ಯಕ್ಷಲೋಕದಲ್ಲಿ ಪಟ್ಲರ ಗಾನ ದಾನ  


Team Udayavani, Jan 6, 2019, 11:36 AM IST

1002.jpg

ತನ್ನ ಖ್ಯಾತಿಯನ್ನು ಯಕ್ಷಗಾನ ರಂಗದ ಏಳಿಗೆಗೆ ಬಳಸಿಕೊಂಡ ಧೀಮಂತ, ಪ್ರಸಕ್ತ ತೆಂಕು, ಬಡಗು ಯಕ್ಷಗಾನಲೋಕದಲ್ಲಿ ಪಟ್ಲ ಸತೀಶ್‌ ಶೆಟ್ಟಿಯವರಷ್ಟು ಖ್ಯಾತ ಕಲಾವಿದ ಇನ್ನೊಬ್ಬರಿಲ್ಲ.ಇದು ಅತಿಶಯೋಕ್ತಿಯೂ ಅಲ್ಲ. ತನ್ನ ಗಾನ ಸಿರಿಯ ಮೂಲಕ  ಸಪ್ತ ಸಾಗರದಾಚೆಗೂ ಅಭಿಮಾನಿಗಳನ್ನು ಸಂಗ್ರಹಿಸಿಕೊಂಡ ಸತೀಶ್‌ ಶೆಟ್ಟಿ ಪಟ್ಲ ಅವರು ಕಲಾವಿದರಿಗಾಗಿ ಯಾರೂ ನೀಡದ ಕೊಡುಗೆಯನ್ನು ನೀಡಿ ನಿಜಾರ್ಥದಲ್ಲಿ ನಾಯಕ ಎನಿಸಿಕೊಂಡು ಖ್ಯಾತಿಯ ಉತ್ತುಂಗಕ್ಕೇರಿದವರು. 

ಯಕ್ಷಗಾನ ರಂಗದಲ್ಲಿ ತೊಡಗಿಸಿಕೊಳ್ಳುವ ಕಲಾವಿದರಿಗೆ ಪ್ರಮುಖವಾಗಿ ಕಾಡುವುದು ಆರ್ಥಿಕ ಭದ್ರತೆ, ಹಲವು ಕಲಾವಿದರು ಸಂಕಷ್ಟಕ್ಕೆ ಸಿಲುಕಿದಾಗ ದಾರಿ ಕಾಣದಾಗುತ್ತಾರೆ. ಇನ್ನೊಬ್ಬರ ಬಳಿ ಕೈ ಚಾಚಿಯೋ ಇನ್ನೆನೋ ಮಾಡಿ ಹೆಣಗಾಡುತ್ತಾರೆ. ಇದನ್ನೆಲ್ಲಾ ಓರ್ವ ಕಲಾವಿದನಾಗಿ ಕಂಡಿದ್ದ ಪಟ್ಲ ಸತೀಶ್‌ ಶೆಟ್ಟರು ಸ್ಥಾಪಿಸಿದ್ದು ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ (ರಿ). 

ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಾತ್ರವಲ್ಲದೆ, ವಿದೇಶದಲ್ಲೂ ಘಟಕಗಳನ್ನು ಸ್ಥಾಪಿಸಲಾಗಿದೆ. ಅಮೆರಿಕಾ, ದುಬೈ ನಲ್ಲೂ ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಗುಜರಾತ್‌, ಮುಂಬಯಿ, ಚೆನ್ನೈನಲ್ಲೂ ಘಟಕಗಳು ಯಕ್ಷಗಾನ ಕಲಾವಿದರಿಗಾಗಿ ಕಾರ್ಯ ನಿರ್ವಹಿಸುತ್ತಿವೆ. 

ಪಟ್ಲರ ಮಹತ್ವಾಕಾಂಕ್ಷೆ ಅರಿತಿದ್ದ ಅವರ ಅಭಿಮಾನಿಗಳು ಜೊತೆಗೂಡಿ ಯಕ್ಷಗಾನ ರಂಗ ಹಿಂದೆಂದೂ ಕಾಣದ ರೀತಿಯಲ್ಲಿ ಬೃಹತ್‌ ಟ್ರಸ್ಟನ್ನಾಗಿಸಿ ಕಲಾವಿದರೆಲ್ಲರ ಮೊಗದಲ್ಲಿ ನಗು ಕಾಣಿಸಿದ್ದಾರೆ. ನೂರಾರು ಅಶಕ್ತ ಕಲಾವಿದರು ಪಟ್ಲ  ಟ್ರಸ್ಟ್‌ನ ಸದುಪಯೋಗ ಪಡೆದುಕೊಂಡಿದ್ದಾರೆ. 

ಪಟ್ಲ ಯಕ್ಷಾಶ್ರಯ ಯೋಜನೆಯ ಮೂಲಕ ಮನೆ ಇಲ್ಲದ ಬಡ ಕಲಾವಿದರಿಗೆ ನೂರು ಮನೆಗಳನ್ನು ನಿರ್ಮಿಸಿ ಕೊಡುವ ಯೋಜನೆ ಟ್ರಸ್ಟ್‌ ಮುಂದಿದ್ದು, ಈಗಾಗಲೇ ಕೆಲ ಅಶಕ್ತ ಕಲಾವಿದರಿಗೆ ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ. ಕಲಾವಿದರ ಮಕ್ಕಳು ಆರ್ಥಿಕ ಮುಗ್ಗಟ್ಟಿನಿಂದ ಶಿಕ್ಷಣವನ್ನು ನಿಲ್ಲಿಸಬಾರದು ಎಂದು ವಿದ್ಯಾರ್ಥಿ ವೇತವನ್ನೂ ನೀಡಲಾಗುತ್ತಿದೆ. 

ಸುಮಾರು 300 ಮಂದಿ ಕಲಾವಿದರಿಗೆ ಅಪಘಾತ ವಿಮಾ ಯೋಜನೆಯನ್ನೂ  ಜಾರಿ ಮಾಡಲಾಗಿದೆ.  ಅಪಘಾತ ಚಿಕಿತ್ಸಾ ವೆಚ್ಚ ರೂ. 3 ಲಕ್ಷ ಹಾಗೂ ಆಕಸ್ಮಿಕ ಜೀವಹಾನಿಯಾದಲ್ಲಿ ಕುಟುಂಬಕ್ಕೆ 8 ಲಕ್ಷ ರೂಪಾಯಿಯನ್ನು ನೀಡಲಾಗುತ್ತದೆ. ದುರಂತವೆಂಬಂತೆ ಹೊನ್ನಾವರದಲ್ಲಿ ಭೀಕರ ಅಪಘಾತದಲ್ಲಿ ಮೃತ ಪಟ್ಟ ಸೌಕೂರು ಮೇಳದ ಕಲಾವಿದ ದಿನೇಶ್‌ ಹೆನ್ನಾಬೈಲು ಅವರು ಈ ವಿಮೆ ಮಾಡಿಸಿದ್ದರು. ಅವರ ಕುಟುಂಬಕ್ಕೆ ಟ್ರಸ್ಟ್‌ ವತಿಯಿಂದ 8 ಲಕ್ಷ ರೂಪಾಯಿ ನೀಡಲಾಗುತ್ತಿದೆ. 

ಪ್ರತೀ ವರ್ಷವೂ ಕಲಾವಿದರಿಗೆ ಸನ್ಮಾನ, ಅತ್ಯುತ್ತಮ ಯಕ್ಷಗಾನ ಪ್ರದರ್ಶನಗಳು, ತಾಳ ಮದ್ದಲೆಗಳನ್ನು  ಸಂಯೋಜಿಸಲಾಗುತ್ತಿದೆ. 

ಪಟ್ಲ ಸತೀಶ್‌ ಶೆಟ್ಟಿ ಅವರ ಕಿರು ಪರಿಚಯ
ಬಂಟ್ವಾಳದ ಪಟ್ಲಗುತ್ತುವಿನಲ್ಲಿ ಮಹಾಬಲ ಶೆಟ್ಟಿ ಮತ್ತು ಲಲಿತಾ ದಂಪತಿಗಳ ಮಗನಾಗಿ ಜನಿಸಿದ ಸತೀಶ್‌ ಶೆಟ್ಟಿ ಅವರು ಅಜ್ಜ ದುಗ್ಗಪ್ಪ ಶೆಟ್ಟಿ ಅವರ ಪ್ರೀತಿಯಲ್ಲಿ ಬೆಳೆದರು. ಪಿಯುಸಿ ಶಿಕ್ಷಣ ಮುಗಿಸಿ ಸತೀಶ್‌ ಶೆಟ್ಟಿಯವರು ಮಾಂಬಾಡಿ ಸುಬ್ರಹ್ಮಣ್ಯ ಭಟ್‌ ಅವರಲ್ಲಿ ಶಿಷ್ಯತ್ವವನ್ನು ಪಡೆದು ಯಕ್ಷಗಾನ ಶಿಕ್ಷಣ ಆರಂಭಿಸಿದರು. ಅದಾಗಲೇ ಓರ್ವ ಶ್ರೇಷ್ಠ ಭಾಗವತನಾಗಿ ಹೊರ ಹೊಮ್ಮುವ ಕಂಠ ಸಿರಿ ಅವರಲ್ಲಿತ್ತು. ಹಿಂದೂಸ್ಥಾನಿ, ಕರ್ನಾಟಕ ಸಂಗೀತವನ್ನೂ ಸತೀಶ್‌ ಶೆಟ್ಟಿ ಅವರು ಅಭ್ಯಸಿಸಿದ್ದಾರೆ. 

1999 ರ ಲ್ಲಿ ಕಟೀಲು ಮೇಳಕ್ಕೆ ಸೇರಿಕೊಂಡ ಸತೀಶ್‌ ಶೆಟ್ಟಿ ಅವರು , ಅಲ್ಲಿ ದಿಗ್ಗಜ ಭಾಗವತರಾದ ಬಲಿಪ ಭಾಗವತರೊಂದಿಗಿನ ಒಡನಾಟದಲ್ಲಿ ಬೆಳೆದವರು. ನಿರಂತರವಾಗಿ ಕಟೀಲು ಮೇಳದಲ್ಲಿಯೇ 18 ವರ್ಷಗಳಿಂದ ಭಾಗವತರಾಗಿ ತನ್ನದೇ  ಪಟ್ಲ ಶೈಲಿಯ ಮೂಲಕ ಗಾನ ಸಿರಿಯನ್ನು ಹರಿಸುತ್ತಿದ್ದು ಲಕ್ಷಾಂತರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿಕೊಂಡಿದ್ದಾರೆ. ಅಮೆರಿಕಾ, ಇಂಗ್ಲೆಂಡ್‌, ಮಸ್ಕತ್‌, ದುಬೈ, ಸಿಂಗಾಪುರ ಸೇರಿದಂತೆ ವಿದೇಶದಲ್ಲೂ ನೂರಾರು ಕಾರ್ಯಕ್ರಮಗಳನ್ನು ನೀಡಿ ಮನಗೆದ್ದಿದ್ದಾರೆ.
ಪತ್ನಿ ನಿರ್ಮಿತ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಹೊಂದಿರುವ ಪಟ್ಲರು ಯಕ್ಷರಂಗಕ್ಕೆ ಇನ್ನಷ್ಟು ಕೊಡುಗೆಗಳನ್ನು ನೀಡಲಿ ಎನ್ನುವುದು ಆಶಯ. 

ಟಾಪ್ ನ್ಯೂಸ್

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.