ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರದ ನೀರು
Team Udayavani, Jan 4, 2019, 4:42 AM IST
ಕಾಪು/ಪಡುಬಿದ್ರಿ/ಮಲ್ಪೆ: ಕಾಪು, ಪಡುಬಿದ್ರಿ, ಮಲ್ಪೆ ಕಡಲ ತೀರ ಭಾಗದಲ್ಲಿ ಸಮುದ್ರದ ನೀರು ಕಳೆದ ಮೂರ್ನಾಲ್ಕು ದಿನಗಳಿಂದ ಹಸಿರು ಬಣ್ಣಕ್ಕೆ ತಿರುಗಿದ್ದು ಮೀನುಗಾರರಲ್ಲಿ ಆತಂಕ ಮೂಡಿಸಿದೆ.
ಉಚ್ಚಿಲ, ಎರ್ಮಾಳು, ಪಡುಬಿದ್ರಿ ಪರಿಸರದಲ್ಲೂ ಸಮುದ್ರದ ನೀರುಹಸಿರು ಬಣ್ಣಕ್ಕೆ ತಿರುಗಿದ್ದು, ದುರ್ವಾಸನೆ ಬರುತ್ತಿದೆ. ಇದು ಮೀನುಗಾರರಲ್ಲಿ ಆತಂಕಕ್ಕೆ ಕಾರಣವಾಗಿದ್ದರೆ, ಪ್ರವಾಸಿಗರಲ್ಲಿ ಕುತೂಹಲ ಮೂಡಿಸಿದೆ. ಸಮುದ್ರದ ನೀರು ಪಾಚಿಗಟ್ಟಿದ ಹಸಿರು ಬಣ್ಣದಂತೆ ಇರುವುದರಿಂದ ಕಡಲ ಕಿನಾರೆಗೆ ಬರುವ ಪ್ರವಾಸಿಗರು ನೀರಿಗಿಳಿಯಲು ಹಿಂದೇಟು ಹಾಕುತ್ತಿದ್ದಾರೆ. ಸಮುದ್ರಕ್ಕೆ ಇಳಿದ ಯಾರಿಗೂ ಬಣ್ಣ ಮೆತ್ತಿಕೊಳ್ಳುತ್ತಿಲ್ಲ.
ಪಾಚಿಯಿಂದಾಗಿ ಹಸಿರು
ಮಳೆಗಾಲದಲ್ಲಿ ಬಂಡೆಯನ್ನು ಅಂಟಿಕೊಳ್ಳುವ ಪಾಚಿ ಬಂಡೆಯಿಂದ ಬೇರ್ಪಟ್ಟು ಸಮುದ್ರಕ್ಕೆ ಬೀಳುವುದರಿಂದ ಸಮುದ್ರದ ನೀರು ಹಸಿರು ಬಣ್ಣಕ್ಕೆ ತಿರುಗುತ್ತದೆ. ಹಿಂದೆಯೂ ಈ ರೀತಿ ನಡೆದಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದ ಸಮುದ್ರ ಹೀಗೆಯೇ ಕಾಣುತ್ತಿದೆ. ಅಥವಾ ಪ್ರಕೃತಿಯ ನಿಯಮದಿಂದಾಗಿಯೂ ನೀರು ಈ ರೀತಿ ಆಗಿರಬಹುದು ಎನ್ನುವುದು ಬೀಚ್ ಸ್ವತ್ಛತಾ ನಿರ್ವಾಹಕ ಪ್ರಶಾಂತ್ ಕರ್ಕೇರರ ಅಭಿಪ್ರಾಯವಾಗಿದೆ.
ಮೀನುಗಾರಿಕೆಗೆ ತೊಂದರೆ
ಸಮುದ್ರದ ನೀರು ಹಸಿರು ಬಣ್ಣಕ್ಕೆ ತಿರುಗಿರುವುದರಿಂದ ಮೀನುಗಾರಿಕೆಯೂ ಕಷ್ಟವಾಗುತ್ತಿದೆ. ಬಲೆಗಳಲ್ಲಿ ಹಸಿರು ಪಾಚಿ ಸಿಕ್ಕಿ ಹಾಕಿ ಕೊಳ್ಳುತ್ತಿರುವುದರಿಂದ ಮೀನುಗಳು ಬಲೆಗೆ ಬೀಳುತ್ತಿಲ್ಲ. ಮೀನುಗಾರಿಕೆ ಮಾಡಲು ಕಷ್ಟವಾಗುತ್ತಿದೆ. ಇದು ಹೀಗೆಯೇ ಮುಂದುವರಿದರೆ ಇನ್ನೇನು ಎಂಬ ಸ್ಥಿತಿ ಎದುರಾಗಿದೆ ಎಂದು ಮೀನುಗಾರ ರಮೇಶ್ ಕೋಟ್ಯಾನ್ ತಿಳಿಸಿದ್ದಾರೆ.
ವೈಜ್ಞಾನಿಕ ಸಂಶೋಧನೆ ಅಗತ್ಯ
ನಾನು ಹಲವು ವರ್ಷಗಳಿಂದ ಸಮುದ್ರದ ಬಳಿ ಚರುಮುರಿ ವ್ಯಾಪಾರ ಮಾಡುತ್ತಿದ್ದೇನೆ. ಹೀಗೆ ಸುದೀರ್ಘ ಅವಧಿಯವರೆಗೆ ನೀರು ಹಸಿರು ಬಣ್ಣಕ್ಕೆ ತಿರುಗಿದ್ದನ್ನು ಕಂಡಿರಲಿಲ್ಲ. ಇದು ನೈಸರ್ಗಿಕವೋ ಅಥವಾ ಪ್ರಾಕೃತಿಕ ವೈಪರೀತ್ಯದ ಪರಿಣಾಮವೋ ಎನ್ನುವುದು ತಿಳಿಯುತ್ತಿಲ್ಲ. ವೈಜ್ಞಾನಿಕ ಸಂಶೋಧನೆ ನಡೆದರೆ ಉತ್ತಮ ಎನ್ನುತ್ತಾರೆ ಕೃಷ್ಣ ಅವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ