ವಿನಯ್ “ಅನಂತ’ನಿಗೆ ಕಿಚ್ಚ ಸುದೀಪ್ ಸಾಥ್
Team Udayavani, Dec 30, 2018, 11:14 AM IST
ಸುಧೀರ್ ಶಾನುಭೋಗ್ ನಿರ್ದೇಶನದ ರಾಯಲ್ ಸ್ಟಾರ್ ವಿನಯ್ ರಾಜ್ಕುಮಾರ್ ಅಭಿನಯದ “ಅನಂತು V/S ನುಸ್ರತ್’ ಈಗಾಗಲೇ ರಾಜ್ಯಾದ್ಯಂತ ಬಿಡುಗಡೆಯಾಗಿ ಸಿನಿರಸಿಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದುಕೊಂಡಿದ್ದು, ವಿನಯ್ ರಾಜ್ಕುಮಾರ್ ಕರಿ ಕೋಟು ಧರಿಸಿ ವಕೀಲನ ಅವತಾರದಲ್ಲಿ ಕೋರ್ಟ್ನಲ್ಲಿ ನ್ಯಾಯದ ಪಾಠದ ಜೊತೆಗೆ ಪ್ರೀತಿ ಪಾಠವನ್ನು ಆರಂಭಿಸಿದ್ದಾರೆ. ವಕೀಲ ಅನಂತ ಕೃಷ್ಣ ಎಂಬ ಪಾತ್ರದಲ್ಲಿ ಅಭಿನಯಿಸಿರುವ ವಿನಯ್ಗೆ ಲತಾ ಹೆಗ್ಡೆ ನಾಯಕಿಯಾಗಿದ್ದಾರೆ.
ವಿನಯ್ ಇಲ್ಲಿ ಸಾಮಾನ್ಯ ವಕೀಲನಾದರೆ ಲತಾ ಹೆಗ್ಡೆ ಜಡ್ಜ್ ಪಾತ್ರಧಾರಿ ನುಸ್ರತ್ ಫಾತಿಮಾ ಆಗಿ ಕಾಣಿಸಿಕೊಂಡಿದ್ದಾರೆ. ಇದೊಂದು ಹಾಸ್ಯ ಮಿಶ್ರಿತ ನವಿರಾದ ಪ್ರೇಮಕಥೆಯಾಗಿದ್ದು, ಜಡ್ಜ್ಗೆ ಮನಸೋತಿರುವ ವಕೀಲನ ಕಥೆ ಚಿತ್ರದಲ್ಲಿದೆ. ಇನ್ನು ಸ್ಯಾಂಡಲ್ವುಡ್ನ ಸ್ಟಾರ್ ಗಳೂ ಈಗಾಗಲೇ ಚಿತ್ರಕ್ಕೆ ಶುಭಕೋರಿದ್ದು, ಇದೀಗ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರಕ್ಕೆ ಆಲ್ ದಿ ಬೆಸ್ಟ್ ಎಂದಿದ್ದಾರೆ.
ಯೆಸ್, “ಅನಂತು V/S ನುಸ್ರತ್’ ಚಿತ್ರಕ್ಕೆ ಈಗಾಗಲೇ ಶುಭಾಶಯಗಳ ಮಹಾಪೂರ ಹರಿದುಬರುತ್ತಿದ್ದು, ಈ ಬಗ್ಗೆ ಕಿಚ್ಚ ಸುದೀಪ್ ತಮ್ಮ ಟ್ವೀಟರ್ ಖಾತೆಯಲ್ಲಿ “ಸಿನಿಮಾ ಕುರಿತು ಒಳ್ಳೆಯ ವಿಮರ್ಶೆ ಕೇಳಿ ಬರುತ್ತಿದೆ. ಹೀಗಾಗಿ ವಿನಯ್ ಮತ್ತು ಚಿತ್ರತಂಡವರಿಗೆ ಶುಭಾಶಯ. ಪರಿಶ್ರಮಕ್ಕೆ ತಕ್ಕದಾದ ಫಲ ಸಿಕ್ಕಿದೆ’ ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯವನ್ನು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…