ಜೀವ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ
Team Udayavani, Jan 5, 2019, 11:10 AM IST
ಬಳ್ಳಾರಿ: ನೋಂದಾಯಿತ ಕಟ್ಟಡ ಕಾರ್ಮಿಕರು ವೃತ್ತಿ ಕೌಶಲ್ಯ ಕುರಿತು ಅತ್ಯಂತ ಸಮರ್ಪಕವಾಗಿ ತರಬೇತಿ
ಪಡೆದುಕೊಂಡು ಅದನ್ನು ತಮ್ಮ ವೃತ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕೆಲಸ ಮಾಡಬೇಕು. ವೃತ್ತಿಯಲ್ಲಿ ನಿರತರಾಗಿದ್ದಾಗ ಜೀವ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ.ಎನ್.ಐಲಿ ಹೇಳಿದರು.
ನಗರದ ನಿರ್ಮಿತಿ ಕೇಂದ್ರದ ಕಚೇರಿ ಆವರಣದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ ಮತ್ತು ನಿರ್ಮಿತಿ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ನಡೆದ ಶ್ರಮ ಸಾಮರ್ಥ್ಯ ಯೋಜನೆ ಅಡಿ ಟ್ರೈನಿಂಗ್ ಕಂ ಟೂಲ್ ಕಿಟ್’ ಕಾರ್ಯಕ್ರಮ ಮತ್ತು ಎಲೆಕ್ಟ್ರಿಕಲ್ ವೃತ್ತಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಟ್ಟಡ ಕಾರ್ಮಿಕರು ಹಾಗೂ ನೋಂದಾಯಿತ ಕಾರ್ಮಿಕರಿಗಾಗಿ ಸರ್ಕಾರದಿಂದ ವಿವಿಧ ಸೌಲಭ್ಯಗಳಿದ್ದು, ಅವುಗಳ ಬಗ್ಗೆ ತಿಳಿದುಕೊಂಡು ಸೌಲಭ್ಯ ಪಡೆಯಲು ಮುಂದಾಗಬೇಕು. ಎಲೆಕ್ಟ್ರಲ್ ತರಬೇತಿ ಪಡೆದ ನೋಂದಾಯಿತ ಕಾರ್ಮಿಕರು ತಾವು ಕೆಲಸ ಮಾಡುವ ಸಂದರ್ಭದಲ್ಲಿ ಜೀವ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಕೋರಿದರು. ಕಾರ್ಮಿಕ ನಿರೀಕ್ಷಕ ರವಿದಾಸ್ ಅವರು ಕಾರ್ಮಿಕ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ವಿವರಿಸಿದರು.
ನಿರ್ಮಿತಿ ಕೇಂದ್ರದ ಅಧಿಕಾರಿ ಡಿ.ವಿ.ಮಂಜುಳಾ ಮಾತನಾಡಿದರು. ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್.ಎನ್.ಶಿವರಾಜ ನಿರೂಪಿಸಿ ವಂದಿಸಿದರು. ಮಿತಿಲಾ ರೆಡ್ಡಿ, ನಡ್ಲಿಕೇರಿ ನಾಗರಾಜ, ಶ್ರೀಧರ್, ಯಶವಂತ್ ಸೇರಿದಂತೆ ನೋಂದಾಯಿತ ಕಟ್ಟಡ ಕಾರ್ಮಿಕರು ಇದ್ದರು. ಈ ಸಂದರ್ಭದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಪರಿಕರಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ