ಕೋಟ್ಯಧಿಪತಿಗಳಾದ ಕಾರ್ಮಿಕರು!


Team Udayavani, Dec 31, 2018, 12:30 AM IST

31.jpg

ಭೋಪಾಲ: ಮಧ್ಯ ಪ್ರದೇಶದ ಇಬ್ಬರು ಕಾರ್ಮಿಕರ ಹೊಸ ವರ್ಷದಲ್ಲಿ ಅದೃಷ್ಟ ಖುಲಾಯಿಸಿದೆ. ಪನ್ನಾ ವಜ್ರ ಗಣಿಯಲ್ಲಿ ಶೋಧ ನಡೆಸುತ್ತಿದ್ದ ಮೋತಿಲಾಲ್‌ ಹಾಗೂ ರಘುವೀರ್‌ ಪ್ರಜಾಪತಿಗೆ ಎರಡು ತಿಂಗಳ ಹಿಂದಷ್ಟೇ ಅತ್ಯಂತ ದೊಡ್ಡ ವಜ್ರದ ಹರಳು ಸಿಕ್ಕಿದೆ. ಇದನ್ನು 2.5 ಕೋಟಿ ರೂ.ಗೆ ಹರಾಜು ಹಾಕಲಾಗಿದೆ. ಈ ವಜ್ರ 42.9 ಕ್ಯಾರಟ್‌ ಇತ್ತು. ಶುಕ್ರವಾರ ನಡೆಸಿದ ಹರಾಜಿನಲ್ಲಿ ಪ್ರತಿ ಕ್ಯಾರಟ್‌ಗೆ 6 ಲಕ್ಷ ರೂ. ಮೌಲ್ಯ ಕಟ್ಟಲಾಗಿದೆ.

ಝಾನ್ಸಿ ಮೂಲದ ಆಭರಣಕಾರ ಮತ್ತು ಓರ್ವ ಬಿಎಸ್‌ಪಿ ನಾಯಕ ಈ ವಜ್ರವನ್ನು ಹರಾಜಿನಲ್ಲಿ ಖರೀದಿಸಿದ್ದಾರೆ ಎಂದು ಪನ್ನಾದ ವಜ್ರ ಗಣಿಯ ಅಧಿಕಾರಿ ಸಂತೋಷ್‌ ಸಿಂಗ್‌ ಹೇಳಿದ್ದಾರೆ. ಈಗಾಗಲೇ ಕಾರ್ಮಿಕರಿಗೆ ಶೇ.20ರಷ್ಟು ಪಾವತಿ ಮಾಡಲಾಗಿದೆ. ಉಳಿದ ಮೊತ್ತವನ್ನು ಹರಾಜು ಪಡೆದವರು ವಜ್ರವನ್ನು ಸ್ವಾಧೀನಪಡಿಸಿಕೊಂಡ ಅನಂತರ ಪಾವತಿ ಮಾಡುವರು. ತೆರಿಗೆ ಹಾಗೂ ಇತರ ಶುಲ್ಕಗಳನ್ನು ಕಳೆದು 2.30 ಕೋಟಿ ರೂ. ಇಬ್ಬರಿಗೆ ಸಿಗಲಿದೆ. ಮೋತಿಲಾಲ್‌ ಹಾಗೂ ರಘುವೀರ್‌ ಇದನ್ನು ಸಮಾನವಾಗಿ ಹಂಚಿಕೊಳ್ಳಲಿದ್ದು, ತಮ್ಮ ಮಕ್ಕಳ ಶಿಕ್ಷಣಕ್ಕೆ ಹಾಗೂ ಸಾಲ ಮರು ಪಾವತಿಗೆ ವೆಚ್ಚ ಮಾಡಲಿದ್ದಾರೆ.

ಪನ್ನಾ ವಜ್ರದ ಗಣಿಯಲ್ಲಿ ಹಲವು ದಶಕಗಳಿಂದಲೂ ವಾಣಿಜ್ಯಿಕವಾಗಿ ವಜ್ರ ಉತ್ಖನನ ಮಾಡುತ್ತಿಲ್ಲ. ಆದರೆ ಇದು ಸಾರ್ವಜನಿಕರಿಗೆ ಮುಕ್ತ ವಾಗಿದ್ದು, ಯಾರು ಬೇಕಾ ದರೂ ಇಲ್ಲಿ ಅಗೆದು ವಜ್ರವನ್ನು ತೆಗೆಯಬಹುದು. ಆದರೆ ಇದನ್ನು ಪನ್ನಾ ವಜ್ರ ನಿರ್ವಹಣೆ ಇಲಾಖೆಗೆ ನೀಡಬೇಕಿರುತ್ತದೆ. ಹೀಗೆ ಸಿಕ್ಕ ವಜ್ರವನ್ನು ಇಲಾಖೆಯು ಹರಾಜು ಹಾಕುತ್ತದೆ. ಈ ಹಿಂದೆ 1961ರಲ್ಲಿ 44.55 ಕ್ಯಾರಟ್‌ ವಜ್ರ ಸಿಕ್ಕಿತ್ತು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.