ಮಂಗನ ಕಾಯಿಲೆ ಉಲ್ಬಣ: ಮತ್ತಿಬ್ಬರ ಸ್ಥಿತಿ ಗಂಭೀರ
Team Udayavani, Jan 8, 2019, 12:30 AM IST
ಸಾಗರ: ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು ಸಾಗರ ತಾಲೂಕಿನ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಸೋಮವಾರ ಜ್ವರದಿಂದ ಬಳಲುತ್ತಿರುವ ನಾಲ್ವರು ಅರಳಗೋಡು ಪ್ರಾಥಮಿಕ ಕೇಂದ್ರಕ್ಕೆ ದಾಖಲಾಗಿದ್ದಾರೆ. ಈವರೆಗೆ ಒಟ್ಟು 21 ಜನರಲ್ಲಿ ಜ್ವರ ಕಾಣಿಸಿಕೊಂಡಿದೆ. ಅರಳಗೋಡಿನ ಸವಿತಾ ಹಾಗೂ ಶನಿವಾರ ಕೊನೆಯುಸಿರೆಳೆದ ಜೀಗಳದ ಶ್ವೇತಾ ಅವರ ತಂದೆ ದೇವರಾಜ್ ಜೈನ್ ಅವರ ಆರೋಗ್ಯ ಸೂಕ್ಷವಾಗಿದ್ದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಶನಿವಾರದಿಂದಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ತೆರಳುವವರ ಸಂಖ್ಯೆ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಅಲ್ಲಿ ಗುಣಮುಖರಾಗದವರನ್ನೂ ಮಣಿಪಾಲ್ನ ಕೆಎಂಸಿಗೆ ರವಾನಿಸಲಾಗಿದೆ. ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ವಿವಿಧ ಆಸ್ಪತ್ರೆಗಳಲ್ಲಿ 38 ಶಂಕಿತ ಕೆಎಫ್ಡಿ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಭಾನುವಾರ ದಿಂದ 11 ಜನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಎಫ್ಡಿ ನಿರೋಧಕ ಘಟಕದ ಉಪನಿರ್ದೇಶಕ ಡಾಣ ರವಿಕುಮಾರ್ “ಉದಯವಾಣಿ’ಯೊಂದಿಗೆ ಮಾತನಾಡಿ, “ಸೋಮವಾರದಿಂದ ಶಿವಮೊಗ್ಗದಲ್ಲಿ ರಕ್ತ ಪರೀಕ್ಷೆ ಕೇಂದ್ರ ಕಾರ್ಯಾರಂಭ ಮಾಡಿದೆ.
ಮೊದಲ ದಿನ ಹತ್ತು ಜನರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಡ್ಡಲಾಗಿದ್ದು, ಮಂಗಳವಾರ ಮಧ್ಯಾಹ್ನದ ವೇಳೆಗೆ ಫಲಿತಾಂಶ ಬರಲಿದೆ. ಇಂದು ಸಾಗರ ತಾಲೂಕಿನಲ್ಲಿ ಸಂಗ್ರಹವಾದ ರಕ್ತದ ಸ್ಯಾಂಪಲ್ಗಳು ಸಂಜೆ ಕೇಂದ್ರ ತಲುಪಲಿದ್ದು ಅವುಗಳ ಪರೀಕ್ಷಾ ವರದಿ ಬುಧವಾರವಷ್ಟೇ ಸಿಗಲಿದೆ’ ಎಂದರು.
34 ಜನರಲ್ಲಿ ಕೆಎಫ್ಡಿ ವೈರಸ್: ಮೂರು ತಿಂಗಳಿನಿಂದ ಒಟ್ಟು 36 ಮಂಗಗಳು ಮೃತಪಟ್ಟಿದ್ದು, ಅದರಲ್ಲಿ ಆರು ಮಂಗಗಳ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ ನಾಲ್ಕು ಮಂಗಗಳಲ್ಲಿ ಕೆಎಫ್ಡಿ ವೈರಸ್ ಇರುವುದು ದೃಢಪಟ್ಟಿದೆ.
ಈವರೆಗೆ 83 ಜನರಿಗೆ ಮಂಗನ ಕಾಯಿಲೆಯ ಶಂಕೆ ವ್ಯಕ್ತವಾಗಿದ್ದು, 34 ಜನರಲ್ಲಿ ವೈರಸ್ ಪತ್ತೆಯಾಗಿದೆ. ಸೋಮವಾರ ಐದು ಮಂಗಗಳ ಶವ ತಾಲೂಕಿನ ಬೇರೆ ಬೇರೆ ಭಾಗಗಳಲ್ಲಿ ಪತ್ತೆಯಾಗಿದೆ. ಎಂ.ಎಲ್.ಹಳ್ಳಿ,ಕರೂರು, ಬ್ಯಾಡಗೋಡು, ಆನಂದಪುರ ಸಮೀಪದ ಇರುವಕ್ಕಿಯಲ್ಲಿ ಮಂಗನ ಮೃತ ದೇಹ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ