ಕೊಡಂಗಳ ಮರ್ಣೆ: 14ನೇ ಶತಮಾನದ ಆಳುಪ ಶಾಸನ ಪತ್ತೆ


Team Udayavani, Dec 29, 2018, 12:30 AM IST

shriva.jpg

ಶಿರ್ವ: ಮೂಡುಬೆಳ್ಳೆ ಸಮೀಪದ ಕೊಡಂಗಳ-ಮರ್ಣೆಯ ಕೊಲಪು ಮಹಾವಿಷ್ಣುಮೂರ್ತಿ ದೇವಾಲಯದ ಹೊರ ಪ್ರಾಕಾರದಲ್ಲಿ ತ್ರಿಕೋನಾಕಾರದಲ್ಲಿರುವ ಒಂದು ವಿಶಿಷ್ಟ ಶಾಸನ ಕಲ್ಲು ಪತ್ತೆಯಾಗಿದೆ. 

ಶಾಸನದ ಮೇಲ್ಭಾಗದಲ್ಲಿ   ಒಂದು  ಶಿವಲಿಂಗ, ಎಡ-ಬಲದಲ್ಲಿ ಎರಡು ದೀಪದ ಕಂಭಗಳು ಹಾಗೂ ನಂದಿಯ ಅಸ್ಪಷ್ಟ ಶಿಲ್ಪದ ಚಿತ್ರಣವಿದ್ದು ಮೇಲೆ ಸೂರ್ಯ-ಚಂದ್ರರ ಉಬ್ಬು ಶಿಲ್ಪಗಳಿವೆ.

ಸುಮಾರು 19 ಸಾಲುಗಳ ಬರಹವನ್ನು ಹೊಂದಿರುವ ಈ ಶಾಸನದಲ್ಲಿ ಕೆಳಭಾಗದಲ್ಲಿನ 7 ಸಾಲುಗಳ ಬರಹ ಅಸ್ಪಷ್ಟವಾಗಿ ಗೋಚರಿಸುತ್ತದೆ. ಮೇಲಿನ ಭಾಗದಲ್ಲಿರುವ ಬರಹ ಸಂಪೂರ್ಣ ಅಳಿಸಿ ಹೋಗಿದೆ. ಶಾಸನೋಕ್ತ ವಿಷಯದ ಪ್ರಕಾರ ಇದೊಂದು ದಾನ ಶಾಸನವೆಂದು ಸ್ಪಷ್ಟವಾಗುತ್ತದೆ ಎಂದು ಶಿರ್ವ ಎಂ.ಎಸ್‌.ಆರ್‌.ಎಸ್‌. ಕಾಲೇಜು ಪುರಾತತ್ವ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ|ಟಿ.ಮುರುಗೇಶಿ ತಿಳಿಸಿದ್ದಾರೆ.

ಶಾಸನದಲ್ಲಿ ದೇವಾಲಯದ ಅಧಿಕಾರಿಯನ್ನು ಉಲ್ಲೇಖೀಸಲಾಗಿದೆ. ಆಳುಪರ ಇತರೆ ಶಾಸನಗಳಲ್ಲಿ  ಅಧಿಕಾರಿಗಳ ಉಲ್ಲೇಖ ಕಂಡುಬರುತ್ತದೆ. ಶಾಸನದ ಲಿಪಿ ಲಕ್ಷಣದ ಆಧಾರದ ಮೇಲೆ 14ನೇ ಶತಮಾನದ ಶಾಸನವೆಂದು ಕಾಲವನ್ನು ನಿರ್ಣಯಿಸಬಹುದಾಗಿದೆ. ಶಾಸನದ ಕೆಳಭಾಗದಲ್ಲಿ ಎದುರು-ಬದುರಾಗಿ ನಿಂತ ಎರಡು ಕರುಗಳ ಉಬ್ಬು ಶಿಲ್ಪಗಳನ್ನು ಚಿತ್ರಿಸಲಾಗಿದೆ.

ಶಾಸನದ ಮಹತ್ವ
ಶಾಸನ ಇರುವ ದೇವಾಲಯವನ್ನು ಈಗ ಕೊಲಪು ಮಹಾವಿಷ್ಣುಮೂರ್ತಿ ದೇವಾಲಯವೆಂದು ಕರೆಯಲಾಗುತ್ತಿದೆ. ಶಾಸನೋಕ್ತ ಅಧಿಕಾರಿಯ ಉಲ್ಲೇಖ ಮೂಲತಃ ಈ ದೇವಾಲಯ ಜೈನ ಅಧಿಕಾರಿಗಳ ಆಡಳಿತಕ್ಕೊಳಪಟ್ಟಿತ್ತೆಂದು ಸ್ಪಷ್ಟಪಡಿಸುತ್ತದೆ. ಪ್ರಸ್ತುತ ದೇವಾಲಯದಲ್ಲಿನ ಮಹಾವಿಷ್ಣುಮೂರ್ತಿ 17ನೇ ಶತಮಾನದ ಶಿಲ್ಪ ಶೈಲಿಯನ್ನು ಹೊಂದಿದೆ. ಆದ್ದರಿಂದ ಪ್ರಸ್ತುತ ದೇವಾಲಯ ಮೂಲತಃ ಶೈವ ದೇವಾಲಯವಾಗಿದ್ದು,ಜೈನರ ಆಡಳಿತೆಗೆ ಒಳಪಟ್ಟ ದೇವಾಲಯ ಆಗಿತ್ತು. ಅನಂತರ ವೈಷ್ಣವರ ಅಧೀನಕ್ಕೆ ಒಳಪಟ್ಟು, ಮಹಾವಿಷ್ಣುಮೂರ್ತಿ ದೇವಾಲಯವಾಗಿ ಮಾರ್ಪಟ್ಟಿದೆ ಎಂಬ ಅಂಶದ ಮೇಲೆ ಈ ಶಾಸನ ಬೆಳಕು ಚೆಲ್ಲುತ್ತದೆ. ಈ ಶಾಸನ ಅಧ್ಯಯನದಲ್ಲಿ  ವೆಂಕಟೇಶ್‌ ಭಟ್‌, ಅರ್ಚಕರಾದ ಪುಂಡರೀಕಾಕ್ಷ ಆಚಾರ್ಯ, ಬ್ರಹ್ಮಾವರ ಎಸ್‌.ಎಂ.ಎಸ್‌. ಕಾಲೇಜಿನ ಪ್ರಶಾಂತ್‌ ಶೆಟ್ಟಿ  ಸಹಕರಿಸಿದ್ದಾರೆ.

ಟಾಪ್ ನ್ಯೂಸ್

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.