ಸಾಹಿತ್ಯ ಕ್ಷೇತ್ರಕ್ಕೆ ಹವ್ಯಕರ ಕೊಡುಗೆ ದೊಡ್ಡದು


Team Udayavani, Dec 29, 2018, 6:25 AM IST

sahitya.jpg

ಬೆಂಗಳೂರು: ಉದ್ಯಾನ ನಗರಿಯ ಅರಮನೆ ಮೈದಾನದ ರಾಯಲ್‌ ಸೆನೆಟ್‌ ಹಾಲ್‌ನಲ್ಲಿ ಎರಡನೇ ವಿಶ್ವ ಹವ್ಯಕ ಸಮ್ಮೇಳನ ಪ್ರಯುಕ್ತ ದಾಖಲೆಯ 100 ಲೇಖಕರ ಪುಸ್ತಕಗಳನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು. 

ಸಂಸ್ಕೃತ ವಿವಿಯ ವಿಶ್ರಾಂತ ಕುಲಪತಿ ಡಾ.ಮಲ್ಲೇಪುರಂ ಜಿ. ವೆಂಕಟೇಶ್‌, ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಹಿರಿಯ ಸಾಹಿತಿ, ವಿದ್ಯಾ ವಾಚಸ್ಪತಿ ಡಾ. ಅರಳು ಮಲ್ಲಿಗೆ ಪಾರ್ಥ ಸಾರಥಿ, ಅಖೀಲ ಹವ್ಯಕ ಮಹಾಸಭೆಯ ಅಧ್ಯಕ್ಷ ಡಾ.ಗಿರಿಧರ ಕಜೆ ಪುಸ್ತಕಗಳನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲೇಪುರಂ ಜಿ. ವೆಂಕಟೇಶ್‌, ಲೇಖಕ ದೇಶದ ಆಸ್ತಿ. ಅದೇ ರೀತಿ ಹವ್ಯಕ ಸಮಾಜ ದೇಶದ ಆಸ್ತಿ ಎನ್ನುವುದಕ್ಕೆ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾದ 100 ಪುಸ್ತಕಗಳೇ ಸಾಕ್ಷಿ ಎಂದು ಕೊಂಡಾಡಿದರು. ಸಾಹಿತ್ಯ ಮತ್ತು ಸಾಹಿತಿಯ ನಡುವೆ ಅವಿನಾಭಾವ ಸಂಬಂಧ ಇದೆ.

ಸಾಹಿತಿ ಇಲ್ಲದೆ ಸಾಹಿತ್ಯವನ್ನು ನೋಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ ಅವರು, ಸಾಹಿತ್ಯ ಕ್ಷೇತ್ರಕ್ಕೆ ಸಮುದಾಯದ ಕೊಡುಗೆ ಅನನ್ಯ. ಅದರಲ್ಲೂ ಯಕ್ಷಗಾನ ಕ್ಷೇತ್ರ, ವೇದಾಂತ, ಜ್ಯೋತಿಷ್ಯ, ಸಂಗೀತ, ಆಯುರ್ವೇದ ಕ್ಷೇತ್ರದಲ್ಲಿ ಅಭುತಪೂರ್ವ ಸಾಧನೆ ಮಾಡಿ ಕೃತಿಗಳನ್ನು ರಚನೆ ಮಾಡಿದವರಿದ್ದಾರೆ. ಹಾಗೇ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಸಾಹಿತ್ಯದಲ್ಲೂ ಹಲವರು ಉತ್ತಮ ಕೃತಿಗಳನ್ನು ನೀಡಿದ್ದಾರೆ ಎಂದರು.

ಉತ್ತಮ ಊಟೋಚಾರ: ಹವ್ಯಕರ ಊಟ-ಉಪಚಾರಗಳ ಬಗ್ಗೆ ಶ್ಲಾ ಸಿದ ಮಲ್ಲೇಪುರಂ ವೆಂಕಟೇಶ್‌, ತಂಬುಳಿಯುಕ್ತವಾದ ಊಟ ನಿಜಕ್ಕೂ ಸತ್ವಭರಿತವಾದದ್ದು. ಬೇರೆ ಬೇರೆ ರೀತಿಯ ಪಾಕಗಳು ನಮ್ಮ ದೇಹ ಸ್ವಾಸ್ಥ್ಯಕ್ಕೆ ನೆರವಾಗುತ್ತವೆ ಎಂದರು.

ವಿದ್ಯಾ ವಾಚಸ್ಪತಿ ಡಾ. ಅರಳು ಮಲ್ಲಿಗೆ ಪಾರ್ಥ ಸಾರಥಿ, ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಸಮುದಾಯದ 75 ಲೇಖಕರನ್ನು ಸನ್ಮಾನಿಸಿದರು. ಅಖೀಲ ಹವ್ಯಕ ಮಹಾಸಭೆಯ ಅಮೃತ ಮಹೋತ್ಸವದ ಅಂಗವಾಗಿ 75 ಪುಸ್ತಕಗಳ ಬಿಡುಗಡೆಗೆ ಯೋಜನೆ ರೂಪಿಸಲಾಗಿದ್ದರೂ, ಕಾರ್ಯಕ್ರಮದ ದಿನ 100 ಕೃತಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

ಹವ್ಯಕ ಸಮುದಾಯದ ಲೇಖಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅದನ್ನು ಹೆಚ್ಚಿಸಲು ನಿರ್ಧರಿಸಲಾಯಿತು ಎಂದು ಸಮ್ಮೇಳನದ  ಮಾಧ್ಯಮ ವಿಭಾಗದ ಸಂದೇಶ್‌ ತಲಕಾಲಕೊಪ್ಪ “ಉದಯವಾಣಿ’ಗೆ ತಿಳಿಸಿದ್ದಾರೆ.  ಇದು ಲಿಮ್ಕಾ ದಾಖಲೆಗಳ ಪುಸ್ತಕದಲ್ಲಿ ಸೇರಿಸಲಿದೆ ಎಂದು ಸಮ್ಮೇಳನ ಆಯೋಜಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.