ಮುಖ್ಯಮಂತ್ರಿ ಬಳಿ ರೈತರ ನಿಯೋಗ ತೆರಳಲು ನಿರ್ಧಾರ: ಸಾಮೀಜಿ


Team Udayavani, Jan 5, 2019, 9:42 AM IST

vij-2.jpg

ಹೂವಿನಹಿಪ್ಪರಗಿ: ತಾಲೂಕಿನ ಕುದರಿಸಾಲವಾಡಗಿ ಮುಖ್ಯ ಕಾಲುವೆಯಿಂದ 12 ಕೆರೆಗಳಿಗೆ ನೀರನ್ನು ಪೆಬ್ರವರಿ ಅಂತ್ಯದಲ್ಲಿ ಬಿಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಈ ಹಿನ್ನೆಲೆ ರೈತರು ನಡೆಸುತ್ತಿರುವ ಧರಣಿಯನ್ನು ಅಂತ್ಯಗೊಳಿಸಲಾಗುವುದೆಂದು
ಯರನಾಳದ ಸಂಗನಬಸವ ಸ್ವಾಮೀಜಿ ಹೇಳಿದರು.

ಸ್ಥಳೀಯ ನಾಡ ಕಚೇರಿ ಆವರಣದಲ್ಲಿ ನಡೆಯುತ್ತಿರುವ ರೈತ ಸಂಘ, ವಿವಿಧ ಮಠಾಧೀಶರು ಹಾಗೂ ಕರವೇ ನಡೆಸುತ್ತಿರುವ 4ನೇ ದಿನದಲ್ಲಿ ಮುಂದುವರಿದಿದ್ದ ಧರಣಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಅವರು ಮಾತನಾಡಿದರು.

ರೈತರು ಹೋರಾಟ ನಡೆಸುತ್ತಿರುವ ಪ್ರತಿಫಲವಾಗಿ ಕಾಮಗಾರಿ ಮುಕ್ತಾಯ ಹಂತ ತಲುಪಿದೆ. ಆದರೆ ಬಳೂತಿ ಜಾಕ್‌ವೆಲ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿರುವುದರಿಂದ 12 ಕೋಟಿಗೂ ಅಧಿಕ ಬೆಲೆ ಬಾಳುವ ವಿದ್ಯುತ್‌ ಉಪಕರಣಗಳು ಸುಟ್ಟು ಹೋಗಿದ್ದು ಕೆಬಿಜೆಎನ್‌ಎಲ್‌ ಇಲಾಖೆ ಅಧಿಕಾರಿಗಳು ಅಸಹಾಯಕ ಸ್ಥಿತಿಯಲ್ಲಿದ್ದಾರೆ ಎಂದರು.

ಸರಕಾರ ಬಳೂತಿಯ ಜಾಕ್‌ವೆಲ್‌ ಉಪಕರಣದ ಕೆಲಸವನ್ನು ಟೆಂಡರ್‌ ಕರೆದು ಕಾಮಗಾರಿ ಪೂರ್ಣಗೊಳಿಸಬೇಕಾಗುತ್ತದೆ. ಅದಕ್ಕೆ 4 ತಿಂಗಳ ಕಾಲಾವಕಾಶ ಬೇಕು ಎಂದು ಸಂಬಂಧಿಸಿದ ಅಧಿಕಾರಿಗಳು ಸ್ವಾಮೀಜಿಗಳ ಹಾಗೂ ರೈತರ ನೇತೃತ್ವದ ತಂಡ ಬಳೂತಿಯ ಘಟನಾ ಸ್ಥಳಕ್ಕೆ ಹೋದಾಗ ತಿಳಿಸಿದ್ದಾರೆ. ಆದರೆ ನಾವು ಜ. 7 ಅಥವಾ 8ರೊಳಗೆ ರೈತರನ್ನು ಕರೆದುಕೊಂಡು ಬೆಂಗಳೂರಿಗೆ ನಿಯೋಗ ಹೋಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಅರೊಗ್ಯ ಸಚಿವ ಶಿವಾನಂದ ಪಾಟೀಲರಿಗೆ
ತಿಳಿಸಿದಾಗ ಅದಕ್ಕೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರೈತರ ನೇತೃತ್ವದ ತಂಡದವರು ಈ ವಿಷಯ ಮನವರಿಕೆ ಮಾಡಿ, ಶೀಘ್ರವೇ ಬಳೂತಿ ಜಾಕ್‌ವೆಲ್‌ ಮಶೀನರಿ ಕಾಮಗಾರಿ ಪೂರ್ಣಗೊಳಿಸಿ ಫೆಬ್ರವರಿ ಅಂತ್ಯಕ್ಕೆ ನೀರು ಬಿಡುವಂತೆ ಒತ್ತಾಯ ಮಾಡೋಣ. ಅದಕ್ಕೆ
ಬೆಂಗಳೂರಿಗೆ ಆಗಮಿಸವವರು ರೈತ ಮುಖಂಡ ಅರವಿಂದ ಕುಲಕರ್ಣಿ ಅವರನ್ನು ಸಂಪರ್ಕಿಸಲು ತಿಳಿಸಿದರು.

ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ, ಬಳೂತಿ ಜಾಕ್‌ವೆಲ್‌ ಬಳಿಯ ಮಶಿನರಿಗಳಿಗೆ ಆಕಸ್ಮಿಕ ಬೆಂಕಿ ತಗಲಿರುವ ಕಾರಣ ಕೆರೆಗಳಿಗೆ ನೀರು ಬರುವುದು ವಿಳಂಬವಾಗುತ್ತದೆ. ಆದರೆ ಪೆಬ್ರವರಿ ಅಂತ್ಯದಲ್ಲಿ ನೀರು ಬಿಡುವಂತೆ ಸರಕಾರಕ್ಕೆ ಒತ್ತಾಯಿಸೋಣ ಎಂದು ಹೇಳಿದರು. ಗ್ರೇಡ್‌-2 ತಹಶೀಲ್ದಾರ್‌ ಪಿ.ಜಿ. ಪವಾರ ಅವರು ಈ ವಿಷಯವನ್ನು ಸರಕಾರದ ಗಮನಕ್ಕೆ ತರಲಾಗುವುದೆಂದು ತಿಳಿಸಿದರು. ಕರಿಭಂಟನಾಳದ ಶಿವಕುಮಾರ ಸ್ವಾಮೀಜಿ, ರೈತ ಸಂಘದ ತಾಲೂಕಾಧ್ಯಕ್ಷ ಸಿದ್ರಾಮ ಅಂಗಡಗೇರಿ, ಉಪ ತಹಶೀಲ್ದಾರ್‌ ಜಗದೀಶ ಹಾರಿವಾಳ, ರೈತ ಮುಖಂಡರಾದ ಗಿರೀಶ ಶಿವಯೋಗಿ, ಸಿದ್ದಲಿಂಗಯ್ಯ ಹಿರೇಮಠ, ಸಿದ್ದು ಹಾದಿಮನಿ, ರಮಜಾನ ಮುಜಾವರ, ಅಶೋಕ ಶಿವಯೋಗಿ, ಪರಮಣ್ಣ ಭಜಂತ್ರಿ, ಪಾವಡೆಪ್ಪ ಹಳೆಗೌಡರ, ಮಲ್ಲಣ್ಣ ಭಜಂತ್ರಿ, ಶರಣಗೌಡ ಪಾಟೀಲ, ಲಾಲ್‌ಸಾಬ ಮುಲ್ಲಾ, ಹಸನಸಾಬ ಮುಲ್ಲಾ, ಸುಭಾಷ್‌ ಐಹೋಳಿ, ಎಂ.ಎ. ಪೂಜಾರಿ, ಅರವಿಂದ ಬ್ಯಾಕೋಡ
ಇದ್ದರು.

ಧರಣಿ ಅಂತ್ಯ: ಕಳೆದ ನಾಲ್ಕು ದಿನಗಳಿಂದ ಹೂವಿನಹಿಪ್ಪರಗಿ ಸೇರಿದಂತೆ ವಿವಿಧ ಗ್ರಾಮದ ಕರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟವನ್ನು ಶುಕ್ರವಾರ ಯರನಾಳ ಶ್ರೀಗಳ ಭರವಸೆ ಮೇರೆಗೆ ಹೋರಾಟ ಅಂತ್ಯಗೊಳಿಸಿ ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗಲು ರೈತರು ಇದೇ ಸಂದರ್ಭದಲ್ಲಿ ನಿರ್ಧರಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.