ಇಂಡಿ ತಾಲೂಕಾದ್ಯಂತ ನೀರಿನ ಕೊರತೆ


Team Udayavani, Jan 5, 2019, 9:48 AM IST

vij-3.jpg

ಇಂಡಿ: ತಾಲೂಕಿನಾದ್ಯಂತ ಭೀಕರ ಬರಗಾಲದ ಛಾಯೆ ಆವರಿಸಿದ್ದು ಬೇಸಿಗೆ ಆರಂಭಕ್ಕೂ ಪೂರ್ವದಲ್ಲಿಯೇ ತಾಲೂಕಿನ ವಿವಿಧೆಡೆ ಕುಡಿಯುವ ನೀರಿನ ತೊಂದರೆ ಉಂಟಾಗಿದೆಯಲ್ಲದೆ ರೈತರ ಬಹುವಾಷಿಕ ಬೆಳೆಗಳಾದ ಲಿಂಬೆ, ದಾಳಿಂಬೆ, ದ್ರಾಕ್ಷಿ ಬೆಳೆಗಳು ಒಣಗಲು ಪ್ರಾರಂಭಿಸಿವೆ. ವಿಜಯಪುರ ಜಿಲ್ಲೆ ಬ್ರಿಟಿಷರ ಕಾಲದಿಂದ ಇಲ್ಲಿವರೆಗೂ ಶಾಶ್ವತ ಬರಗಾಲಕ್ಕೆ ತುತ್ತಾಗುತ್ತ ಬರುತ್ತಿದೆ.

ಬ್ರಿಟಿಷರು ಆಡಳಿತ ಮಾಡುವ ಸಂದರ್ಭದಲ್ಲಿ ವಿಜಯಪುರ ನಗರದಲ್ಲಿ ಬರ ನಿವಾರಣೆ ಸಂಸ್ಥೆ ತೆರೆದು ಬರ ನಿವಾರಣೆಗೆ ಪ್ರಯತ್ನಿಸುತ್ತ 71 ವರ್ಷ ಕಳೆದರೂ ವಿಜಯಪುರ ಜಿಲ್ಲೆ ಬರಗಾಲದಿಂದ ಮುಕ್ತವಾಗಿಲ್ಲ. ಬರಗಾಲ ನಿವಾರಣಾ ಸಂಸ್ಥೆ ಅದ್ಯಾವ ಕೆಲಸದಲ್ಲಿ ತೊಡಗಿದಿಯೋ ತಿಳಿಯದಂತಾಗಿದೆ. ಬರಗಾಲದಿಂದ ಜನರು ರೈತರು ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಪಂಚ ನದಿಗಳು ಹರಿದರೂ ಜಿಲ್ಲೆಯ ಜನರು ಕುಡಿಯುವ ನೀರಿಗಾಗಿ ಅಲೆದಾಡುತ್ತಿದ್ದಾರೆ.

ಇನ್ನು ತಾಲೂಕಿನಾದ್ಯಂತ ಬಹು ವಾರ್ಷಿಕ ಬೆಳೆಗಳಾದ ಲಿಂಬೆ 5510 ಹೆಕ್ಟೇರ್‌, ದ್ರಾಕ್ಷಿ 1663 ಹೆಕ್ಟೇರ್‌, ದಾಳಿಂಬೆ 2361 ಹೆಕ್ಟೇರ್‌ ಬೆಳೆ ಇದೆ. ಇದರಲ್ಲಿ ಶೇ. 75 ಬೆಳೆಗಳು ಈಗಾಗಲೆ ನೀರಿನ ಕೊರತೆಯಿಂದ ಒಣಗಲು ಪ್ರಾರಂಭವಾಗಿವೆ. ಬೆಳೆಗಳ ಉಳಿವಿಗಾಗಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಹ ಟ್ಯಾಂಕರ್‌ ನೀರು ಪೂರೈಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಇಲಾಖೆ ತಾಲೂಕಾಧಿಕಾರಿ ತಿಳಿಸಿದ್ದಾರೆ.

ಸರ್ಕಾರದಿಂದ ಏನು ಉತ್ತರ ಬರುತ್ತದೆಯೋ ಕಾದು ನೋಡಬೇಕಿದ್ದು ಟ್ಯಾಂಕರ್‌ ನೀರು ಪೂರೈಸಲು ಇನ್ನೊಂದು ತಿಂಗಳು ತಡವಾದರೂ ಶೇ. 75 ಬೆಳೆಗಳು ಸಂಪೂರ್ಣ ಒಣಗಿ ಹೋಗುತ್ತವೆ ಎನ್ನುತ್ತಾರೆ ಇಲ್ಲಿನ ರೈತರು.

ನೀರಿನ ಅಭಾವದಿಂದ ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಗಳಾದ ನಿಂಬೆ, ದ್ರಾಕ್ಷಿ, ದಾಳಿಂಬೆ, ಬಿಸಿಲಿನ ತಾಪ, ಮತ್ತು ತೇವಾಂಶದ ಕೊರತೆಯಿಂದ ಒಣಗಿ ಹೋಗುತ್ತಿವೆ. ಇದುವರೆಗೆ ಕಷ್ಟಪಟ್ಟು ಬೆಳೆಸಿದ ರೈತರು ಬೆಳೆ ಉಳಿಸಿಕೊಳ್ಳಲು ಹರಸಹಾಸ ಪಡುತ್ತಿದ್ದಾರೆ. ಬೆಳೆ ರಕ್ಷಣೆಗಾಗಿ ಕೆಲ ರೈತರು ಸುಮಾರು 5ರಿಂದ 10 ಕಿ.ಮೀ. ದೂರದಿಂದ ಟ್ಯಾಂಕರ್‌ ಮೂಲಕ ನೀರನ್ನು ತಂದು ಬೆಳೆ ರಕ್ಷಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಹೆಚ್ಚುತ್ತಿರುವ ಬಿಸಿಲಿನ ತಾಪಕ್ಕೆ ಬೆಳಗ್ಗೆ ಉಣಿಸುತ್ತಿರುವ ನೀರು ನಾಲ್ಕು ದಿನಕ್ಕೂ ಸಾಕಾಗುತ್ತಿಲ್ಲ ಎಂದು ರೈತರು ಕೈ ಚೆಲ್ಲಿ ಕುಳಿತಿದ್ದಾರೆ.

ತೋಟಗಾರಿಕೆ ಇಲಾಖೆಯಿಂದ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಜನವರಿಯಿಂದ ಜೂನ್‌ ತಿಂಗಳವರೆಗೆ 31.84 ಕೋಟಿ ರೂ. ಅನುದಾನ ಕೋರಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅಷ್ಟು ಅನುದಾನ ನೀಡಿದರೆ ಟ್ಯಾಂಕರ್‌ ನೀರು ಜೂನ್‌ ತಿಂಗಳವರೆಗೆ ಸರಬರಾಜು ಮಾಡಲು ಸಾಧ್ಯವಾಗುತ್ತದೆ.
 ಆರ್‌.ಟಿ. ಹಿರೇಮಠ ತೋಟಗಾರಿಕೆ ಇಲಾಖೆ ಅಧಿಕಾರಿ

ಬೆಳೆ ರಕ್ಷಣೆಗಾಗಿ ಸರಕಾರ ಹೊಸ ಯೋಜನೆ ರೂಪಿಸಬೇಕು. ದೀರ್ಘ‌ಕಾಲದ ತೋಟಗಾರಿಕಾ ಬೆಳೆಗಳು ಒಣಗಿದರೆ ಮುಂದಿನ 5 ವರ್ಷದವರೆಗೆ ರೈತರು ಪರಿತಪಿಸಬೇಕಾಗುತ್ತದೆ. ಸರಕಾರ ರೈತರ ಸಂಕಷ್ಟಕ್ಕೆ ಪರಿಹಾರ ನೀಡಬೇಕು.
 ಜಗನ್ನಾಥ ಇಂಡಿ ರೈತ ಮುಖಂಡ

„ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.