ರಂಜನೆ ಜತೆಗೆ ಜಿಜ್ಞಾಸೆ ;ಹೂಂ ಅಂದ… ಉಹೂಂ ಅಂದ…! 


Team Udayavani, Jan 4, 2019, 12:30 AM IST

x-62.jpg

ಕಿನ್ನರ ಮೇಳ (ರಿ.), ತುಮರಿ ಇವರು ಈ ಬಾರಿ ಎಳೆಯರಿಗಾಗಿ “ಹೂಂ ಅಂದ…. ಉಹೂಂ ಅಂದ…’ ಎನ್ನುವ ನಾಟಕವನ್ನು ಆಯ್ದಿದ್ದು, ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಪ್ರದರ್ಶಿಸಿದರು. ಹಳೆಯ ಸಂಪ್ರದಾಯಗಳನ್ನು ಹಾಗೆಯೇ ಮುಂದುವರಿಸ ಬೇಕೇ ಅಥವಾ ಅದನ್ನು ಮುರಿದು ಹೊಸತನದೊಂದಿಗೆ ಮುಂದೆ ಸಾಗಬೇಕೇ ಎನ್ನುವ ಪ್ರಶ್ನೆಯನ್ನು ನಮ್ಮ ಮುಂದಿಡುತ್ತದೆ ಈ ನಾಟಕ. ಶಾಲಾ ಶಿಕ್ಷಕರೋರ್ವರು ತನ್ನ ವಿದ್ಯಾರ್ಥಿಗಳೊಂದಿಗೆ ಚಾರಣಕ್ಕೆ ಹೊರಟು ನಿಂತಾಗ, ಎಳೇ ಹುಡುಗನೊಬ್ಬ ಅನಾರೋಗ್ಯದಿಂದಿರುವ ತಾಯಿಯ ಅನುಮತಿ ಪಡೆದು ಇವರ ಜೊತೆಗೂಡುತ್ತಾನೆ. ಇತ್ತ ತಾಯಿಗೂ ಅವನು ಔಷಧಿ ತರಬೇಕಾಗಿದೆ. ಬೆಟ್ಟ ಹತ್ತುವ ಸಂದರ್ಭದಲ್ಲಿ ಬಾಲಕನಿಗೆ ತೀವ್ರ ಅಸ್ವಸ್ಥತೆ ಕಾಡುತ್ತದೆ. ಅಲ್ಲಿನ ಸಂಪ್ರದಾಯದಂತೆ ಅಸ್ವಸ್ಥರಾದವರನ್ನು ಕಣಿವೆಗೆ ದೂಡಿ ಮುಂದೆ ಸಾಗಬೇಕು. ಬಾಲಕ ಗುಣಮುಖವಾದ ನಂತರ ಮುಂದುವರೆಯುವ ನಿರ್ಧಾರಕ್ಕೆ ಶಿಕ್ಷಕನು ಬಂದಾಗ, ವಿದ್ಯಾರ್ಥಿಗಳು ಸಂಪ್ರದಾಯ ಪಾಲಿಸದಿದ್ದರೆ ಮುಂದೆ ಅನಾಹುತವಾಗುತ್ತದೆ, ಹಾಗಾಗಿ ಈ ನಿಯಮ ಪಾಲಿಸಲೇಬೇಕು ಎಂದು ಹಠ ಹಿಡಿಯುತ್ತಾರೆ. ದ್ವಂದ್ವಕ್ಕೆ ಸಿಲುಕಿದ ಶಿಕ್ಷಕ ಉಪಾಯದಿಂದ ಮೊಲವೂ – ಆಮೆಯೂ ಎನ್ನುವ ನೀತಿ ಕಥೆಯ ಮೂಲಕ ಮಕ್ಕಳ ಮನಸ್ಸನ್ನು ತಿದ್ದುವಲ್ಲಿ ಯಶಸ್ವಿಯಾಗುತ್ತಾನೆ. ಸಮಾಜದಲ್ಲೂ ಹಿಂದೆ ಬಿದ್ದವರನ್ನು ಉಪೇಕ್ಷಿಸದೆ ಜೊತೆಯಾಗಿ ಕರೆದುಕೊಂಡು ಮುಂದೆ ಸಾಗುವುದೇ ನಿಜವಾದ ಮಾನವೀಯತೆ ಎನ್ನುವುದನ್ನು ಎಳೆಯರಿಗೆ ಮನವರಿಕೆ ಮಾಡುತ್ತಾರೆ. ಶಿಕ್ಷಕನಾಗಿ ನಾಗರಾಜ್‌ ಹುಬ್ಳಿ, ಬಾಲಕ ಸುಬ್ಬುವಾಗಿ ಸಜೀ ತುಮರಿ, ತಾಯಿಯಾಗಿ ಶಶಿ ಹುಬ್ಳಿ, ವಿದ್ಯಾರ್ಥಿಗಳಾಗಿ ಆಕಾಶ್‌ ಸೋಲಾಪುರ, ಮೆಹಬೂಬ್‌ ಮಂಗಳೂರು, ಸುಹಾಸ್‌ ಸಾಗರ ತಮ್ಮ ಪಾತ್ರಗಳನ್ನು ಸೊಗಸಾಗಿ ನಿರ್ವಹಿಸಿ ಮಕ್ಕಳ ಮನ ಗೆಲ್ಲುವಲ್ಲಿ ಯಶಸ್ವಿಯಾದರು. ಹಿನ್ನೆಲೆಯಲ್ಲಿ ಸಂಗೀತ ಮತ್ತು ಬೆಳಕಲ್ಲಿ ಸಹಾಯಕರಾಗಿದ್ದವರು ಮನೋಜ್‌ ದಾವಣಗೆರೆ ಮತ್ತು ವಿಶ್ವಾಸ್‌. ಮೂಲ ಕಥೆ ಜರ್ಮನಿಯ ಪ್ರಸಿದ್ಧ ನಾಟಕಕಾರ ಬಟೋìಲ್ಡ್‌ ಬ್ರೆಕ್ಟ್ ಅವರದ್ದಾಗಿದ್ದು, ನಮ್ಮ ನೆಲಕ್ಕೆ ಒಗ್ಗುವಂತೆ ವೈದೇಹಿಯವರು ರೂಪಾಂತರಿಸಿದ್ದಾರೆ. ನಿರ್ದೇಶನ ಕೆ. ಜಿ. ಕೃಷ್ಣಮೂರ್ತಿ, ಸಹ ನಿರ್ದೇಶನ ರಾಜೇಂದ್ರ ಬಾಳೆಹಳ್ಳಿ, ಸಂಗೀತ ಜಿ. ಎಸ್‌. ಮಂಜುನಾಥ ಮತ್ತು ಶ್ರೀಕಾಂತ ಕಾಳಮಂಜಿಯವರದ್ದಾಗಿತ್ತು. 

 ಕೆ. ದಿನಮಣಿ ಶಾಸ್ತ್ರಿ

ಟಾಪ್ ನ್ಯೂಸ್

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.