ಮಗನ ಮೇಲಾಣೆ ಸಾಲಮನ್ನಾ ಮಾಡುವೆ


Team Udayavani, Dec 29, 2018, 12:30 AM IST

13.jpg

ಬಾಗಲಕೋಟೆ: “ನನಗೆ ಇರುವವನು ಒಬ್ಬನೇ ಮಗ. ಅವನ ಮೇಲೆ ಆಣೆ ಮಾಡಿ ಹೇಳುತ್ತೇನೆ. ಯಾರು ಏನೇ ಅಪಪ್ರಚಾರ ನಡೆಸಿದರೂ ರೈತರು ನನ್ನ ಮೇಲೆ ಅಪನಂಬಿಕೆ ಇಡಬೇಡಿ. ನನಗೆ ಸಹಕಾರ ಕೊಡಿ. ಸರ್ಕಾರ ಬೀಳಿಸಲು ನಾನು ಬಿಡುವುದಿಲ್ಲ. ರೈತರನ್ನು ಸಾಲದಿಂದ ಋಣಮುಕ್ತರನ್ನಾಗಿ ಮಾಡಿಯೇ ನಾನು ಅಧಿಕಾರ ಬಿಡುತ್ತೇನೆ. ಅಲ್ಲಿಯವರೆಗೆ ಸರ್ಕಾರ ಬೀಳುವುದೂ ಇಲ್ಲ” ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನವನಗರದ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ರೈತರ ಸಾಲ ಮನ್ನಾ ಯೋಜನೆಯ ಋಣಮುಕ್ತ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು. ರೈತರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪಡೆದ ಸಾಲ ಮನ್ನಾ ಅಥವಾ ಬಡ್ಡಿ ಮನ್ನಾ ಮಾಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು. ಆದರೂ, ಒಂದು ದೊಡ್ಡ ಸವಾಲನ್ನು ನಾನು ಸ್ವೀಕರಿಸಿದ್ದೇನೆ. ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪಡೆದ ರೈತರ ಸಾಲ ಮನ್ನಾ ಮಾಡಿದರೆ ಅದು ರೈತರಿಗೆ ತಲುಪಬೇಕು. ಯಾರೋ ಮಧ್ಯವರ್ತಿಗಳು, ಶ್ರೀಮಂತರು ಇದರ ಲಾಭ ಪಡೆಯಬಾರದೆಂಬ ಉದ್ದೇಶದಿಂದ ಕೇವಲ ಮೂರು ದಾಖಲೆ ಪಡೆದು ಪ್ರಕ್ರಿಯೆ ಆರಂಭಿಸಿದ್ದೇವೆ. 46 ಸಾವಿರ ಕೋಟಿ ಮನ್ನಾ ಹಣ ಸಾರ್ಥಕವಾಗಬೇಕು ಎಂಬುದು ನನ್ನ ಆಶಯ. ಇಂದು ಅಧಿಕೃತವಾಗಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ಕೊಡುತ್ತಿದ್ದೇವೆ ಎಂದರು.

ರಾಷ್ಟ್ರೀಕೃತ ಮತ್ತು ಸಹಕಾರಿ ಸಂಘಗಳು ಸೇರಿ ಒಟ್ಟು 44 ಲಕ್ಷ ರೈತರು 46 ಸಾವಿರ ಕೋಟಿ ಸಾಲ ಪಡೆದಿದ್ದಾರೆ. ಈ 44 ಲಕ್ಷ ರೈತರ ಮನೆ ಮನೆಗೂ ಸಾಲ ಮನ್ನಾ ಯೋಜನೆಯ ಋಣಮುಕ್ತ ಪ್ರಮಾಣ ಪತ್ರ ಕಳುಹಿಸುತ್ತೇನೆ. ಮಾರ್ಚ್‌ ಅಂತ್ಯದ ವೇಳೆಗೆ ಸಹಕಾರಿ ಸಂಘಗಳ ಅಷ್ಟೂ ಸಾಲ ಮನ್ನಾ ಮಾಡಿ, ರೈತರನ್ನು ಋಣಮುಕ್ತರನ್ನಾಗಿ ಮಾಡುತ್ತೇನೆ ಎಂದರು.

“ನಾನು ಉತ್ತರ ಕರ್ನಾಟಕದ ವಿರೋಧಿ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಸಾಲಮನ್ನಾ ಯೋಜನೆಯಿಂದ ಉತ್ತರ ಕರ್ನಾಟಕದ ಶೇ.62.43ರಷ್ಟು ರೈತರಿಗೆ ಲಾಭವಾಗಲಿದೆ. ಹಾಗಾದರೆ, ನಾನು ಉತ್ತರದ ವಿರೋಧಿ ಹೇಗೆ ಆಗುತ್ತೇನೆ’ ಎಂದು ಪ್ರಶ್ನಿಸಿದರು.

ಫೆಬ್ರವರಿಯಲ್ಲೇ ಬಜೆಟ್‌ ಮಂಡನೆ:
ಫೆಬ್ರವರಿ ಬಳಿಕ ಲೋಕಸಭೆ ಚುನಾವಣೆ ಬರಲಿದೆ. ಹೀಗಾಗಿ, ನಾನು ಫೆಬ್ರವರಿಯಲ್ಲೇ ಬಜೆಟ್‌ ಮಂಡನೆಗೆ ಸಿದ್ಧತೆ ಮಾಡಿಕೊಂಡಿದ್ದು, ಬಜೆಟ್‌ನಲ್ಲಿ 20 ಸಾವಿರ ಕೋಟಿಯನ್ನು ರೈತರ ಸಾಲಮನ್ನಾ ಯೋಜನೆಗೆ ಮೀಸಲಿಡಲಾಗುವುದು. ಈ ವರ್ಷ ಆರಂಭದಲ್ಲಿ 6,500 ಕೋಟಿ ಹಾಗೂ ಹೆಚ್ಚುವರಿ ಬಜೆಟ್‌ನಲ್ಲಿ 2,500 ಕೋಟಿ ಸೇರಿ ಒಟ್ಟು 9 ಸಾವಿರ ಕೋಟಿ ರೂ. ಸಾಲಮನ್ನಾ ಯೋಜನೆಗೆ ಬಳಕೆ ಮಾಡಲಾಗುತ್ತಿದೆ. ರೈತರ ಸಾಲಮನ್ನಾ ಯೋಜನೆಗಾಗಿ ಅನ್ನಭಾಗ್ಯ, ಕ್ಷೀರಭಾಗ್ಯ ಅಥವಾ ಇನ್ಯಾವುದೇ ಯೋಜನೆಯ ಹಣ ಕಡಿತ ಮಾಡಿಲ್ಲ ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.