ಬಾಕ್ಸಿಂಗ್ ಡೇ ಇತಿಹಾಸ ರೋಚಕ !


Team Udayavani, Dec 28, 2018, 4:46 PM IST

box.jpg

ಬಾಕ್ಸಿಂಗ್ ಡೇ ಕ್ರಿಕೆಟ್? ಕ್ರಿಕೆಟ್ ಪಂದ್ಯಕ್ಕೆ ಬಾಕ್ಸಿಂಗ್ ಹೆಸರು ಯಾಕೆ ಬಂತು ಎನ್ನುವ ಪ್ರಶ್ನೆ ಹಲವರದ್ದು. ಆಸ್ಟ್ರೇಲಿಯಾದಲ್ಲಿ ಪ್ರತಿವರ್ಷ ನಡೆಯುವ ಬಾಕ್ಸಿಂಗ್ ಡೇ ಪಂದ್ಯದ ಹಿಂದಿನ ಇತಿಹಾಸವೇನು ? ಇಲ್ಲಿದೆ ಉತ್ತರ. 

ಬಾಕ್ಸಿಂಗ್ ಡೇ ಅಂದರೆ ಕ್ರಿಸ್ಮಸ್ ನ ಮರುದಿನ ಅಂದರೆ ಡಿಸೆಂಬರ್ 26. ಆಸ್ಟ್ರೇಲಿಯಾ, ಕೆನಡಾ, ಇಂಗ್ಲೆಂಡ್ ಮುಂತಾದ ಕಾಮನ್ ವೆಲ್ತ್ ಆಡಳಿತಕ್ಕೆ ಒಳಪಟ್ಟಿದ್ದ ದೇಶಗಳಲ್ಲಿ ಬಾಕ್ಸಿಂಗ್ ಡೇ ಎಂದರೆ ರಜೆಯ ದಿನ. ಐರ್ಲೆಂಡ್ ನಲ್ಲಿ ಇದನ್ನು ಸೇಂಟ್ ಸ್ಟಿಫನ್ಸ ಡೇ ಎಂದೂ ಗುರುತಿಸಲಾಗುತ್ತದೆ. ಈ ದಿನ ಹಲವಾರು ಕ್ರೀಡೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವ ಸಂಪ್ರದಾಯ ಹಲವು ರಾಷ್ಟ್ರಗಳಲ್ಲಿತ್ತು. 

ಪ್ರತಿವರ್ಷ  ಬಾಕ್ಸಿಂಗ್ ಡೇ ಕ್ರಿಕೆಟ್ ಪಂದ್ಯಾಟ ನಡೆಯುವುದು ಮೆಲ್ಬೋರ್ನ್ ನಲ್ಲಿ. ಕ್ರಿಸ್ಮಸ್  ಹಬ್ಬಕ್ಕೆ ಬಂದ ಉಡುಗೊರೆ ಬಾಕ್ಸ್ ಗಳನ್ನು ತೆರೆಯುವ  ದಿನ ಆರಂಭವಾಗುವ ಪಂದ್ಯಾಟಕ್ಕೆ ಬಾಕ್ಸಿಂಗ್ ಡೇ ಎಂದು ಹೆಸರು. 
 
ಶತಮಾನದ ಹಿಂದೆ ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ವಿಕ್ಟೋರಿಯಾ ಮತ್ತು ನ್ಯೂ ಸೌತ್ ವೇಲ್ಸ್ ನಡುವಿನ ಪಂದ್ಯವನ್ನು ಕ್ರಿಸ್ಮಸ್ ಸಮಯದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಸಮಯದಲ್ಲಿ ಆಟಗಾರರು ಕ್ರಿಸ್ಮಸ್ ಹಬ್ಬವನ್ನು ಆ ಪಂದ್ಯದಿಂದಾಗಿ ತಪ್ಪಿಸಿಕೊಂಡಿದ್ದರು.  1950-51 ಆಶಸ್ ಸರಣಿಯನ್ನು ಡಿಸೆಂಬರ್ 22ರಿಂದ 27ರ ವರೆಗೆ ನಡೆದಿತ್ತು. ಈ ಪಂದ್ಯಾವನ್ನು ಕೂಡ ಬಾಕ್ಸಿಂಗ್ ಡೇ ಎಂದೇ ಕರೆಯುತ್ತಿದ್ದರು.

ಆದರೆ 1953 ರಿಂದ 1967 ರವರೆಗೆ ಮೆಲ್ಬೋರ್ನ್ ನಲ್ಲಿ ಯಾವುದೇ ಬಾಕ್ಸಿಂಗ್ ಡೇ ಪಂದ್ಯಗಳು ನಡೆಯಲಿಲ್ಲ. 1974ರಿಂದ ಡಿಸೆಂಬರ್ 26ರಂದು ಆರಂಭವಾಗುವಂತೆ ಟೆಸ್ಟ್ ಪಂದ್ಯವನ್ನು ಆಯೋಜಿಸಲಾಗುತ್ತದೆ. ಪ್ರತಿಯೊಂದು ಬಾಕ್ಸಿಂಗ್ ಡೇ ಕ್ರಿಕೆಟ್ ಪಂದ್ಯಗಳು ಮೆಲ್ಬೋರ್ನ್ ಕ್ರೀಡಾಂಗಣದಲ್ಲೇ ನಡೆಯುವುದು ವಿಶೇಷ. ಮತ್ತು ಪ್ರತಿ ಸಲವೂ ಇದರಲ್ಲಿ ಆಸ್ಟ್ರೇಲಿಯಾ ಭಾಗವಸುತ್ತದೆ. 

ಇಷ್ಟರವರೆಗೆ ಒಟ್ಟು 43 ಟೆಸ್ಟ್ ಪಂದ್ಯಗಳು ಬಾಕ್ಸಿಂಗ್ ಡೇ ಪಂದ್ಯಗಳನ್ನು ನಡೆದಿವೆ. ಪ್ರಸ್ತುತ ಭಾರತ ವಿರುದ್ಧ ನಡೆಯುವ ಪಂದ್ಯಾಟ 44 ಟೆಸ್ಟ್ ಪಂದ್ಯ. 1950ರಲ್ಲಿ ಮೊದಲ ಪಂದ್ಯ ನಡೆದಿತ್ತು.  ಇಂಗ್ಲೆಂಡ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ 28 ರನ್ ಗಳ ಅಂತರದಿಂದ ವಿಜಯಿಯಾಗಿತ್ತು.  ಇಷ್ಟರವರೆಗೆ ಒಟ್ಟು9  ಪಂದ್ಯಗಳು ಡ್ರಾ ಆಗಿದ್ದರೆ 24 ಪಂದ್ಯಗಳನ್ನು ಆಸ್ಟ್ರೇಲಿಯಾ ಗೆದ್ದು ಬೀಗಿದೆ.  

ಭಾರತ ತಂಡ ಮೊದಲ ಸಲ ಬಾಕ್ಸಿಂಗ್ ಡೇ ಕಣಕ್ಕಿಳಿದದ್ದು1985ರಲ್ಲಿ ಕಪಿಲ್ ದೇವ್ ನೇತೃತ್ವದಲ್ಲಿ. ಈ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. ಅಂದಿನಿಂದ ಭಾರತ ತಂಡ 2014ರವೆರೆಗೆ ಒಟ್ಟು 7 ಮೆಲ್ಬೋರ್ನ್ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಆಡಿದ್ದು, ಗೆಲುವು ಮಾತ್ರ ಮರೀಚಿಕೆಯಾಗಿಯೇ ಉಳಿದಿದೆ.  


ಕೇವಲ ಟೆಸ್ಟ್ ಪಂದ್ಯಗಳಿಗೆ ಸೀಮಿತವಾದ ಬಾಕ್ಸಿಂಗ್ ಡೇ ಏಕೈಕ ಏಕದಿನ ಪಂದ್ಯಕ್ಕೆ ಸಾಕ್ಷಿಯಾಗಿತ್ತು. ಇದು ನಡೆದದ್ದು 1989ರಲ್ಲಿ. ಶ್ರೀಲಂಕಾ ತಂಡವು ಆಸ್ಟ್ರೇಲಿಯಾ ವಿರುದ್ಧ ಈ ಪಂದ್ಯಾವಳಿಯಲ್ಲಿ ಸೆಣಸಾಡಿತ್ತು. ಅಂತಿವಾಗಿ ಆತಿಥೇಯ ಆಸ್ಟ್ರೇಲಿಯಾ 30 ರನ್ ಗಳಿಂದ ವಿಜಯಿಯಾಗಿತ್ತು. 

ಕೀರ್ತನ್ ಶೆಟ್ಟಿ ಬೋಳ

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.