ಸಿಬ್ಬಂದಿ ಕೊರತೆ: ವೇತನಕ್ಕೆ ನೌಕರರ ಪರದಾಟ


Team Udayavani, Jan 3, 2019, 9:29 AM IST

3-january-17.jpg

ಗುಳೇದಗುಡ್ಡ: ಇಲ್ಲಿಯ ಪುರಸಭೆಯಲ್ಲಿ ಲೆಕ್ಕ ಶಾಖೆಗೆ ಸಿಬ್ಬಂದಿ ಇಲ್ಲದ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಪುರಸಭೆ ಸಿಬ್ಬಂದಿ ವೇತನ ಸೇರಿದಂತೆ ಎಲ್ಲ ಹಣಕಾಸಿನ ವ್ಯವಹಾರಗಳು ಸ್ಥಗಿತಗೊಂಡಿದ್ದು, ಪುರಸಭೆ ಸಿಬ್ಬಂದಿ ಪರದಾಡುವಂತಾಗಿದೆ.

ಪುರಸಭೆಯ ಗುತ್ತಿಗೆ ಆಧಾರದ ಮೇಲೆ 59 ಜನ, 27 ಕಾಯಂ ನೌಕರರು ಮೂರು ತಿಂಗಳಿನಿಂದ ವೇತನವಿಲ್ಲದ ವಿಷಯ ಆಡಳಿತಾಧಿಕಾರಿಗಳು ಆಗಿರುವ ಉಪವಿಭಾಗಾಧಿ ಕಾರಿಗಳ ಗಮನಕ್ಕೂ ಬಂದಿಲ್ಲ. ಅಷ್ಟೇ ಅಲ್ಲದೇ ಸಿಬ್ಬಂದಿ ವೇತನದ ಜೊತೆಗೆ ಗುತ್ತಿಗೆದಾರರ ಬಿಲ್‌ ಹಾಗೂ ಇನ್ನಿತರೆ ಚೆಕ್‌ ಗಳೂ ಸಹ ಪಾಸಾಗದೇ ಸಾರ್ವಜನಿಕರು ಹಾಗೂ ಗುತ್ತಿಗೆದಾರರು ನಿತ್ಯ ಪುರಸಭೆಗೆ ಅಲೆಯುವಂತಾಗಿದೆ.

ಏಕೆ ವಿಳಂಬ?: ಪಟ್ಟಣದ ಪುರಸಭೆಯಲ್ಲಿ ಈ ಹಿಂದೆ ಲೆಕ್ಕಶಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಅಮಾನತು ಆಗಿದ್ದರಿಂದ ಸಿಬ್ಬಂದಿ ವೇತನ ಬಟಾವಡೆಯಾಗಿಲ್ಲ. ಆ ಸಿಬ್ಬಂದಿ ಅಮಾನತುಗೊಂಡ ನಂತರ ಬೇರೊಬ್ಬರನ್ನು ನಿಯೋಜಿಸಿಲ್ಲ. ನಿಯೋಜಿಸಿದರೂ ಬಾರದ ಸಿಬ್ಬಂದಿ: ಕಳೆದ ತಿಂಗಳು ಬಾಗಲಕೋಟೆ ಜಿಲ್ಲಾಡಳಿತ ಸಿಬ್ಬಂದಿ ನಿಯೋಜಿಸಿ ಆದೇಶಿಸಿದರೆ ಆ ಸಿಬ್ಬಂದಿ ಬಂದಿಲ್ಲ. ನಂತರ ಬೇರೋಬ್ಬರನ್ನು ನಿಯೋಜಿಸಿದರೂ ಅವರೂ ಬೇರೆ ಕಾರಣಗಳ ನೆಪ ಹೇಳಿ ಹಾಜರಾಗಿಲ್ಲ. ಬೇರೆ ಸಿಬ್ಬಂದಿಯ ಕೇಳುವ ಬದಲು ಪುರಸಭೆ ತಮ್ಮ ಸಿಬ್ಬಂದಿಯವರನ್ನೇ ಈ ಕಾರ್ಯಕ್ಕೆ ನಿಯುಕ್ತಿ ಮಾಡಿದ್ದರೇ ಸರಿ ಹೋಗುತ್ತಿತ್ತು. ಆದರೆ ಆ ವ್ಯವಸ್ಥೆ ಮಾಡದಿರುವುದಕ್ಕೆ ಪುರಸಭೆಗೆ ಸಿಬ್ಬಂದಿಗಳ ವೇತನ ಸಮಸ್ಯೆ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಬುಧವಾರ ಉಪವಿಭಾಗಾಧಿಕಾರಿ ಹಾಗೂ ಪುರಸಭೆ ಆಡಳಿತಾಧಿಕಾರಿ ಎಚ್‌.ಜಯಾ ಪುರಸಭೆಗೆ ಭೇಟಿ ನೀಡಿದಾಗ ಈ ವಿಷಯ ಗಮನಕ್ಕೆ ಬಂದಿದೆ. ಮುಖ್ಯಾಧಿಕಾರಿ, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು ಶುಕ್ರವಾರವೇ ಸಿಬ್ಬಂದಿ ವೇತನ ಹಾಗೂ ಇತರೇ ಬಿಲ್‌ಗ‌ಳ ಚೆಕ್‌ ಪಾಸಾಗಬೇಕು ಎಂದು ಸೂಚಿಸಿದ್ದಾರೆ.

ಗುಳೇದಗುಡ್ಡ ಪುರಸಭೆಯಲ್ಲಿ ಲೆಕ್ಕ ಶಾಖೆಗೆ ಸಿಬ್ಬಂದಿ ಇಲ್ಲದಿರುವ ವಿಷಯ ನನ್ನ ಗಮನಕ್ಕೆ ಬಂದಿರಲಿಲ್ಲ. ಪುರಸಭೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಗಮನಕ್ಕೆ ಬಂದಿದ್ದು, ಎರಡು ದಿನಗಳಲ್ಲಿ ಸರಿಪಡಿಸುವೆ. 
 ಎಚ್‌.ಜಯಾ, ಉಪವಿಭಾಗಾಧಿಕಾರಿ 
-ಆಡಳಿತಾಧಿಕಾರಿ, ಪುರಸಭೆ ಗುಳೇದಗುಡ್ಡ

ಜಿಲ್ಲಾಡಳಿತ ಸಿಬ್ಬಂದಿಯನ್ನು ಕಳೆದ ತಿಂಗಳು ನಿಯೋಜಿಸಿ ಆದೇಶಿಸಿದೆ. ಸಿಬ್ಬಂದಿ ಹಾಜರಾಗಿಲ್ಲ.ನಂತರ ಬೇರೋಬ್ಬರನ್ನು ನಿಯೋಜಿಸಿದರೂ ಅವರೂ ಬಂದಿಲ್ಲ. 
. ಏಸು ಬೆಂಗಳೂರು,
ಮುಖ್ಯಾಧಿಕಾರಿ, ಪುರಸಭೆ ಗುಳೇದಗುಡ್ಡ

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.