ಎಸ್‌.ಎಂ.ಕೃಷ್ಣರನ್ನುಭೇಟಿಯಾದ ಬಿಎಸ್‌ವೈ


Team Udayavani, Jan 3, 2019, 6:30 AM IST

blore-2.jpg

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಬುಧವಾರ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಸದಾಶಿವನಗರದ ನಿವಾಸಕ್ಕೆ ಯಡಿಯೂರಪ್ಪ ಅವರು ಆಗಮಿಸುತ್ತಿದ್ದಂತೆ ಹೊರಗೆ ಬಂದ ಎಸ್‌.ಎಂ.ಕೃಷ್ಣ ಅವರು ಹೂಗುತ್ಛ ನೀಡಿ ಆತ್ಮೀಯವಾಗಿ ಬರ ಮಾಡಿಕೊಂಡರು. ನಿನ್ನೆಯೇ ಬರಬೇಕಿತ್ತು, ಸಾಧ್ಯವಾಗಿರಲಿಲ್ಲ ತುಸು ತಡವಾಯಿತು ಎಂದು ಯಡಿಯೂರಪ್ಪ ಅವರು ಹೇಳಿದಾಗ, ಎಸ್‌.ಎಂ.ಕೃಷ್ಣ ಅವರು ನಗುತ್ತಲೇ ಪರವಾಗಿಲ್ಲ ಬಿಡಿ ಎಂದರು.

ಉಭಯ ನಾಯಕರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡಿದ ಎಸ್‌.ಎಂ.ಕೃಷ್ಣ , ಹೊಸ ವರ್ಷದ ಶುಭಾಶಯ ಕೋರಲು ತಮ್ಮ ನಿವಾಸಕ್ಕೆ ಬರುವುದಾಗಿ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ್ದೆ. ಆದರೆ ತಾವೇ ಬರುವುದಾಗಿ ಹೇಳಿ ಅವರೇ ಬಂದಿದ್ದಾರೆ. ಲೋಕಸಭೆ ಚುನಾವಣೆ ಕುರಿತಂತೆ ಚರ್ಚಿಸಿದ್ದೇವೆ.

ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ವಿಚಾರದ ಬಗ್ಗೆಯೂ ಯಡಿಯೂರಪ್ಪ ಅವರು ಪ್ರಸ್ತಾಪಿಸಿದ್ದಾರೆ. ನಾನು ಸಹ ಅದೇ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದೇನೆ ಎಂದು ಹೇಳಿದರು. 

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶವಿಲ್ಲ. ಸಚಿವ ಡಿ.ಕೆ. ಶಿವಕುಮಾರ್‌ ಅವರು ಹೊಸ ವರ್ಷದ ಶುಭಾಶಯ ಕೋರಲು ಆಗಮಿಸಿದ್ದರು. ಕಾಂಗ್ರೆಸ್‌ ಪಕ್ಷದಲ್ಲಿ ನನ್ನ ಬೆಂಬಲಿಗರು ಅಂತ ಏನೂ ಇಲ್ಲ. ನನಗೆ ಬಹಳ ಮಂದಿ ಪರಿಚಯಸ್ಥರಿದ್ದಾರೆ ಎಂದು ಹೇಳಿದರು.

ಪುತ್ರಿ ಶಾಂಭವಿ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಕುರಿತಾದ ಮಾತುಗಳ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಸ್‌.ಎಂ.ಕೃಷ್ಣ, ಈಗಷ್ಟೇ ಶಾಂಭವಿ ಹೆಸರನ್ನು ನಿಮ್ಮಿಂದ ಕೇಳುತ್ತಿದ್ದೇನೆ ಎಂದು ಹೇಳಿದರು. 

ಲೋಕಸಭಾ ಚುನಾವಣೆಗೆ ಎಸ್‌.ಎಂ.ಕೃಷ್ಣ ಅವರ ಸಹಕಾರದ ಬಗ್ಗೆ ಮಾತುಕತೆ ನಡೆಸಿದ್ದೇವೆ. ಎಲ್ಲೆಲ್ಲಿ ಸಹಕಾರ ಅಗತ್ಯವಿದೆ ಎಂಬುದನ್ನು ಹೇಳಲಾಗಿದ್ದು, ಪ್ರಚಾರದಲ್ಲಿ ಪಾಲ್ಗೊಳ್ಳಲು ಅವರೂ ಒಪ್ಪಿದ್ದಾರೆ. ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಅವರ ಸಹಕಾರದಿಂದಲೇ ಎರಡೂವರೆ ಲಕ್ಷ ಮತಗಳನ್ನು ಬಿಜೆಪಿ ಪಡೆದಿತ್ತು. ಮುಂದೆಯೂ ಅವರ ಸಹಕಾರ ಸಹಾಯವಾಗಲಿದೆ. 
 ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.