ಪಾದದ ಮೇಲೆ ಹರಿದ ಬಸ್
Team Udayavani, Jan 5, 2019, 9:53 AM IST
ಮುದ್ದೇಬಿಹಾಳ: ಇಲ್ಲಿನ ಬಸ್ ನಿಲ್ದಾಣದಲ್ಲಿ ಮೂತ್ರ ವಿಸರ್ಜನೆಗೆ ಹೊರಟಿದ್ದ ಯರಝರಿ ಗ್ರಾಮದ ಲಕ್ಷ್ಮಣ ಗುರಿಕಾರ ಎಂಬಾತನ ಬಲಪಾದದ ಮೇಲೆ ತಾಳಿಕೋಟೆ ಘಟಕದ ತಾಳಿಕೋಟೆ-ಬೆಳಗಾವಿ-ವಾಸ್ಕೋ ಮಾರ್ಗದ ಬಸ್ನ ಚಕ್ರಗಳು ಹರಿದು ಪಾದಕ್ಕೆ ಗಂಭೀರ ಗಾಯವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ಶುಕ್ರವಾರ ನಡೆದಿದೆ.
ಲಕ್ಷ್ಮಣ ತಮ್ಮೂರು ಯರಝರಿ ಗ್ರಾಮದಿಂದ ಬಸ್ ಮೂಲಕ ಬಂದು ಇಳಿದು ನಂತರ ನಿಲ್ದಾಣದ ಮೂಲೆಯಲ್ಲಿರುವ ಸಾರ್ವಜನಿಕ ಮೂತ್ರಾಲಯಕ್ಕೆ ಮೂತ್ರ ಮಾಡಲು ಹೋಗುವಾಗ ಮುಖ್ಯ ರಸ್ತೆಯಿಂದ ನಿಲ್ದಾಣದೊಳಗೆ ಪ್ರವೇಶಿಸುತ್ತಿದ್ದ ಬಸ್ನ ಚಕ್ರಗಳು ಆತನ ಪಾದದ ಮೇಲೆ ಹರಿದು ದುರಂತ ಸಂಭವಿಸಿದೆ. ಪ್ರಯಾಣಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕಳಿಸುವ ವ್ಯವಸ್ಥೆ ಮಾಡಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
MUST WATCH
ಹೊಸ ಸೇರ್ಪಡೆ
ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ
Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?
Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ