ಸ್ಥಾನ ನಿಭಾಯಿಸಲು ಆಗುತ್ತಿಲ್ಲ: ವಿಶ್ವನಾಥ್
Team Udayavani, Jan 2, 2019, 1:39 AM IST
ಬೆಂಗಳೂರು: ಆರೋಗ್ಯ ಸಮಸ್ಯೆಯಿಂದಾಗಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಆಗುತ್ತಿಲ್ಲ ಎಂದಷ್ಟೇ ಹೇಳಿದ್ದೇನೆ ಹೊರತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿಲ್ಲ ಎಂಬುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ. ನನಗೆ ಕೊಟ್ಟಿರುವ ಜವಾಬ್ದಾರಿ ವಾಪಸ್ ಪಡೆಯರಿ ಅಂತ ಕೇಳಬೇಕು ಅಂದುಕೊಂಡಿದ್ದೇನೆ ಎಂದೂ ತಿಳಿಸಿದ್ದಾರೆ.
ಗುರುವಾರ ಪಕ್ಷದ ಶಾಸಕರು, ಮಾಜಿ ಶಾಸಕರು, ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆ ಇದೆ. ಅಲ್ಲಿ ದೇವೇಗೌಡರ ಮುಂದೆ ಪ್ರಸ್ತಾವಿಸುತ್ತೇನೆ. ದೇವೇಗೌಡರು ಹಿರಿಯರು, ಅನುಭವಿಗಳು, ಅವರು ಹೇಳಿದಂತೆ ಕೇಳುತ್ತೇನೆ ಎಂದರು. ದೇವೇಗೌಡ ಅವರು ನನ್ನ ಜೀವನದ ಸಂಧ್ಯಾ ಕಾಲದಲ್ಲಿ ನನ್ನನ್ನು ಶಾಸಕನಾಗಲು ಅವಕಾಶ ಕೊಟ್ಟಿದ್ದಾರೆ. ಹೀಗಾಗಿ ಅವರ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು.
ಮೂಲಗಳ ಪ್ರಕಾರ ಎಚ್. ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ತೀರ್ಮಾನಿಸಿದ್ದಾರೆ. ದೇವೇಗೌಡ ಮತ್ತು ಕುಮಾರ ಸ್ವಾಮಿ ಅವರು ಮನವೊಲಿಸಿ ಅಧಿಕಾರ ಕೊಡುವ ಕುರಿತು ಭರವಸೆ ನೀಡಿದರೆ ತೀರ್ಮಾನ ಬದಲಾಯಿಸಬಹುದು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್ ಪರೀಕ್ಷೆ
H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ