ದಶಕದ ಬಳಿಕ ಖಾಲಿ ಹುದ್ದೆಗಳ ಭರ್ತಿ


Team Udayavani, Jan 3, 2019, 7:18 AM IST

bbmp.jpg

ಬೆಂಗಳೂರು: ಬಿಬಿಎಂಪಿಯ ಆಡಳಿತ ಯಂತ್ರಕ್ಕೆ ವೇಗ ನೀಡಲು ಮುಂದಾಗಿರುವ ಪಾಲಿಕೆ, ದಶಕದ ಬಳಿಕ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಮುಂದಾಗಿದೆ.

ರಾಜ್ಯ ಸರ್ಕಾರ 2008ರಲ್ಲಿ 110 ಹಳ್ಳಿಗಳನ್ನು ಸೇರಿಸಿ ಪಾಲಿಕೆಯ ವಿಸ್ತೀರ್ಣವನ್ನು 250 ಚದರ ಮೀಟರ್‌ಗಳಿಂದ 800 ಚದರ ಮೀಟರ್‌ಗಳಿಗೆ ಹೆಚ್ಚಿಸಿತ್ತು. ಆದರೆ, ಪಾಲಿಕೆಗೆ ಹೆಚ್ಚುವರಿಯಾಗಿ ಹುದ್ದೆಗಳನ್ನು ಮಂಜೂರು ಮಾಡಿರಲಿಲ್ಲ. ಇದರೊಂದಿಗೆ ಸದ್ಯ ಪಾಲಿಕೆಗೆ ಮಂಜೂರಾಗಿರುವ ಹುದ್ದೆಗಳಲ್ಲಿಯೂ ಶೇ.50ಕ್ಕಿಂತ ಹೆಚ್ಚಿನ ಹುದ್ದೆಗಳು ಭರ್ತಿಯಾಗಿಲ್ಲ.

ಇದರಿಂದಾಗಿ ಆಡಳಿತಾತ್ಮಕ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವುದು ಪಾಲಿಕೆಗೆ
ಸವಾಲಿನ ಕೆಲಸವಾಗಿದೆ. ಜತೆಗೆ ಹಾಲಿ ಪಾಲಿಕೆ ನೌಕರರು ಒತ್ತಡದಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಸರ್ಕಾರ ದಿಂದ ಪಾಲಿಕೆಗೆ ಒಟ್ಟಾರೆ ಯಾಗಿ 17,391 ಹುದ್ದೆಗಳು ಮಂಜೂರಾಗಿದ್ದರೂ, ಆ ಪೈಕಿ 10 ಸಾವಿರಕ್ಕೂ ಹೆಚ್ಚಿನ ಹುದ್ದೆಗಳು ಹಲವು ವರ್ಷಗಳಿಂದ ಖಾಲಿಯಿವೆ. ಅದರಲ್ಲಿಯೂ ಪ್ರಮುಖವಾಗಿ ಸಾರ್ವಜನಿಕರಿಗೆ ಸೇವೆ ಒದಗಿಸುವ ಆರೋಗ್ಯ, ಕಾಮಗಾರಿ, ಸಾಮಾನ್ಯ ಆಡಳಿತ, ಶಿಕ್ಷಣ ವಿಭಾಗಗಳಲ್ಲಿ ಹೆಚ್ಚಿನ ಪ್ರಮಾಣದ ಖಾಲಿ ಹುದ್ದೆಗಳಿರುವುದು ಆಡಳಿತದ ಮೇಲೆ ದುಷ್ಪರಿಣಾಮ
ಬೀರುತ್ತಿದೆ ಎಂಬ ಆರೋಪಗಳು 

ಕೇಳಿಬಂದಿದ್ದವು. ಇದರಿಂದ ಎಚ್ಚೆತ್ತುಕೊಂಡಿರುವ ಪಾಲಿಕೆಯ ಆಡಳಿತ ವಿಭಾಗವು ಮೊದಲ ಹಂತದಲ್ಲಿ 17 ವಿಭಾಗಳಲ್ಲಿನ 867 ಹುದ್ದೆಗಳನ್ನು ಭರ್ತಿ ಮಾಡಿಕೊಡುವಂತೆ ಐಐಎಸ್‌ಸಿ ಮೊರೆ ಹೋಗಿತ್ತು. ಆದರೆ, ಐಐಎಸ್‌ಸಿ ಮೂಲಕ ನೇಮಕಾತಿ
ಮಾಡಿಕೊಳ್ಳಲು ಅವಕಾಶವಿಲ್ಲದ ಕಾರಣ ಇದೀಗ ಪಾಲಿಕೆಯಿಂದ ಕೆಪಿಎಸ್‌ ಸಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿಯೇ ಈ ಕುರಿತು ಕೆಪಿಎಸ್‌ಸಿಯಿಂದ ನೇಮಕಾತಿ ಆದೇಶ ಹೊರಬೀಳುವ ಸಾಧ್ಯತೆಯಿದೆ.

ಹೊರೆಯಾಗುತ್ತಿವೆ ಹೆಚ್ಚುವರಿ ಹುದ್ದೆಗಳು: ಪಾಲಿಕೆಯಲ್ಲಿ ಖಾಲಿಯಾಗುತ್ತಿರುವ ಪ್ರಮುಖ ಹುದ್ದೆಗಳು ಕಾಲಕಾಲಕ್ಕೆ ಭರ್ತಿಯಾಗದ ಹಿನ್ನೆಲೆಯಲ್ಲಿ ದರ್ಜೆ-1 ಹುದ್ದೆಯ ಅಧಿಕಾರಿಗಳಿಗೆ ತಮ್ಮ ವಿಭಾಗ ದೊಂದಿಗೆ ಹೆಚ್ಚುವರಿಯಾಗಿ ಮತ್ತೂಂದು ವಿಭಾಗದ ಜವಾಬ್ದಾರಿ ವಹಿಸಲಾಗಿದೆ. ಎರಡು ಮೂರು ವಿಭಾಗಗಳ ಕಾರ್ಯಗಳನ್ನು ನಿರ್ವಹಿಸಲಾಗದೆ ಅಧಿಕಾರಿಗಳು ಹೆಚ್ಚುವರಿ ಜವಾಬ್ದಾರಿ ಬೇಡವೆಂದು ಆಯುಕ್ತರಿಗೆ ಪತ್ರ ಬರೆದ ಉದಾಹರಣೆಯೂ ಇವೆ.

10 ವಲಯಗಳು ಹೆಸರಿಗೆ ಮಾತ್ರ: ಪಾಲಿಕೆಯ ಆಡಳಿತಾತ್ಮಕ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನುಕೂಲಕ್ಕಾಗಿ ಹಿಂದಿನ ಸರ್ಕಾರ ಪಾಲಿಕೆಯ ಎಂಟು ವಲಯಗಳನ್ನು ಹತ್ತು ವಲಯಗಳಾಗಿ ವಿಂಗಡಿಸಿ ಆದೇಶ ಹೊರಡಿಸಿದೆ. ಆದರೆ, ಈವರೆಗೆ ಎರಡು ಹೊಸ ವಲಯಗಳಿಗೆ ಅಗತ್ಯವಾದ ಕಚೇರಿ, ಸಿಬ್ಬಂದಿ, ಅಧಿಕಾರಿಗಳನ್ನು ನಿಯೋಜಿಸಿಲ್ಲ. ಒಂದು ವೇಳೆ ಎರಡು ವಲಯಗಳು ಕಾರ್ಯಾರಂಭ ಮಾಡಿ ಎಂಟು ವಲಯಗಳಲ್ಲಿನ ಸಿಬ್ಬಂದಿಯನ್ನೇ ಅಲ್ಲಿಗೆ ನಿಯೋಜಿಸಿದರೆ ಆಡಳಿತ ಯಂತ್ರದ ಕಾರ್ಯಕ್ಷಮತೆ ಕುಸಿಯುತ್ತದೆ ಎಂಬುದು ತಜ್ಞರ ಅಭಿಮತ. 

ಬಿಬಿಎಂಪಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಪಾಲಿಕೆಯ 17 ವಿಭಾಗಗಳಲ್ಲಿನ 867 ಹುದ್ದೆಗಳನ್ನು ಭರ್ತಿ ಮಾಡಿಕೊಡುವಂತೆ ಕೆಪಿಎಸ್‌ಸಿ ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ನೇಮಕಾತಿ ಪ್ರಕ್ರಿಯೆ ಮಾಡಿಕೊಡಲು ಕೆಪಿಎಸ್‌ಸಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲಿಯೇ ನೇಮಕಾತಿ ಆದೇಶ ಹೊರಬೀಳುವ ಸಾಧ್ಯತೆಯಿದೆ.
ರಂದೀಪ್‌, ವಿಶೇಷ ಆಯುಕ್ತರು (ಆಡಳಿತ)

ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.