ಸೌಕರ್ಯ ಕಲ್ಪಿಸಲು ಬದ್ಧ: ರಾಜುಗೌಡ
Team Udayavani, Jan 7, 2019, 11:18 AM IST
ಕಕ್ಕೇರಾ: ಗ್ರಾಮೀಣ ಪ್ರದೇಶದಲ್ಲಿ ಇನ್ಮುಂದೆ ನಿರಂತರ ವಿದ್ಯುತ್ ಹರಿಯಲಿದೆ ಎಂದು ಶಾಸಕ ರಾಜುಗೌಡ ಹೇಳಿದರು.
ಪಟ್ಟಣದ ಕವಸಾರ ದೊಡ್ಡಿ, ಸ್ವಾಮೇರ ದೊಡ್ಡಿಗಳಿಗೆ ದೀನ್ ದಯಾಳ್ ಉಪಾಧ್ಯಯ ಗ್ರಾಮ ಜೋತಿ ವಿದ್ಯುತ್ ಯೋಜನೆಡಿಯಲ್ಲಿ ಹೊಸದಾಗಿ ಕಲ್ಪಿಸಲಾದ ವಿದ್ಯುತ್ ಸೌಕರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮೀಣ ಹಾಗೂ ದೊಡ್ಡಿಗಳಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ಈಗಾಗಲೇ ಸುರಪುರ ತಾಲೂಕಿನಲ್ಲಿ ದಿನ್ ದಯಾಳ್ ಯೋಜನೆಡಿಯಲ್ಲಿ 27 ಕೋಟಿ ರೂ. ಅನುದಾನದಲ್ಲಿ ಈ ಒಂದು ಕಾಮಗಾರಿ ತುರ್ತು ನಡೆದಿದೆ. ಇದು ನಿರಂತರವಾಗಿ ವಿದ್ಯುತ್ ಪೂರೈಸುವ ಕೆಲಸವಾಗಿದೆ ಎಂದು ಅವರು ತಿಳಿಸಿದರು.
ಈ ಭಾಗದಲ್ಲಿ ಅನೇಕ ದೊಡ್ಡಿಗಳಿಗೆ ವಿದ್ಯುತ್ ಕೊರತೆ ಸಮಸ್ಯೆ ಎದುರಿಸಬೇಕಾಗಿತ್ತು. ವಿದ್ಯುತ್ ಇಲ್ಲದೆ ಚಿಮಣಿ ಬುಡ್ಡಿಯಲ್ಲಿ ಜನ ಕಾಲ ಕಳೆಯಬೇಕಿತ್ತು. ಸದ್ಯ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಈಗ ಯಾವುದೇ ಸಮಸ್ಯೆ ಆಗದು ಎಂದು ಹೇಳಿದರು. ಜನದಟ್ಟಣೆ ಮತ್ತು ಅಧಿಕ ಮನೆಗಳಿದ್ದು, ವಿದ್ಯುತ್ ಸಂಪರ್ಕ ಹೊಂದಿಲ್ಲದಿದ್ದರೆ ಅಂತಹ ಗ್ರಾಮ ಅಥವಾ ಮನೆಗಳನ್ನು ಗುರುತಿಸಿ ವಿದ್ಯುತ್ ಪರಿವರ್ತಕದೊಂದಿಗೆ ವಿದ್ಯುತ್ ಜೋಡಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ದಶರಥ ಆರೇಶಂಕರ, ಎಪಿಎಂಸಿ ಸದಸ್ಯ ಬಸವರಾಜ ಆರೇಶಂಕರ, ಪರಮಣ್ಣ ಪೂಜಾರಿ, ರಮೇಶ ಶೆಟ್ಟಿ ಸೇರಿದಂತೆ ವಿವಿಧ ಮುಖಂಡರು ಹಾಗೂ ವಿದ್ಯುತ್ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ
MUST WATCH
ಹೊಸ ಸೇರ್ಪಡೆ
Bengaluru: ಠಾಣೆಯಲ್ಲೇ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು