ಬಡ್ಡಿ ದರ ಪೂರ್ತಿ ಮನ್ನಾ?


Team Udayavani, Dec 29, 2018, 12:30 AM IST

interest-waiver.jpg

ನವದೆಹಲಿ: ಲೋಕಸಭೆ ಚುನಾವಣೆ ಹೊತ್ತಿಗೆ ಕೃಷಿ ವಲಯಕ್ಕೆ ಭರ್ಜರಿ ಯೋಜನೆಗಳನ್ನು ಪ್ರಕಟಿಸಿ ರೈತರ ಮನಗೆಲ್ಲುವ ಉತ್ಸಾಹದಲ್ಲಿರುವ ಕೇಂದ್ರ ಸರ್ಕಾರ, ನಿಗದಿತ ಅವಧಿಯಲ್ಲಿ ಮರುಪಾವತಿಯಾಗುವ ರೈತರ ಸಾಲಗಳ ಮೇಲೆ ಬಡ್ಡಿ ಮನ್ನಾ ಮಾಡಲು ಚಿಂತನೆ ನಡೆಸಿದೆ. ಜತೆಗೆ, ಹೊಲಗಳಲ್ಲಿ ಬೆಳೆಯುವ ಬೆಳೆಗಳ ವಿಮೆ ಪ್ರೀಮಿಯಂಗಳನ್ನು ಮನ್ನಾ ಮಾಡುವ, ತೋಟಗಾರಿಕೆ ಬೆಳೆಗಳ ಮೇಲಿನ ಪ್ರೀಮಿಯಂ ಅನ್ನು ಕಡಿತಗೊಳಿಸುವ ನಿರ್ಧಾರಗಳನ್ನು ಕೈಗೊಳ್ಳುವ ಅಂಶಗಳನ್ನು ಯೋಜನೆಗಳಲ್ಲಿ ಸೇರಿಸಲು ಆಲೋಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಸದ್ಯಕ್ಕೆ ರೈತರು ಪಡೆಯುತ್ತಿರುವ ಸಾಮಾನ್ಯ ಕೃಷಿ ಸಾಲದ ಮೇಲೆ ಶೇ. 4ರಷ್ಟು ಬಡ್ಡಿ ವಿಧಿಸಲಾಗುತ್ತಿದೆ. ಅಲ್ಪಾವಧಿ ಕೃಷಿ ಸಾಲಗಳ ಮೇಲೆ ಶೇ. 7ರಷ್ಟು ಬಡ್ಡಿ ವಿಧಿಸಲಾಗುತ್ತಿದೆ. ಈಗ ಚಾಲ್ತಿಯಲ್ಲಿರುವಂತೆ ನಿಗದಿತ ಅವಧಿಯಲ್ಲಿ ಮರುಪಾವತಿ ಮಾಡುವ ಸಾಮಾನ್ಯ ಕೃಷಿ ಸಾಲದ ಮೇಲಿನ ಬಡ್ಡಿ ದರಕ್ಕೆ ಶೇ.2ರಷ್ಟು ರಿಯಾಯಿತಿ, ಅಲ್ಪಾವಧಿ ಕೃಷಿ ಸಾಲದ ಮೇಲಿನ ಬಡ್ಡಿಯಲ್ಲಿ ಶೇ. 5ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಇವೆರಡರಿಂದಲೇ ಬೊಕ್ಕಸಕ್ಕೆ ಈಗ 15,000 ಕೋಟಿ ರೂ. ಹೊರೆ ಬೀಳುತ್ತಿದೆ. ಈ ಎಲ್ಲಾ ಕೃಷಿ ಸಾಲಗಳ ಬಡ್ಡಿ ಮನ್ನಾ ಮಾಡಿದರೆ ಒಟ್ಟು 30,000 ಕೋಟಿ ರೂ. ಹೊರೆ ಬೀಳಲಿದೆ ಎನ್ನಲಾಗಿದೆ. ಇನ್ನು, ಪ್ರಧಾನ ಮಂತ್ರಿ ಫ‌ಸಲ್‌ ಭಿಮಾ ಯೋಜನೆಯಡಿ ಬೆಳೆ ವಿಮೆಗಳಿಗಾಗಿ ರೈತರಿಂದ ವಾರ್ಷಿಕ 5,000 ಕೋಟಿ ರೂ. ಪ್ರೀಮಿಯಂ ಹರಿದುಬರುತ್ತಿದೆ. ಇದನ್ನು ಮನ್ನಾ ಮಾಡಿದರೆ, ಸರ್ಕಾರದ ಮೇಲೆ ಮತ್ತೆ 5,000 ಕೋಟಿ ರೂ. ಹೊರೆ ಬೀಳುತ್ತದೆ. 

ಈರುಳ್ಳಿ ಮೇಲಿನ ಪ್ರೋತ್ಸಾಹ ಧನ ಹೆಚ್ಚಳ 
ಈರುಳ್ಳಿ ಬೆಲೆ ಕುಸಿದಿರುವ ಹಿನ್ನೆಲೆಯಲ್ಲಿ ಈರುಳ್ಳಿ ರಫ್ತಿನ ಮೇಲೆ ವಿಧಿಸಲಾಗುತ್ತಿದ್ದ ಪ್ರೋತ್ಸಾಹ ಧನವನ್ನು ದ್ವಿಗುಣಗೊಳಿಸಲು ಕೇಂದ್ರ ತೀರ್ಮಾನಿಸಿದೆ. ಅದರಿಂದಾಗಿ, ಎಂಎಸ್‌ಐಎಎಸ್‌ ವತಿಯಿಂದ ರಫ್ತಾಗುವ ಈರುಳ್ಳಿಯ ಮೇಲೆ ಶೇ. 5ರಷ್ಟು ಇರುವ ಪ್ರೋತ್ಸಾಹ ಧನ ಇದನ್ನು ಶೇ. 10ಕ್ಕೆ ಏರಲಿದೆ. ಇದೇ ವರ್ಷ ಜುಲೈನಲ್ಲಿ ಈರುಳ್ಳಿ ರಫ್ತಿನ ಮೇಲೆ ಶೇ. 5ರಷ್ಟು ಪ್ರೋತ್ಸಾಹ ಧನ ವಿಧಿಸಲಾಗಿತ್ತು. 

3 ಆಯ್ಕೆಗಳ ಪರಿಶೀಲನೆ
ರೈತರ ಪ್ಯಾಕೇಜ್‌ಗೆ ಸಂಬಂಧಿಸಿ ಪ್ರಧಾನಿ ಮೋದಿ ಅವರು 3 ಆಯ್ಕೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವೆಂದರೆ, ಭೂಮಿ ಹೊಂದಿರುವ ರೈತರಿಗೆ ನೇರವಾಗಿ ಎಕರೆಗೆ 1,700-2 ಸಾವಿರ ರೂ. ಪಾವತಿಸುವುದು, ರೈತರು ತಮ್ಮ ಬೆಳೆಗಳನ್ನು ಮಾರಾಟ ಮಾಡಿದ ನಂತರ, ಸರ್ಕಾರ ನಿಗದಿಪಡಿಸಿದ ಬೆಲೆಗೂ, ಅವರು ಮಾರಾಟ ಮಾಡಿದ ಬೆಲೆಗೂ ನಡುವೆ ಇರುವ ಅಂತರದ ಮೊತ್ತವನ್ನು ಸರ್ಕಾರವೇ ಭರಿಸುವುದು ಮತ್ತು ಪ್ರತಿ ವ್ಯಕ್ತಿಯ 1 ಲಕ್ಷ ರೂ.ವರೆಗಿನ ಬೆಳೆ ಸಾಲವನ್ನು ಮನ್ನಾ ಮಾಡುವುದು. ಈ ಪೈಕಿ ಮೊದಲನೆಯ ಯೋಜನೆಗೆ 1 ಲಕ್ಷ ಕೋಟಿ ರೂ, ಎರಡನೆಯದಕ್ಕೆ 50,000 ಕೋಟಿ ರೂ. ಹಾಗೂ ಮೂರನೆಯ ಯೋಜನೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂ.ಗಳಷ್ಟು ಹೊರೆ ಸರ್ಕಾರದ ಬೊಕ್ಕಸದ ಮೇಲೆ ಬೀಳಲಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.