ದ್ವೀಪಗಳ ಹೆಸರು ಬದಲು


Team Udayavani, Dec 31, 2018, 12:30 AM IST

28.jpg

ಕಾರ್‌ ನಿಕೋಬಾರ್‌/ಪೋರ್ಟ್‌ಬ್ಲೇರ್‌: ಅಂಡಮಾನ್‌ ಮತ್ತು ನಿಕೋಬಾರ್‌ನ ಮೂರು ದ್ವೀಪಗಳಿಗೆ ಪ್ರಧಾನಿ ನರೇಂದ್ರ ಮೋದಿ ಮರು ನಾಮಕರಣ ಮಾಡಿದ್ದಾರೆ. ನೇತಾಜಿ ಸುಭಾಶ್ಚಂದ್ರ ಬೋಸ್‌ ತ್ರಿವರ್ಣ ಧ್ವಜವನ್ನು ಹಾರಿಸಿ 75 ವರ್ಷಗಳು ಪೂರ್ತಿಗೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ರೋಸ್‌ ಐಲ್ಯಾಂಡ್‌ ದ್ವೀಪವನ್ನು ನೇತಾಜಿ ಸುಭಾಶ್ಚಂದ್ರ ಬೋಸ್‌ ದ್ವೀಪ, ನೀಲ್‌ ಐಲ್ಯಾಂಡ್‌ ಅನ್ನು ಶಹೀದ್‌ ದ್ವೀಪ, ಮತ್ತು ಹ್ಯಾವ್ಲಾಕ್‌ ದ್ವೀಪವನ್ನು ಸ್ವರಾಜ್‌ ದ್ವೀಪ ಎಂದು ಪ್ರಧಾನಿಯವರು ಹೊಸ ಹೆಸರಿನಿಂದ ಕರೆದಿದ್ದಾರೆ. ಇದರ ಜತೆಗೆ ವಿಶೇಷ ಅಂಚೆ ಚೀಟಿ, ಅಂಚೆ ಕವರ್‌, ಮತ್ತು 75 ರೂ. ಮೌಲ್ಯದ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. ಬೋಸ್‌ ಹೆಸರಿನಲ್ಲಿ ಡೀಮ್ಡ್ ವಿವಿ ಆರಂಭ ಮಾಡುವ ಬಗ್ಗೆಯೂ ಅವರು ಪ್ರಕಟಿಸಿದ್ದಾರೆ.

ಶ್ಲಾಘನೆ: ಹದಿನಾಲ್ಕು ವರ್ಷಗಳ ಹಿಂದೆ ಅಂಡಮಾನ್‌-ನಿಕೋಬಾರ್‌  ದ್ವೀಪ ಸಮೂಹಕ್ಕೆ ಅಪ್ಪಳಿಸಿದ ಸುನಾಮಿಯ ಹೊರತಾಗಿಯೂ ಬುಡಕಟ್ಟು ಜನಾಂಗ ಅದನ್ನು ಎದುರಿಸಿ ನಿಂತದ್ದನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಭಾನುವಾರ ದ್ವೀಪ ಸಮೂಹಕ್ಕೆ ಭೇಟಿ ನೀಡಿ 2004ರ ದುರಂತ ದಲ್ಲಿ ಮಡಿದವರಿಗೆ ಗೌರವ ಅರ್ಪಿಸಿದರು. ಜತೆಗೆ ವಿವಿಧ ಅಭಿ ವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಕಾರ್‌ ನಿಕೋಬಾರ್‌ನ ಬಿಜೆಆರ್‌ ಸ್ಟೇಡಿಯಂನಲ್ಲಿ ಅವರು ಮಾತನಾಡಿದರು. 

ಬುಡಕಟ್ಟು ಜನಾಂಗದವರು ಅನುಸರಿಸುತ್ತಿರುವ ಕುಟುಂಬ ಪದ್ಧತಿ ಭಾರತದ ಇತರ ಭಾಗದವರಿಗೂ ಮಾದರಿ ಎಂದು ಪ್ರಧಾನಿ ಮೋದಿ ಕೊಂಡಾಡಿದರು. ಸಮುದ್ರ ಕೊರೆತ ತಡೆಗಟ್ಟುವ ನಿಟ್ಟಿನಲ್ಲಿ ತಡೆಗೋಡೆಯ ನಿರ್ಮಾಣ ಕಾಮಗಾರಿ ಶೀಘ್ರವೇ ಆರಂಭ ವಾಗಲಿದೆ ಎಂದರು. 50 ಕೋಟಿ ರೂ. ಮೌಲ್ಯದ ಈ ಕಾಮಗಾರಿ ಶೀಘ್ರವೇ ಆರಂಭ ವಾಗಲಿದೆ ಎಂದಿದ್ದಾರೆ. 

ಗೌರವ ಅರ್ಪಣೆ: ಪೋರ್ಟ್‌ಬ್ಲೇರ್‌ನಲ್ಲಿರುವ ಸೆಲ್ಯುಲರ್‌ ಜೈಲಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಗೌರವ ಅರ್ಪಿಸಿದರು. ಜೈಲಿನ ಆವರಣದಲ್ಲಿರುವ ವೀರ್‌ ಸಾವರ್ಕರ್‌ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದರು. ಜೈಲಿನ ಕೇಂದ್ರ ಭಾಗಕ್ಕೆ ತೆರಳಿದ ಅವರು, ಮಾರ್ಬಲ್‌ನಲ್ಲಿ ಕೆತ್ತಲಾಗಿರುವ ರಾಜಕೀಯ ಕೈದಿಗಳ ಹೆಸರುಗಳನ್ನು ಓದಿಕೊಂಡರು. 

ಋಣಾತ್ಮಕತೆ ಬದಲು ಧನಾತ್ಮಕತೆಯನ್ನು ಪಸರಿಸೋಣ
ಪಾಕ್ಷಿಕ ರೇಡಿಯೋ ಕಾರ್ಯಕ್ರಮ ಮನ್‌ಕಿ ಬಾತ್‌ನಲ್ಲಿ ಭಾನುವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಋಣಾತ್ಮಕತೆಯನ್ನು ಪಸರಿಸುವುದು ಅತ್ಯಂತ ಸುಲಭ. ಆದರೆ ಅದನ್ನು ತಡೆದು, ಜನರು ಧನಾತ್ಮಕತೆಯನ್ನು ಪಸರಿಸಲು ಒಂದಾಗ ‌ಬೇಕಿದೆ ಎಂದಿದ್ದಾರೆ. ಜನರು ಒಟ್ಟಾರೆಯಾಗಿ ಶ್ರಮಿಸಿದ್ದರಿಂದಾಗಿ 2018ರಲ್ಲಿ ಬಹಳಷ್ಟು ಸಾಧನೆಯನ್ನು ನಾವು ಮಾಡಲು ಸಾಧ್ಯ ವಾಗಿದೆ ಎಂದಿದ್ದಾರೆ.

ಈ ವರ್ಷದ ಕೊನೆಯ ಮನ್‌ ಕಿ ಬಾತ್‌ ರೇಡಿಯೋ ಕಾರ್ಯಕ್ರಮ ಇದಾಗಿದೆ. 2019ರಲ್ಲೂ ಇದೇ ಪರಿಶ್ರಮ ಮತ್ತು ಪ್ರಗತಿ ಮುಂದುವರಿಯುತ್ತದೆ ಎಂದು ನಾನು ನಂಬಿದ್ದೇನೆ ಎಂದಿದ್ದಾರೆ. ಇದೇ ವೇಳೆ ಹಲವು ಧನಾತ್ಮಕ ಕಥೆಗಳನ್ನು ಬಿತ್ತರಿ ಸುವ ವೆಬ್‌ಸೈಟ್‌ಗಳ ಬಗ್ಗೆಯೂ ಮೋದಿ ಈ ವೇಳೆ ಮಾತ ನಾಡಿದ್ದಾರೆ. ಈ ವರ್ಷದಲ್ಲಿ ವಿದ್ಯುತ್‌ ಪ್ರತಿ ಗ್ರಾಮಕ್ಕೂ ತಲುಪಿದೆ. ಆಯುಷ್ಮಾನ್‌ ಭಾರತ ವಿಮೆ ಯೋಜನೆಯಿಂದ ದೇಶದ ಹಲವರಿಗೆ ಅನುಕೂಲವಾಗಿದೆ ಎಂದಿದ್ದಾರೆ. ಅಲ್ಲದೆ 2019ರಲ್ಲಿ ನಡೆಯಲಿರುವ ಕುಂಭ ಮೇಳದ ಬಗ್ಗೆಯೂ ಮಾತನಾಡಿದ ಅವರು, ಈ ಬಾರಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ.

ಕೆಂಪು ಕೋಟೆಯಲ್ಲಿ ಆಜಾದ್‌ ಹಿಂದ್‌ ಸರಕಾರರಚನೆಯ 75ನೇ ವರ್ಷಾಚರಣೆ ಪ್ರಯುಕ್ತ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಈ ಐತಿಹಾಸಿಕ ಸ್ಮಾರಕದಲ್ಲಿ ಇದುವರೆಗೆ ಸ್ವಾತಂತ್ರ್ಯ ದಿನಕ್ಕೆ ಮಾತ್ರ ರಾಷ್ಟ್ರಧ್ವಜ ಹಾರಿಸಲಾಗುತ್ತಿತ್ತು. ಮೊದಲ ಬಾರಿಗೆ ಈ ಐತಿಹಾಸಿಕ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ದಾರ್‌ ವಲ್ಲಭ ಭಾಯ್‌ ಪಟೇಲ್‌ ಗೌರ ವಾರ್ಥ ಗುಜರಾತ್‌ನ ಕೇವಡಿಯಾದಲ್ಲಿ ಏಕತಾ ಪ್ರತಿಮೆ ಸ್ಥಾಪಿಸಲಾಗಿದೆ ಎಂದೂ ವಿವರಿಸಿದ್ದಾರೆ ಪ್ರಧಾನಿ. 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.