ಪ್ಯಾಸೆಂಜರ್‌ ರೈಲು ಸಂಚಾರಕ್ಕೆ ಮನವಿ


Team Udayavani, Jan 8, 2019, 11:42 AM IST

tmk-1.jpg

ತುಮಕೂರು: ಬೆಂಗಳೂರಿನಿಂದ ತುಮಕೂರಿಗೆ ರಾತ್ರಿ 8 ಗಂಟೆಗೆ ಒಂದು ಪ್ಯಾಸೆಂಜರ್‌ ರೈಲು ಸಂಚಾರಕ್ಕೆ ಅನುವಾಗುವಂತೆ ರೈಲ್ವೆ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತುಮಕೂರು ಸಂಸದ ಎಸ್‌.ಪಿ.ಮುದ್ದ ಹನುಮೇಗೌಡ ಅವರನ್ನು ರೈಲ್ವೆ ಪ್ರಯಾಣಿಕರ ವೇದಿಕೆ ಮನವಿ ಮಾಡಿದೆ. 

ಸಂಸದರ ಹೆಬ್ಬೂರು ನಿವಾಸದಲ್ಲಿ ಭೇಟಿ ಮಾಡಿದ ತುಮಕೂರು-ಬೆಂಗಳೂರು ರೈಲ್ವೆ ಪ್ರಯಾಣಿಕರ ವೇದಿಕೆ ಪದಾಧಿಕಾರಿಗಳು ರಾತ್ರಿ ರೈಲು ಆರಂಭದಿಂದ ತುಮಕೂರಿನ ಪ್ರಯಾಣಿಕರಿಗಷ್ಟೇ ಅಲ್ಲದೇ, ಬೆಂಗಳೂರು-ತುಮಕೂರು ನಡುವಿನ ಗ್ರಾಮಗಳ ಸಾವಿರಾರು ಜನರಿಗೆ ಅನುಕೂಲವಾಗ ಲಿದೆ ಎಂದು ಮನವರಿಕೆ ಮಾಡಿಕೊಟ್ಟರು. 

ಎಲ್ಲರಿಗೂ ಅನುಕೂಲ: ಸಂಜೆ 6.20 ರ ನಂತರ ಬೆಂಗಳೂರಿನಿಂದ ತುಮಕೂರಿಗೆ ಇರುವ ಪ್ಯಾಸೆಂಜರ್‌ ರೈಲು ಬಿಟ್ಟರೆ ಮತ್ತೆ ರಾತ್ರಿ 11 ಗಂಟೆ ಯವರೆಗೆ ಪ್ಯಾಸೆಂಜರ್‌ ರೈಲಿನ ಅನುಕೂಲವಿಲ್ಲ. ಇದರಿಂದ ಸಾವಿರಾರು ಪ್ರಯಾಣಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ರಾತ್ರಿ ರೈಲು ಆರಂಭದಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದು ವಿವರಿಸಿದರು. 

ಮನವಿ: ಬೆಂಗಳೂರಿಗೆ ಅತ್ಯಂತ ಸಮೀಪವಿರುವ ಮತ್ತು ವಾಣಿಜ್ಯ ವಹಿವಾಟು ನಗರವಾಗಿರುವ ತುಮಕೂರಿಗೆ ಉಪನಗರ ರೈಲು ಯೋಜನೆಯನ್ನು ಎರಡನೇ ಹಂತಕ್ಕೆ ನಿಗದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಮೊದಲ ಹಂತದಲ್ಲೇ ತುಮಕೂರು ನಗರವನ್ನು ಸೇರಿಸಲು ಒತ್ತಾಯಿಸಬೇಕೆಂದು ಮನವಿ ಮಾಡಿದರು.
 
ಲಿಫ್ಟ್ ಅಳವಡಿಕೆಗೆ ಯೋಜನೆ: ತುಮಕೂರು ರೈಲು ನಿಲ್ದಾಣದಲ್ಲಿ ಪಾದಚಾರಿ ಮೇಲ್ಸೇತುವೆ ಇದ್ದು, ಇದಕ್ಕೆ ರ್‍ಯಾಂಪ್‌ ಅಳವಡಿಸದೇ ನಿರ್ಲಕ್ಷಿಸಲಾಗಿದೆ. ಇದರಿಂದ ತೀವ್ರ ತೊಂದರೆಯಾಗಿದೆ.  ಪ್ರಸ್ತುತರ್‍ಯಾಂಪ್‌ ಅಳ ವಡಿಸಲು ಅವಕಾಶವಿಲ್ಲದಿ ರುವುದರಿಂದ ಎರಡು ಮತ್ತು 3-4ನೇ ಪ್ಲಾಟ್‌ ಫಾರಂಗಳಲ್ಲಿ ಲಿಫ್ಟ್ ಅಳವಡಿಕೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಸ್ಥೆಗಳು, ಸಾಮಾಜಿಕ ಕಾಳಜಿಯ ಸಂಘಟನೆಗಳ ಹಾಗೂ ಜನಪ್ರತಿನಿಧಿಗಳ ದೇಣಿಗೆಯಿಂದ ಲಿಫ್ಟ್ ಅಳವಡಿಸಲು ವೇದಿಕೆ ಯೋಜನೆ ರೂಪಿಸುತ್ತಿದೆ. ಇದಕ್ಕೆ ಸಂಸದರ ನಿಧಿಯಿಂದ ಆರಂಭಿಕ ಕೊಡುಗೆ ನೀಡಬೇಕೆಂದು ಮನವಿ ಮಾಡಲಾಯಿತು.

ಭರವಸೆ: ವೇದಿಕೆಯ ಎಲ್ಲ ಬೇಡಿಕೆಗಳನ್ನು ಆಲಿಸಿದ ಸಂಸದ ಮುದ್ದಹನುಮೇಗೌಡ ಅವರು ಸಂಸತ್‌ ಅಧಿವೇಶನದ ನಂತರ ಎಲ್ಲ ಬೇಡಿಕೆಗಳ ಈಡೇರಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ವೇಳೆ ವೇದಿಕೆ ಕಾರ್ಯದರ್ಶಿ ಕರಣಂ ರಮೇಶ್‌, ಹಿರಿಯ ಉಪಾಧ್ಯಕ್ಷರಾದ ಪರಮೇಶ್ವರ್‌, ಖಜಾಂಚಿ ಆರ್‌.ಬಾಲಾಜಿ ಹಾಗೂ ನಿರ್ದೇಶಕರಾದ ಸಿ.ನಾಗರಾಜ್‌ ಮತ್ತು ಎಚ್‌.ಆರ್‌.ರಘು ಇದ್ದರು. 

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.