ಎಳೆಯರ ಹೆಜ್ಜೆಯಲ್ಲಿ ಮೀನಾಕ್ಷಿ ಕಲ್ಯಾಣ 


Team Udayavani, Jan 4, 2019, 12:30 AM IST

x-55.jpg

ಶ್ರೀ ವಿನಾಯಕ ಯಕ್ಷಗಾನ ಸಂಘ(ರಿ.), ಉಪ್ಪೂರು, ಇದರ ಎಳೆಯರ ಬಳಗದಿಂದ ಮೀನಾಕ್ಷಿ ಕಲ್ಯಾಣ ಎಂಬ ಯಕ್ಷಗಾನ ಪ್ರದರ್ಶನಗೊಂಡಿತು. ಮಲಯಧ್ವಜ ಭೂಪತಿಯ ಮಗಳು ಮೀನಾಕ್ಷಿ ಬಲು ಧೀರೆ. ಅವಳ ದೇಹ ವಿಶೇಷತೆಯಿಂದ ಚಿಂತಾಕ್ರಾಂತರಾದ ಭೂಪತಿಯನ್ನು ನಾರದರು ಬಂದು ಸಮಾಧಾನಿಸಿ, ಈಕೆಯು ದಿಗ್ವಿಜಯಗೈಯ್ಯುವ ಸಂದರ್ಭದಲ್ಲಿ ಯಾವಾತನಿಂದ ಇವಳ ದೇಹ ವಿಶೇಷತೆ ಮಾಯವಾಗುತ್ತದೋ ಆತನೇ ಇವಳ ಪತಿಯಾಗುತ್ತಾನೆ ಎಂದು ನಾರದರು ಹರಸುತ್ತಾರೆ. ಮುಂದೆ ಮೀನಾಕ್ಷಿ ದಿಗ್ವಿಜಯ ಕೈಗೊಂಡು ಸ್ತ್ರೀಮಲಯಾಳ ದೇಶದ ಪದ್ಮಗಂಧಿನಿಯೂ ಸೇರಿದಂತೆ ವಿವಿಧ ದೇಶದ ಮಹಾರಾಜರುಗಳನ್ನು ಜಯಿಸಿ, ಕಾಶ್ಮೀರದ ಅರಸ ಶೂರಸೇನನೊಡನೆ ಹೋರಾಡುವ ಸಂದರ್ಭದಲ್ಲಿ ನಾರದರ ಆಗಮನದಿಂದ ಅವರೀರ್ವರು ಅಜ್ಜ-ಮೊಮ್ಮಗಳು ಎನ್ನುವ ವಿಚಾರ ತಿಳಿಯುತ್ತದೆ. ಹಾಗೆಯೇ ಅಷ್ಟದಿಕಾ³ಲಕರನ್ನೂ ಜಯಿಸಿದ ಮೀನಾಕ್ಷಿ ಕೊನೆಯದಾಗಿ ಕೈಲಾಸದ ಶಿವನೊಂದಿಗೆ ಯುದ್ಧ ಗೈಯುವಾಗ ಅವಳ ದೇಹ ವಿಶೇಷತೆ ಮಾಯವಾಗಿ, ಆತನೇ ಪತಿಯಾಗುವಲ್ಲಿಗೆ ಪ್ರಸಂಗ ಕೊನೆಗೊಳ್ಳುತ್ತದೆ. ಮೀನಾಕ್ಷಿಯಾಗಿ ಪ್ರಾರ್ಥನಾ ಕೆ. ದಿಟ್ಟ ಅಭಿನಯದಿಂದ ಮನ ಸೆಳೆದರೆ, ಪದ್ಮಗಂಧಿನಿಯಾಗಿ ಪ್ರಾರ್ಥನಾ ಎನ್‌., ಶೂರಸೇನನಾಗಿ ವೈಭವ್‌, ದೇವೇಂದ್ರನಾಗಿ ಸ್ವಸ್ತಿಕ್‌, ಈಶ್ವರನಾಗಿ ಶ್ರಾವ್ಯ, ಮದನಾಂಗಿಯಾಗಿ ಅಮೃತಾ, ಗುಣವಂತೆಯಾಗಿ ಯಶಸ್ವಿನಿ ಇವರುಗಳು ಪಾತ್ರದ ಗತ್ತು ಗೈರತ್ತುಗಳನ್ನು ಅಭಿವ್ಯಕ್ತಿ ಗೊಳಿಸಿದ ರೀತಿ ಚೆನ್ನಾಗಿತ್ತು. ಮೀನಾಕ್ಷಿಯ ಮಂತ್ರಿಯಾಗಿ ಸಾತ್ವಿಕ್‌ ಆರ್‌., ಕಿರಾತನಾಗಿ ವಿಶ್ವಾಸ್‌, ಅಗ್ನಿಯಾಗಿ ಸೌಜನ್ಯ, ಭೃಕುಟಿಯಾಗಿ ನಿತಿನ್‌, ನಂದಿಯಾಗಿ ಅಕ್ಷಯ್‌, ಕಾಲಭೈರವನಾಗಿ ಹರ್ಷಿತ್‌, ವೀರಭದ್ರನಾಗಿ ಶ್ರೀಶ, ಕಿರಾತ ಪಡೆ ನಾಯಕನಾಗಿ ದೈವಿಕ್‌, ನಾರದ ಮತ್ತು ಭೃಂಗಿಯಾಗಿ ಸಾತ್ವಿಕ್‌ ತಮ್ಮ ಪಾತ್ರಗಳನ್ನು ಸೊಗಸಾಗಿ ನಿರ್ವಹಿಸಿದರು. ಪ್ರಾರ್ಥನೆಯಲ್ಲಿ ಪ್ರಾಪ್ತಿ, ಪ್ರಣಮ್ಯ, ತೇಜಸ್ವಿನಿ, ಸಮೃದ್ಧಿ, ಬಾಲಗೋಪಾಲರಾಗಿ ನವ್ಯಾ, ಮಾಣಿಕ್ಯ ಹಾಗೆಯೇ ಪೀಠಿಕಾ ಸ್ತ್ರೀವೇಷದಲ್ಲಿ ಯಶಸ್ವಿನಿ, ಅಮೃತಾ ಒಟ್ಟಾಗಿ ಪೂರ್ವರಂಗದ ಚೆಲುವನ್ನು ಹೆಚ್ಚಿಸಿದರು. ಆರು ವರುಷದ ಪುಟಾಣಿಗಳಿಂದ ಹಿಡಿದು ಹದಿನೆಂಟರ ವಯೋಮಾನದ ವರೆಗಿನ ಈ ಇಪ್ಪತ್ತೆರಡು ಮಂದಿ ಎಳೆಯರನ್ನು ಸೀಮಿತ ಅವಧಿಯಲ್ಲಿ ತಿದ್ದಿ ತೀಡಿ ತರಬೇತಿಗೊಳಿಸಿದ ಯಕ್ಷಗುರುಗಳಾದ ಕರ್ಜೆ ಎಮ್‌. ಶ್ರೀಧರ್‌ ಹೆಬ್ಟಾರರು ನಿಜವಾಗಿಯೂ ಸ್ತುತ್ಯಾರ್ಹರು. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀಧರ್‌ ಹೆಬ್ಟಾರ್‌, ಮದ್ದಲೆಯಲ್ಲಿ ಜಗದೀಶ್‌ ಆಚಾರ್ಯ ಕಿದಿಯೂರು, ಚೆಂಡೆಯಲ್ಲಿ ಕೃಷ್ಣಾನಂದ ಶೆಣೈ ಸಹಕರಿಸಿದ್ದರು. ವೇಷಭೂಷಣ ಅಜಪುರ ಯಕ್ಷಗಾನ ಸಂಘ, ಬ್ರಹ್ಮಾವರ ಅವರದಾಗಿತ್ತು. 

ದಿಶಾ ಬ್ರಹ್ಮಾವರ 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.