3 ವರ್ಷಗಳಲ್ಲಿ ದೇಶದ 334 ಸೈನಿಕರು ಆತ್ಮಹತ್ಯೆಗೆ ಶರಣು; ಸಚಿವ ಸುಭಾಶ್
Team Udayavani, Jan 8, 2019, 9:49 AM IST
ನವದೆಹಲಿ:ಕಳೆದ ಮೂರು ವರ್ಷಗಳಲ್ಲಿ ದೇಶದ ಸೇನೆ, ನೌಕಾದಳ ಹಾಗೂ ವಾಯುದಳದಲ್ಲಿ ಸುಮಾರು 334 ಸೈನಿಕರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿರುವುದಾಗಿ ರಾಜ್ಯಸಭೆಗೆ ಮಾಹಿತಿ ನೀಡಲಾಗಿದೆ.
2018ರಲ್ಲಿ ಸೇನೆ, ನೌಕಾದಳ, ವಾಯುದಳ ಸೇರಿ 104 ಸೈನಿಕರನ್ನು ಕಳೆದುಕೊಂಡಿದ್ದರೆ, 2017ರಲ್ಲಿ 101 ಸೈನಿಕರು ಹಾಗೂ 2016ರಲ್ಲಿ 129 ಮಂದಿ ಸೈನಿಕರು ಆತ್ಮಹತ್ಯೆಗೆ ಶರಣಾಗಿರುವುದಾಗಿ ರಕ್ಷಣಾ ಖಾತೆಯ ರಾಜ್ಯ ಸಚಿವ ಸುಭಾಶ್ ಭಾಮ್ರೆ ರಾಜ್ಯಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶವನ್ನು ರಕ್ಷಿಸುವ ಸೈನಿಕರ ಹಿತ ಕಾಪಾಡುವ ಹಾಗೂ ಆರೋಗ್ಯಕರ ವಾತಾವರಣ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ಮಾಹಿತಿ ನೀಡಿದರು. ಭದ್ರತಾ ಪಡೆಯ ಅಧಿಕಾರಿಗಳು, ಇತರ ಶ್ರೇಣಿಯ ಸಿಬ್ಬಂದಿಗಳಿಗಾಗಿ ಉತ್ತಮ ಬಟ್ಟೆ, ಆಹಾರ, ಶಿಕ್ಷಣ, ಪ್ರಯಾಣ ವ್ಯವಸ್ಥೆ, ವಿವಾಹಿತರಿಗೆ ಸಮರ್ಪಕ ವಸತಿ ಸೇರಿದಂತೆ ಹಲವು ಗುಣಮಟ್ಟದ ಸೌಲಭ್ಯ ನೀಡಲಾಗುತ್ತಿದೆ ಎಂದು ವಿವರಿಸಿದರು.
ಅಲ್ಲದೇ ಸೈನಿಕರಿಗೆ ಮಾನಸಿಕ ಒತ್ತಡದಿಂದ ಹೊರಬರಲು ಯೋಗ ಮತ್ತು ಧ್ಯಾನದ ತರಬೇತಿ ನೀಡಲಾಗುತ್ತಿದೆ. ಆರ್ಮಿ ಮತ್ತು ವಾಯುಸೇನೆಗೆ ಮಾನಸಿಕ್ ಸಹಾಯತಾ ಸಹಾಯವಾಣಿಯನ್ನು ಆರಂಭಿಸಿದ್ದು, ಅಗತ್ಯವಿದ್ದವರಿಗೆ ಕೌನ್ಸಲಿಂಗ್ ನಡೆಸಲಾಗುತ್ತಿದೆ ಎಂದು ಸಚಿವರು ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು