಮೂಲಕ 6 ಕಿ.ಮೀ. ಪ್ರಯಾಣಿಸಿದರೆ ತೊಡಿಕಾನದ ಮಲ್ಲಿಕಾರ್ಜುನ ದೇವಾಲಯ ಸಿಗುತ್ತದೆ. ದೇವಾಲಯದ ಬಳಿಯಿಂದ ತೊಡಿಕಾನ-ಪಟ್ಟಿ-ಭಾಗಮಂಡಲ ಕಚ್ಚಾ ರಸ್ತೆಯಲ್ಲಿ ಸುಮಾರು 1,800 ಮೀ. ಸಾಗಿದ್ದಾಗ ಜಲಪಾತ ಕಾಣ ಸಿಗುತ್ತದೆ. ಮುಂದೆ ಸಾಗುತ್ತಿದಂತೆ ಹೊಳೆಯ ಚಿಕ್ಕ ಪುಟ್ಟ ತೊರೆಗಳು ಮನಸ್ಸನ್ನು ಪುಳಕಗೊಳಿಸುತ್ತದೆ.

ಎಚ್ಚರಿಕೆ ಫ‌ಲಕ ಅಳವಡಿಸಲಾಗಿದೆ 
ಜಲಪಾತದ ತಳಭಾಗದ ಸಣ್ಣ ತೊರೆಯು ನೋಡಲು ಗುಂಡಿಯಂತೆ ಭಾಸವಾಗುತ್ತದೆ. ತುಂಬಾ ಕಿರಿದಾಗಿದೆ. ಆದರೆ ಇದರ ಆಳ ಮಾತ್ರ ಅಳತೆಗೆ ನಿಲುಕದ್ದಷ್ಟು ಇದೆ ಎಂದು ಸ್ಥಳೀಯರು ಹೇಳುತ್ತಾರೆ. ಇಲ್ಲಿ ಆಳಕ್ಕೆ ನೀರಿನ ಸೆಳೆತ ಇದೆ. ಈ ಕಾರಣದಿಂದಲೇ ಇದಕ್ಕೆ ಇಳಿದವರು ನೀರಿನ ಸೆಳೆತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಇಲ್ಲಿ ಪ್ರಾಣ ಕಳೆದುಕೊಂಡವರ ವಿವರ ಸಹಿತ ಕನ್ನಡ ಹಾಗೂ ಆಂಗ್ಲ ಭಾಷೆಯ ಎಚ್ಚರಿಕೆ ಫ‌ಲಕ ಅಳವಡಿಸಲಾಗಿದೆ. ಆದರೂ ಇದನ್ನು ಲೆಕ್ಕಿಸದೆ ಕೆಲವರು ನೀರಿಗೆ ಇಳಿಯುತ್ತಿದ್ದಾರೆ.

ತಂಪಾದ ವಾತಾವರಣ
ನಾನು ದೇವರ ಗುಂಡಿ ಜಲಪಾತ ನೋಡಿದೆ. ಜಲಪಾತ ತುಂಬಾ ಸುಂದರವಾಗಿದೆ. ಇಲ್ಲಿಯ ತಂಪಾದ ವಾತಾವರಣ ಮನಸ್ಸಿಗೆ ಖುಷಿ ಕೊಡುತ್ತದೆ. ಅಲ್ಲಿ ನೀರಿಗಿಳಿಯಲು ನಾನು ಧಾವಿಸಿದೆ. ನೀರಿಗೆ ಇಳಿದರೆ ಅಪಾಯವಿದೆ ಎನ್ನುವ ಎಚ್ಚರಿಕೆ ಫ‌ಲಕ ನೋಡಿ ನೀರಿಗೆ ಇಳಿಯಲಿಲ್ಲ. ಎಚ್ಚರಿಕೆ ಫ‌ಲಕಗಳನ್ನು ಓದಿಕೊಂಡು ಅದನ್ನು ಪ್ರವಾಸಿಗರು ಪಾಲಿಸಬೇಕು.
– ನಿತಿನ್‌,
 ಜಲಪಾತ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗ

ನೀರಿಗಿಳಿಯಬೇಡಿ
ದೇವರಗುಂಡಿ ಜಲಪಾತದ ಗುಂಡಿಗೆ ಇಳಿದರೆ ಅಪಾಯ ಇದೆ. ಇಲ್ಲಿ ನೀರಿನ ಒಳ ಹರಿವು ಇದೆ. ನೀರಿಗಿಳಿದ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಅಪಾಯ ಮನ್ಸೂಚನೆಯ ಬಗ್ಗೆ ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಜಲಪಾತದ ಬಳಿ ಫ‌ಲಕ ಅಳವಡಿಸಲಾಗಿದೆ. ದೇವರ ಗುಂಡಿ ಜಲಪಾತ ನೋಡಲು ತೆರಳುವ ಭಕ್ತರು ಯಾರೂ ಜಲಪಾತದ ಬಳಿಯ ಗುಂಡಿಗೆ ಇಳಿಯಬಾರದು ಎನ್ನುವುದು ದೇಗುಲದ ಮನವಿಯಾಗಿದೆ.
 - ಆನಂದ ಕಲ್ಲಗದ್ದೆ,
    ತೊಡಿಕಾನ ದೇಗುಲದ ವ್ಯವಸ್ಥಾಪಕರು

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.