ಕಾರ್ಮಿಕರ ಹರತಾಳಕ್ಕೆ ಅಲ್ಪ ಯಶಸ್ಸು


Team Udayavani, Jan 9, 2019, 5:53 AM IST

cta-1.jpg

ಚಿತ್ರದುರ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆ ವಿರೋ ಧಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್‌ ಬಂದ್‌, ಮೊದಲ ದಿನವಾದ ಮಂಗಳವಾರ ಜಿಲ್ಲೆಯಲ್ಲಿ ಭಾಗಶಃ ಯಶಸ್ವಿಯಾಗಿದೆ.

ಶಾಲಾ, ಕಾಲೇಜು, ಅಂಚೆ ಕಚೇರಿ, ಬ್ಯಾಂಕ್‌, ಎಲ್‌ಐಸಿ ಜತೆಗೆ ಇತರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಚೇರಿಗಳು ಮುಚ್ಚಿದ್ದವು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು ಹಾಗೂ ಖಾಸಗಿ ಬಸ್‌ಗಳು ರಸ್ತೆಗೆ ಇಳಿಯಲಿಲ್ಲ. ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಮೆರವಣಿಗೆ ನಡೆಸಿ ಗಾಂಧಿವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. 

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಅಧಿಕಾರಕ್ಕೆ ಬಂದ ದಿನದಿಂದ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸಿ ಬಂಡವಾಳ ಶಾಹಿಗಳಿಗೆ, ಕಾರ್ಪೋರೆಟ್‌ ಕಂಪನಿಗಳಿಗೆ ಲಕ್ಷಾಂತರ ಕೋಟಿ ರೂ.ಗಳ ಸಾಲ ಮತ್ತು ತೆರಿಗೆ ರಿಯಾಯತಿ ನೀಡಿ ನೌಕರ ವರ್ಗವನ್ನು ಶೋಷಿಸಲಾಗುತ್ತಿದೆ. ರೈತ ವಿರೋಧಿ ನೀತಿ ಅನುಸರಿಸುತ್ತಿರುವುದರಿಂದ ದೇಶದಲ್ಲಿ ರೈತರ ಆತ್ಮಹತ್ಯೆ ಹೆಚ್ಚುತ್ತಿದೆ. ಕಾರ್ಮಿಕರು ಸಂಪೂರ್ಣವಾಗಿ ಬೀದಿಗೆ ಬಿದ್ದಿದ್ದಾರೆ ಎಂದು ಆರೋಪಿಸಿದರು.

ಅಂಚೆ ಇಲಾಖೆ ನೌಕರರು ಕಚೇರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಅಂಚೆ ನೌಕರರಿಗೆ ವೇತನ ತಾರತಮ್ಯ ಮಾಡುತ್ತಿದೆ, ಸೇವಾ ಭದ್ರತೆ ನೀಡುತ್ತಿಲ್ಲ ಎಂದು ದೂರಿದರು. 

ಬ್ಯಾಂಕ್‌ ಮತ್ತು ಎಲ್‌ಐಸಿ ನೌಕರರು ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಕೇಂದ್ರ ಸರ್ಕಾರ ನೀತಿ ಕೋಟ್ಯಂತರ ದುಡಿಯುವ ವರ್ಗದಲ್ಲಿ ಆತಂಕ ಹಾಗೂ ತಳಮಳವನ್ನುಂಟು ಮಾಡಿದೆ. ಕಾರ್ಮಿಕ ನೀತಿ ನಿಯಮಾವಳಿ ಉಲ್ಲಂಘನೆ ಎಗ್ಗಿಲ್ಲದೆ ನಡೆದಿದೆ. ಖಾಲಿ ಹುದ್ದೆಗಳ ಭರ್ತಿ ಮಾಡುತ್ತಿಲ್ಲ, ಸರ್ಕಾರಿ ಸೇವೆಗಳನ್ನು ಗುತ್ತಿಗೆಗೆ ನೀಡುವುದು, ಇದರ ನೆಪದಲ್ಲಿ ಸಿಬ್ಬಂದಿ ಕಡಿತಗೊಳಿಸುವ ಪ್ರಕ್ರಿಯೆ ಸದ್ದಿಲ್ಲದೆ ನಡೆಯುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶವನ್ನು ಬೆಲೆ ಏರಿಕೆಯಿಂದ ರಕ್ಷಿಸುತ್ತೇವೆ. ಅಚ್ಛೇ ದಿನ್‌ ಬರಲಿದೆ ಎನ್ನುತ್ತಲೇ ದೇಶದ ಜನರ ಶೋಷಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲಾಗುತ್ತದೆ ಎಂದು ಮೋದಿ ನೀಡಿದ ಭರವಸೆ ಇಂದಿಗೂ ಈಡೇರಿಲ್ಲ. ಉದ್ಯೋಗ ನೀಡುವುದು ಹೋಗಲಿ, ಕಾರ್ಮಿಕ ಮತ್ತು ನೌಕರ ವರ್ಗದ ನಿಯಂತ್ರಣ ಸೇರಿದಂತೆ ದುಡಿಯುವ ಜನರ ಹಕ್ಕುಗಳನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ. ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರದಿಂದ ದೇಶದ ಕೋಟ್ಯಾಂತರ ಕುಟುಂಬಗಳು ಜೀವನದ ಆಧಾರವಾಗಿದ್ದ ಉದ್ಯೋಗ ಕಳೆದುಕೊಂಡು ಬೀದಿಪಾಲಾಗಿವೆ.

ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವ ನರೇಗಾ ಯೋಜನೆಯ ಅನುದಾನ ಕಡಿತ ಮಾಡಲಾಗಿದೆ ಎಂದು ಕಿಡಿ ಕಾರಿದರು. ಎಐಟಿಯುಸಿ., ಐಎನ್‌ಟಿಯುಸಿ, ಬಿಸಿಯೂಟ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ರೈತ ಸಂಘ ಹಾಗೂ ಹಸಿರುಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ) ಕಾರ್ಯಕರ್ತರು, ಕೆನರಾ ಬ್ಯಾಂಕ್‌ ಸೇರಿದಂತೆ ಮತ್ತಿತರ ಬ್ಯಾಂಕುಗಳ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.