ಪ್ರೇಯಸಿಯ ಅಣ್ಣನಿಂದಲೇ ಯುವಕನ‌ ಕೊಲೆ


Team Udayavani, Jan 5, 2019, 4:40 AM IST

crime.jpg

ಮಂಗಳೂರು: ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನೋರ್ವನನ್ನು ಆಕೆಯ ಸಹೋದರ ತನ್ನ ಸಹಚರರೊಂದಿಗೆ ಕೊಚ್ಚಿ  ಕೊಲೆ ಮಾಡಿರುವ ಘಟನೆ  ಕಾವೂರು ಬಳಿಯ  ಪಂಜಿಮೊಗರಿನ ಮಾಲಾಡಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

ಉರುಂದಾಡಿಗುಡ್ಡೆ ನಿವಾಸಿ ರಾಕೇಶ್‌(26) ಕೊಲೆಯಾಗಿದ್ದು, ಆರೋಪಿಗಳಾದ ಪಂಜಿಮೊಗರು ನಿವಾಸಿ ಸುನಿಲ್‌ ಹಾಗೂ ಇತರರು ಪರಾರಿಯಾಗಿದ್ದಾರೆ. 

ರಾಕೇಶ್‌ ತಂದೆಯೊಂದಿಗೆ ಸ್ಟೀಲ್‌ ಬಾರ್‌ ಬೆಂಡಿಂಗ್‌ ಕೆಲಸ ಮಾಡುತ್ತಿದ್ದು,  ಸುನೀಲ್ನ ತಂಗಿಯನ್ನು ಕೆಲವು ಸಮಯಗಳಿಂದ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸುನೀಲ್‌ ಪ್ರಕರಣವೊಂದರಲ್ಲಿ ಜೈಲಿನಲ್ಲಿದ್ದಾಗ ರಾಕೇಶ್‌ ನಿತ್ಯ ಮನೆಗೆ ಬರುತ್ತಿದ್ದ. ರಾಕೇಶ್‌ ತನ್ನ ತಂಗಿಯನ್ನು ಪ್ರೀತಿಸುತ್ತಿರುವ ವಿಚಾರ ಸುನಿಲ್ ಗಮನಕ್ಕೆ ಬಂದು ಆತನಿಗೆ ಫೋನ್‌ ಮೂಲಕ ಬೆದರಿಕೆ ಕೂಡ ಹಾಕಿದ್ದ. 

ರಾಕೇಶ್‌ನ ಮೊಬೈಲಿಗೆ ಗುರುವಾರ ರಾತ್ರಿ ಮತ್ತೆ ಕರೆ ಮಾಡಿದ್ದ ಆರೋಪಿ ಸುನಿಲ್‌, ಪ್ರಮುಖ ವಿಚಾರದ ಬಗ್ಗೆ ಚರ್ಚಿಸಲಿಕ್ಕಿದ್ದು, ಪಂಜಿ ಮೊಗರಿಗೆ ಬರುವಂತೆ ಹೇಳಿದ್ದ. ರಾಕೇಶ್‌ ಸ್ಕೂಟರ್‌ನಲ್ಲಿ ಮಾಲಾಡಿ ರೋಡ್‌ಗೆ ತಲುಪಿದಾಗ ಸುನೀಲ್  ಹಾಗೂ ಇತ ರರು ಆತನನ್ನು ಅಡ್ಡಗಟ್ಟಿದ್ದಾರೆ. ಬಳಿಕ ಸುನಿಲ್‌ ತಂಗಿಯ ಪ್ರೀತಿಯ ವಿಚಾರದಲ್ಲಿ  ಜಗಳವಾಗಿ ಮಾರಕಾಯುಧಗಳಿಂದ  ಮೇಲೆ ಹಲ್ಲೆ ಮಾಡಿದ್ದು, ರಾಕೇಶ್‌ ಸ್ಥಳದಲ್ಲೇ  ಸಾವನ್ನಪ್ಪಿದ್ದಾನೆ.  ಕೂಡಲೇ ಕಾರ್ಯಪ್ರವೃತ್ತರಾಗಿರುವ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್‌ ಆಯುಕ್ತ ಟಿ. ಆರ್‌. ಸುರೇಶ್‌, ಡಿಸಿಪಿ ಉಮಾ ಪ್ರಶಾಂತ್‌, ಕಾವೂರು ಇನ್‌ಸ್ಪೆಕ್ಟರ್‌ ಕೆ.ಆರ್‌.ನಾಯಕ್‌, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ. ಕಾವೂರು  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಜತೆಯಾಗಿದ್ದವರು ಈಗ ದೂರವಾಗಿದ್ದರು 
ಸುನೀಲ್‌ ಮತ್ತು ರಾಕೇಶ್‌ ಗೆಳೆಯರಾಗಿದ್ದು, ಹಿಂದೆ ಒಂದೇ ತಂಡದಲ್ಲಿದ್ದು ಬಳಿಕ ದೂರವಾಗಿದ್ದರು. ರಾಕೇಶ್‌ ಮೇಲೆ 2016ರಲ್ಲಿ ಕಾವೂರು ಮತ್ತು 2017ರಲ್ಲಿ ಬೆಂಗಳೂರಿನ ಕೋರಮಂಗಲದಲ್ಲಿ ಗಾಂಜಾ ಮಾರಾಟ ಆರೋಪದ ಪ್ರಕರಣವಿದ್ದು, ಆ ಸಂಬಂಧ ಜೈಲಿನಲ್ಲಿದ್ದ. ಸುನೀಲ್‌ ಮೇಲೂ ಹಲವು ಪ್ರಕರಣಗಳಿದ್ದು, ಆತ ಕೂಡ ಸೆರೆವಾಸ ಅನುಭವಿಸಿ ಇತ್ತೀಚೆಗೆ ಜಾಮೀನು ಮೇಲೆ ಬಿಡುಗಡೆಗೊಂಡಿದ್ದ. 

ಟಾಪ್ ನ್ಯೂಸ್

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.