ಕಾರ್ಮಿಕರಿಲ್ಲದೆ ನೀರಿಗಿಳಿಯದ ದೋಣಿಗಳು


Team Udayavani, Jan 9, 2019, 4:13 AM IST

port.jpg

ಮಲ್ಪೆ: ನಮ್ಮವರ ಸುಳಿವು ಸಿಗದೆ ಮೀನುಗಾರಿಕೆಗೆ ತೆರಳುವುದಿಲ್ಲ ಎಂದು ಉ.ಕನ್ನಡ ಜಿಲ್ಲೆಯ ಮೀನುಗಾರ ಕಲಸಿಗಳು (ಕಾರ್ಮಿಕರು) ತೀರ್ಮಾನ ಕೈಗೊಂಡದ್ದರಿಂದ ಮಲ್ಪೆ ಬಂದರಿನಲ್ಲಿ ಬೆರಳೆಣಿಕೆಯ ಬೋಟ್‌ಗಳನ್ನು ಹೊರತುಪಡಿಸಿ ಉಳಿದೆಲ್ಲವೂ ದಡದಲ್ಲಿ ನಿಲ್ಲುವಂತಾಗಿದೆ. ತ.ನಾಡು, ಕೇರಳದ ಕಾರ್ಮಿಕರಿರುವ ಕೆಲವು ಆಳಸಮುದ್ರ ಬೋಟ್‌ಗಳು ಮಾತ್ರ ಮೀನುಗಾರಿಕೆಗೆ ತೆರಳಿವೆ.

ಭಟ್ಕಳದ ಟ್ರಾಲ್‌ಬೋಟ್‌ ಚಾಲಕರ ಸಂಘ ಮಂಗಳವಾರ ಅಲ್ಲಿ ಸಭೆ ನಡೆಸಿ ಜ. 11ರಿಂದ ಮೀನುಗಾರಿಕೆ ತೆರಳುವು ದೆಂದು ತೀರ್ಮಾನಿಸಿದೆ. ಆದರೆ ಕಲಸಿಗಳು ಈ ಬಗ್ಗೆ ಬುಧವಾರ ಬೋಟ್‌ ಚಾಲಕರ ಸಂಘದ ಜತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಮೀನುಗಾರಿಕೆ ಸಚಿವರ ಹೇಳಿಕೆಗೆ ಖಂಡನೆ
ಉಡುಪಿ: ಮೀನುಗಾರರು ಕಣ್ಮರೆಯಾಗಿರುವ ದುಃಖದ ಸಂದರ್ಭ ಅಸಂಬದ್ಧ ಹೇಳಿಕೆ ನೀಡಿರುವ ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮೀನುಗಾರರ ಮುಖಂಡ, ತಾ.ಪಂ. ಸದಸ್ಯ ಶರತ್‌ ಕುಮಾರ್‌ ಬೈಲಕೆರೆ ಮತ್ತು ಗ್ರಾ.ಪಂ. ಅಧ್ಯಕ್ಷ ಉಮೇಶ್‌ ಪೂಜಾರಿ ಬಡಾನಿಡಿಯೂರು ಆಗ್ರಹಿಸಿದ್ದಾರೆ. 

“ಮೀನುಗಾರರು ನಾಪತ್ತೆಯಾಗಿದ್ದಾರೆಂದು ತಿಳಿದ ಕೂಡಲೇ ಹುಡುಕುವ ಕೆಲಸ ಸರಕಾರ ಆರಂಭಿಸಿದೆ. ಆದರೆ ನಾಪತ್ತೆಯಾದವರನ್ನು ನಾವೇ ಸಮುದ್ರಕ್ಕಿಳಿದು ಹುಡುಕು ವುದಕ್ಕೆ ಆಗುತ್ತಾ?’ ಎಂದು ಸಿಂಧನೂರಿನಲ್ಲಿ ಸಚಿವರು ಹೇಳಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿದೆ. ಮೀನುಗಾರರ ಬಗ್ಗೆ ಕಾಳಜಿ, ಸಹಾನುಭೂತಿ ಮತ್ತು ಗೌರವ ಇರದ ಸಚಿವರು ಹುದ್ದೆಯಲ್ಲಿ ಮುಂದುವರಿಯುವ ಅರ್ಹತೆ ಕಳೆದುಕೊಂಡಿದ್ದಾರೆ, ಇಂತಹ ಸಚಿವರಿಂದ ಯಾವ ನಿರೀಕ್ಷೆಯನ್ನೂ ಇರಿಸಿಕೊಳ್ಳುವ ಹಾಗಿಲ್ಲ, ಅವರು ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ತಿಳಿಸಿದ್ದಾರೆ. ನಾಪತ್ತೆಯಾದ ಇಬ್ಬರು ಬಡಾನಿಡಿಯೂರು ಗ್ರಾ. ಪಂ. ವ್ಯಾಪ್ತಿಯವರು.

ಶೋಧ ಮುಂದುವರಿಕೆ: ಎಸ್‌ಪಿ
ಶೋಧ ಕಾರ್ಯಾಚರಣೆಯನ್ನು ಕೋಸ್ಟ್‌ ಗಾರ್ಡ್‌ ಮತ್ತು ನೌಕಾಪಡೆ ಮುಂದುವರಿಸಿವೆ. ಉಪಗ್ರಹ ಆದಾರಿತ ಶೋಧಕ್ಕಾಗಿ ಬೆಂಗಳೂರಿನ ಇಸ್ರೋ, ಕೆಎಸ್‌ಆಎಸ್‌ಎಸಿ; ಹೈದರಾಬಾದ್‌ನ ಐಎನ್‌ಸಿಒಐಎಸ್‌ ಜತೆಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗಿದೆ ಎಂದು ಉಡುಪಿ ಎಸ್‌ಪಿ ಮಾಹಿತಿ ನೀಡಿದ್ದಾರೆ.

ಸಚಿವರ ಭೇಟಿ
ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಅವರು ಜ.9ರಂದು ಸಂಜೆ 4ಕ್ಕೆ ಉಡುಪಿಗೆ ಆಗಮಿಸಿ ನಾಪತ್ತೆಯಾದ ಮೀನುಗಾರರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಬಳಿಕ ಇಲಾಖಾಧಿಕಾರಿಗಳ ಸಭೆ ನಡೆಸಲಿದ್ದಾರೆ. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.