ಲೋಕ ಸಮರಕ್ಕೂ ಮುನ್ನ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಕ್ಕೆ ಮೀಸಲಾತಿ
Team Udayavani, Jan 7, 2019, 9:34 AM IST
ನವದೆಹಲಿ:ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ.
ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಅಗತ್ಯವಿರುವುದರಿಂದ ಮಂಗಳವಾರ ಲೋಕಸಭೆಯಲ್ಲಿ ಮೀಸಲಾತಿ ತಿದ್ದುಪಡಿ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಈ ವಿಧೇಯಕ ಜಾರಿಯಿಂದ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜಾತಿಗಳಿಗೆ(ವಾರ್ಷಿಕ 8 ಲಕ್ಷಕ್ಕಿಂತ ಕಡಿಮೆ ಆದಾಯ) ಲಾಭವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸಚಿವ ಸಂಪುಟದಲ್ಲಿ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ಖಚಿತಪಡಿಸಿದೆ ಎಂದು ವರದಿ ವಿವರಿಸಿದೆ.
ಶೇ.50ರಿಂದ ಶೇ.60ಕ್ಕೆ ಮೀಸಲಾತಿ ಪ್ರಮಾಣ ಏರಿಕೆಯಾಗಬೇಕಾಗಿದ್ದರಿಂದ ಸಂವಿಧಾನ ತಿದ್ದುಪಡಿ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಧೇಯಕ ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಮಂಡನೆಯಾಗಿ ಪಾಸ್ ಆಗಬೇಕಾಗಿದೆ. ಬಳಿಕ ರಾಷ್ಟ್ರಪತಿ ಅಂಕಿತ ಬಿದ್ದ ಮೇಲೆ ತಿದ್ದುಪಡಿ ವಿಧೇಯಕ ಜಾರಿಯಾಗಲು ಸಾಧ್ಯ. ಆದರೆ ಇನ್ನೂ 2ಎರಡು ದಿನಗಳ ಕಾಲು ಮುಂದೂಡಿಕೆಯಾಗಲಿರುವ ಕಲಾಪದಲ್ಲಿ ತಿದ್ದುಪಡಿ ವಿಧೇಯಕ ಪಾಸ್ ಆಗುತ್ತದೆಯೇ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಳವಾಗಬಾರದು ಎಂಬುದಾಗಿ ಸುಪ್ರೀಂಕೋರ್ಟ್ ಕೂಡಾ ತೀರ್ಪು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ