ದೇವಲಾಪುರದಲ್ಲಿ ಬೋನಿಗೆ ಬಿದ್ದ 3ನೇ ನರಭಕ್ಷಕ ಚಿರತೆ
Team Udayavani, Dec 31, 2018, 12:30 AM IST
ಕಂಪ್ಲಿ: ತಾಲೂಕಿನ ದೇವಲಾಪುರ ಗ್ರಾಮದ ಕರೆಗುಡ್ಡದ ಹೊಲದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಮತ್ತೂಂದು ನರಭಕ್ಷಕ ಚಿರತೆ ಭಾನುವಾರ ಬೆಳಗಿನ ಜಾವ ಸೆರೆ ಸಿಕ್ಕಿದೆ. ಆದರೆ ತಾಲೂಕಿನ ಮೆಟ್ರಿ ಗ್ರಾಮದ ಶಿವಪುರ ಶಾಲೆ ಹಿಂಭಾಗದ ಗುಡ್ಡದಲ್ಲಿ ಕುರಿಗಳಿಗೆ ತಪ್ಪಲು ತರಲು ಹೋಗಿದ್ದ ಕುರಿಗಾಯಿಗೆ ಮತ್ತೂಂದು ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಸೋಮಲಾಪುರ, ದೇವಲಾಪುರ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನು ಬಲಿ ತೆಗೆದುಕೊಂಡ ನರಭಕ್ಷಕ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರಿದಿದೆ. ದೇವಲಾಪುರದ ಕರೆಗುಡ್ಡದ ಪಂಪಾಪತಿಯ ಹೊಲದಲ್ಲಿ ಇಟ್ಟಿದ್ದ ಬೋನಿಗೆ ಭಾನುವಾರ ಬೆಳಗಿನ ಜಾವ 5 ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ಡಿ.11ರಂದು ಸೋಮಲಾಪುರದಲ್ಲಿ ಬಾಲಕ ಹಾಗೂ ಡಿ.25ರಂದು ದೇವಲಾಪುರ ಗ್ರಾಮದ ಕರೆಗುಡ್ಡದ ಹತ್ತಿ ಹೊಲದಲ್ಲಿ ಬಾಲಕಿ ಬಲಿ ಪಡೆದಿತ್ತು. ಅರಣ್ಯಾಧಿಕಾರಿಗಳ ನಿರಂತರ ಕಾರ್ಯಾಚರಣೆಗೆ ಒಂದು ಹೆಣ್ಣು, ಒಂದು ಗಂಡು ಚಿರತೆಯನ್ನು ಸೆರೆ ಹಿಡಿಯಲಾಗಿತ್ತು. ಆದರೆ, ಇನ್ನೂ ಈ ಭಾಗದಲ್ಲಿ ಚಿರತೆಗಳಿವೆ ಎಂಬ ಹಿನ್ನೆಲೆ ಅರಣ್ಯ ಅ ಧಿಕಾರಿಗಳು ಆಯಾ ಸ್ಥಳಗಳಲ್ಲಿ ಬೋನುಗಳನ್ನಿರಿಸಿ ಶೋಧ ಕಾರ್ಯ ತೀವ್ರಗೊಂಡಿದ್ದರಿಂದ ಬೆಳಗಿನ ಜಾವ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ