ಭಾರತ್‌ ಬಂದ್‌ಗೆ‌ ಸಂಘಟನೆಗಳ ಬೆಂಬಲ


Team Udayavani, Jan 7, 2019, 7:35 PM IST

bandh-symbolic-1-600.jpg

ಬೆಳ್ತಂಗಡಿ: ಕೇಂದ್ರ ಸರಕಾರದ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಜ.8 ಹಾಗೂ 9 ರ ಭಾರತ್‌ ಬಂದ್‌ಗೆ ಬೆಳ್ತಂಗಡಿಯಲ್ಲೂ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ತಾಲೂಕಿನಲ್ಲೂ ಬಂದಾಗುವ ಸಾಧ್ಯತೆಗಳು ಕಂಡು ಬರುತ್ತಿವೆ. ಬಂದ್‌ನ ಕುರಿತು ಯಾವುದೇ ಅಧಿಕೃತ ಘೋಷಣೆಗಳು ನಡೆದಿಲ್ಲವಾದರೂ ಈಗಾಗಲೇ ಹಲವು ಸಂಘಟನೆಗಳು ಬಂದ್‌ಗಾಗಿ ಮನವಿ ಮಾಡುತ್ತಿದ್ದಾರೆ.

ಜನ, ಕಾರ್ಮಿಕ ನೀತಿ ವಿರೋಧಿ ವಿರುದ್ಧ ಅಖಿಲ ಭಾರತ ಎಲ್ಲಾ ಕಾರ್ಮಿಕ ಸಂಘಗಳು ಸರಕಾರದ ಜನವಿರೋಧಿ ಹಾಗೂ ಕಾರ್ಮಿಕ ನೀತಿಗಳ ವಿರುದ್ಧ ಹಾಗೂ ಕನಿಷ್ಟ ವೇತನ ಮಾಸಿಕ ರೂ.18 ಸಾವಿರ, ಕೆಲಸದ ಭದ್ರತೆ, ಸವಲತ್ತುಗಳ ಪಾವತಿಗಾಗಿ ಆಗ್ರಹಿಸಿ ಹಾಗೂ ಅಂಗನವಾಡಿ, ಬಿಸಿಯೂಟ, ಆಶಾ ನೌಕರರ ಕಾಯಂ ನೌಕರರೆಂದು ಮಾನ್ಯ ಮಾಡಲು ಒತ್ತಾಯಿಸಿ, ಬೀಡಿ ಕಾರ್ಮಿಕರ ಡಿ.ಎ. ಕನಿಷ್ಟ ಕೂಲಿ ಜಾರಿಗೆ ಆಗ್ರಹಿಸಿ, ಕಟ್ಟಡ ಕಾರ್ಮಿಕರಿಂದ ಹಣ ಪಡೆದು ಮೋಸ ಮಾಡುವ ಕಾರ್ಮಿಕ ಇಲಾಖೆಯ ಸುಲಿಗೆ ನೀತಿ ವಿರುದ್ಧ 48 ಗಂಟೆಯ ಮುಷ್ಕರ ನಡೆಸಲು ಕರೆಕೊಟ್ಟಿವೆ.

ಸಂಘಟನೆಗಳ ಬೆಂಬಲ
ಮುಷ್ಕರವನ್ನು ಬೆಂಬಲಿಸಿ ಭಾಗವಹಿಸಿ ಯಶಸ್ವಿಗೊಳಿಸಲು ಬೆಳ್ತಂಗಡಿ ತಾ| ಅಂಗನ ವಾಡಿ ನೌಕರರ ಸಂಘ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕು ಅಕ್ಷರ ದಾಸೋಹ ನೌಕರರ ಸಂಘಗಳು, ದ.ಕ. ಜಿಲ್ಲಾ ಬೀಡಿ ಕಾರ್ಮಿಕರ ಒಕ್ಕೂಟ, ದ.ಕ. ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ, ಆಟೋ ಚಾಲಕರ ಸಂಘಟನೆ, ಪಿಕ್‌ಅಪ್‌ ಚಾಲಕರ ಸಂಘಟನೆ, ಗುತ್ತಿಗೆ ಕಾರ್ಮಿಕರ ಸಂಘಟನೆ, ಅಸಂಘಟಿತ ಕಾರ್ಮಿಕ ಸಂಘಟನೆಗಳು ನಿರ್ಧರಿಸಿವೆ ಎಂದು ಸಂಘಟನೆಗಳ ಪ್ರಮುಖ ಮುಖಂಡ, ನ್ಯಾಯವಾದಿ ಬಿ.ಎಂ. ಭಟ್‌, ಇತರ ಮುಖಂಡರುಗಳಾದ ದೇವಕಿ ಕಳೆಂಜ, ಜಯರಾಮ ಮಯ್ಯ, ಲೋಕೇಶ್‌ ಕುದ್ಯಾಡಿ, ರಾಮಚಂದ್ರ, ದಮಯಂತಿ, ಲೀಲಾವತಿ, ಮೋಹಿನಿ ಪಿಲ್ಯ, ಭಾರತಿ ಮುಗುಳಿ, ರತ್ನ ಕೆಮ್ಮಾಯಿ, ಸವಿತಾ ಕುಂಜೂರು ಪಂಜ, ಗುಡ್ಡಪ್ಪ ಗೌಡ ಸರ್ವೆ, ಕೇಶವ ಗೌಡ ಪುತ್ತೂರು, ಈಶ್ವರಿ, ಜಯಶ್ರೀ, ಪುಷ್ಪಾ, ಶೇಖರ ವೇಣೂರು, ದಿನೇಶ್‌, ರಝಾಕ್‌, ಸುಲೇಮಾನ್‌ ಮೊದಲಾದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅಹಿತಕರ ಘಟನೆ ನಡೆದಲ್ಲಿ ಸಂಚಾರ ಮೊಟಕು
ಬಂದ್‌ ಹಿನ್ನೆಲೆಯಲ್ಲಿ ಬಸ್ಸುಗಳು, ಆಟೋರಿಕ್ಷಾಗಳು ಹಾಗೂ ಇತರ ವಾಹನಗಳು ಇನ್ನೂ ಬಂದ್‌ನ ಕುರಿತು ಅಧಿಕೃತವಾಗಿ ತಿಳಿಸಿಲ್ಲ. ಆದರೆ ಕೆಲವೊಂದು ವಾಹನಗಳು ಬಂದಾಗುವ ಸಾಧ್ಯತೆ ಇದೆ. ಕೆ.ಎಸ್‌.ಆರ್‌.ಟಿ.ಸಿ. ವಾಹನಗಳು ಕೂಡಾ ಸಂಚಾರ ನಡೆಸುವ ಕುರಿತು ತಿಳಿಸಿದ್ದು ಆದರೆ ಕೊನೆಯ ಕ್ಷಣದಲ್ಲಿ ಅಹಿತಕರ ಘಟನೆಯ ಸಾಧ್ಯತೆ ಇದ್ದರೆ ಸಂಚಾರ ಮೊಟಕುಗೊಳಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೂಚನೆ ಇಲ್ಲ
ಬಂಟ್ವಾಳ:
ಸಾರಿಗೆ ರಂಗವನ್ನು ಕಾರ್ಪೋರೇಟ್‌ಗೆ ಪರಭಾರೆ ಮಾಡುವ ಮೋಟಾರು ವಾಹನ ಮಸೂದೆ ವಿರೋಧಿಸಿ, ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಜ. 8,9ರಂದು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆದ ಭಾರತ್‌ ಬಂದ್‌ಗೆ ಬೆಂಬಲಿಸಿ ಸ್ಥಳೀಯ ಸಂಘಟನೆಗಳಿಂದ ಯಾವುದೇ ಲಿಖೀತ ಮಾಹಿತಿ ಬಂದಿಲ್ಲ ಎಂದು ಸಂಘಟಕರು ತಿಳಿಸಿದ್ದಾರೆ.

ಬ್ಯಾಂಕ್‌ ಮತ್ತು ಸರಕಾರಿ ನೌಕರರ ಸ್ಥಳೀಯ ಸಂಘಟನೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಖಾಸಗಿ ಮತ್ತು ಸರಕಾರಿ ಶಾಲಾ ಬಂದ್‌ ಬಗ್ಗೆ ಜಿಲ್ಲೆಯಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮಾಹಿತಿ ನೀಡಿದೆ. ಜೀವ ವಿಮಾ ನಿಗಮದಲ್ಲಿ ಸಿಬಂದಿ ಕರ್ತವ್ಯ ನಿರ್ವಹಿಸುವುದಿಲ್ಲ. ಆದರೆ ಶಾಖೆ ಎಂದಿನಂತೆ ತೆರೆಯಲಿದೆ ಎಂದು ಅಭಿಪ್ರಾಯ ನೀಡಿದ್ದಾರೆ. ಅಂಚೆ ಇಲಾಖೆ ಸಿಬಂದಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸುವರು ಎಂದಿದ್ದಾರೆ. ಕೆಎಸ್‌ಆರ್‌ಟಿಸಿಗೆ ಸಂಬಂಧಿಸಿ ಹಿರಿಯ ಅಧಿಕಾರಿಗಳಿಂದ ಯಾವುದೇ ಸೂಚನೆ ಬಾರದಿರುವ ಕಾರಣ ಬಸ್‌ಗಳ ಓಡಾಟ ಎಂದಿನಂತಿರುವುದು ಎಂದಿದ್ದಾರೆ. ಸ್ಥಳೀಯವಾಗಿ ಬಂದ್‌ ಪೂರಕ ಬೆಂಬಲವಾಗಿ ಯಾವುದೇ ಸಂಘಟನೆ ಪ್ರಕಟನೆ ನೀಡಿಲ್ಲ. ಸಾರ್ವಜನಿಕ ಮಾಧ್ಯಮಗಳಲ್ಲಿ ಮಾತ್ರ ಬಂದ್‌ ಮಾಹಿತಿ ವ್ಯಕ್ತವಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.