ಬೋನಿಗೆ ಬಿದ್ದ ಚಿರತೆ
Team Udayavani, Dec 29, 2018, 12:30 AM IST
ಕಂಪ್ಲಿ: ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶುಕ್ರವಾರ ಗಂಡು ಚಿರತೆಯೊಂದು ಬಿದ್ದಿದೆ. ಈ ಭಾಗದಲ್ಲಿ ಚಿರತೆಗಳು ಇಬ್ಬರು ಮಕ್ಕಳ ಬಲಿ ಪಡೆದ ಬಳಿಕ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮದ ಗುಡ್ಡದ ಹತ್ತಿರ ಚೆಕ್ಡ್ಯಾಂ ಸಮೀಪ ಎರದಮಟ್ಟಿ ಬಳಿಯ ವೇಷಗಾರ್ ಜಂಭಯ್ಯನವರ ಮನೆ ಬಳಿ ಇರಿಸಿದ್ದ ಬೋನಿಗೆ ಬೆಳಗ್ಗೆ 7:20ರ ಸುಮಾರಿಗೆ ಏಳು ವರ್ಷದ ಗಂಡು ಚಿರತೆ ಬಿದ್ದಿದೆ. ಈ ಹಿಂದೆ ಡಿ.21ರಂದು ಹೆಣ್ಣು ಚಿರತೆಯನ್ನು ಸೆರೆ ಹಿಡಿಯಲಾಗಿತ್ತು.
ಚಿರತೆಗಳ ಸೆರೆಗೆ ಅರಣ್ಯಾಧಿ ಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡುವ ಜತೆಗೆ ಸ್ಥಳೀಯರ ಸಹಕಾರದೊಂದಿಗೆ ಪ್ರತಿದಿನ ಕೂಂಬಿಂಗ್
ನಡೆಸುತ್ತಿದ್ದರು. ಸೋಮಲಾಪುರ, ದೇವಲಾಪುರ, ಮೆಟ್ರಿ, ದರೋಜಿ ಸೇರಿ 11 ಕಡೆ ಬೋನುಗಳನ್ನು ಹಾಗೂ ಮೂರು ಡಿಜಿಟಲ್ ಕ್ಯಾಮೆರಾ ಅಳವಡಿಸಿ
ಕ್ರಮ ಕೈಗೊಂಡಿದ್ದರು. “ಈಗಾಗಲೇ ಚಿರತೆ ದಾಳಿಗೆ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ. ಇದರಿಂದ ಗ್ರಾಮಗಳಲ್ಲಿ ಶೋಕದ ವಾತಾವರಣ
ನಿರ್ಮಾಣವಾಗಿದೆ. ಈ ಹಿಂದೆ ಹೆಣ್ಣು ಚಿರತೆ, ಈಗ ಗಂಡು ಚಿರತೆ ಬೋನಿಗೆ ಬಿದ್ದಿದೆ’ ಎಂದು ದೇವಲಾಪುರ ಗ್ರಾಪಂ ಅಧ್ಯಕ್ಷ ಗೌಡ್ರು ಸುರೇಶಗೌಡ
ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ