ಮಹಿಳೆ ಘನತೆಗೆ ಫುಲೆ ಜೀವನ ಮುಡಿಪು


Team Udayavani, Jan 9, 2019, 11:30 AM IST

bid-5.jpg

ಆಳಂದ: ಹೆಣ್ಣು ಮಕ್ಕಳು ಮನೆಯೊಳಗಿರಬೇಕಾದ ಕಾಲವೊಂದಿತ್ತು. ಆಕೆ ಅದರಾಚೆಗೆ ಹೋದರೆ ಅವಮಾನಿಸುವ ಕಾಲದಲ್ಲಿ ಎಲ್ಲ ರೀತಿಯ ಪ್ರತಿರೋಧಗಳ ನಡುವೆಯೂ ಮಹಿಳೆಯರಿಗೆ ಶಿಕ್ಷಣ ನೀಡಿ, ಅವರನ್ನು ಪುರುಷರಂತೆ ಸಮಾಜದಲ್ಲಿ ಘನತೆಯಿಂದ ಬಾಳುವಂತೆ ಮಾಡಲು ಅಕ್ಕ ಸಾವಿತ್ರಿ ಫುಲೆ ತಮ್ಮ ಇಡೀ ಜೀವನ ಮುಡುಪಾಗಿಟ್ಟರು ಎಂದು ಹೋರಾಟಗಾರ್ತಿ ಕೆ. ನೀಲಾ ಹೇಳಿದರು.

ತಾಲೂಕಿನ ಕಡಗಂಚಿ ಬಳಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಅಂಗವಾಗಿ ನಡೆದ ಸಮಾರಂಭ ಉದ್ಧೇಶಿಸಿ ಅವರು ಮಾತನಾಡಿದರು.

ನಾವು ಇಂದು ಎಷ್ಟೇ ಮುಂದುವರಿದ ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದರೂ ಹೆಣ್ಣುಗಂಡಿನ ಅಡಿಯಾಳು ಎನ್ನುವ ಪರಿಕಲ್ಪನೆಯಲ್ಲಿದ್ದೇವೆ. ಹೀಗಿರುವಾಗ ಸುಮಾರು 150 ವರ್ಷಗಳ ಹಿಂದೆ ಯಾವ ರೀತಿಯ ವ್ಯವಸ್ಥೆಯಿತ್ತು ಎಂಬುದನ್ನು ನಾವು ಊಹಿಸಿಕೊಳ್ಳಬಹುದಾಗಿದೆ ಎಂದರು.

ಕ್ಲಿಷ್ಟಕರ ಸಮಾಜದಲ್ಲಿ ಸಾವಿತ್ರಿಬಾಯಿ ಫುಲೆ ಅವರು ಜ್ಯೋತಿಬಾ ಫುಲೆ ಅವರೊಂದಿಗೆ ಸೇರಿ ಮಹಿಳೆಯರ ಶಿಕ್ಷಣಕ್ಕೆ ಸಾಕಷ್ಟು ಶ್ರಮಿಸಿದರು. ಸಾವಿತ್ರಿಬಾಯಿ ಫುಲೆ ಅವರ ಈ ಕಾರ್ಯದಲ್ಲಿ ಜ್ಯೋತಿಬಾ ಫುಲೆ ಕೊಡುಗೆ ಮರೆಯಲಾಗದು. ಸಾವಿತ್ರಿಬಾಯಿಗೆ ಶಿಕ್ಷಣಕೊಡಿಸಿ ಅವರನ್ನು ಶಿಕ್ಷಕಿಯನ್ನಾಗಿ ಮಾಡಿದ್ದು ಜ್ಯೋತಿಬಾ ಫುಲೆ. ಅವರೊಂದಿಗೆ ಅವರ ಸಹೋದರಿ ಸುಗುಣಬಾಯಿ ಅವರ ಸೇವೆಯನ್ನು ಮರೆಯಲಾಗದು ಎಂದು ಹೇಳಿದರು.

ದೀನ, ದಲಿತ ಹಾಗೂ ಹಿಂದುಳಿದ ಮಹಿಳೆಯರಿಗೆ ಶಿಕ್ಷಣ ನೀಡುತ್ತಿದ್ದ ಅವರ ಕಾರ್ಯಕ್ಕೆ ಮೇಲ್ವರ್ಗದವರಿಂದ ಅನೇಕ ಅಡೆತಡೆಗಳು ಬಂದವು. ಅವರನ್ನು ಮನೆಯಿಂದ ಹೊರಹಾಕಲಾಯಿತು. ಇಂತಹ ಸಂದರ್ಭದಲ್ಲಿ ಶೇಕ್‌ ಫಾತಿಮಾ ಹಾಗೂ ಕುಟುಂಬದವರು ಅವರಿಗೆ ಆಶ್ರಯ ನೀಡಿ ಸತ್ಯಶೋಧನೆ ಸಮಾಜದ ಮೂಲಕ ಮಹಿಳಾ ಶಿಕ್ಷಣ ಸಮಾನತೆ ಮತ್ತು ಸಾಮಾಜಿಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ ಸತ್ಯಶೋಧನಾ ಸಮಾಜದ ಮೂಲಕ ಇಂಗ್ಲಿಷ್‌ ಶಿಕ್ಷಣ ನೀಡುವ ಮೂಲಕ ಮತ್ತು ಬ್ರಿಟಿಷ್‌ ಕಾನೂನನ್ನು ಬಳಸಿಕೊಂಡು ಅಸಮಾನತೆ ಮತ್ತು ಶೋಷಣೆಯ ಪ್ರತೀಕವಾದ ಮನು ವ್ಯವಸ್ಥೆ ಬದಲಾವಣೆಗಾಗಿ ತಮ್ಮ ಜೀವನವಿಡಿ ಹೋರಾಟ ನಡೆಸಿದರು. ಕೊನೆಗೆ ಪ್ಲೇಗ್‌ ಮಹಾಮಾರಿಗೆ ತುತ್ತಾಗಿ ಕೊನೆಯುಸಿರೆಳೆದರು ಎಂದು ಹೇಳಿದರು.

ಸಹ ಕುಲಪತಿ ಪ್ರೊ| ಜಿ.ಆರ್‌. ನಾಯಕ, ಕುಲಸಚಿವ ಪ್ರೊ| ಮುಸ್ತಾಕ್‌ ಅಹ್ಮದ್‌ ಐ. ಪಟೇಲ್‌, ಪರೀಕ್ಷಾ ನಿಯಂತ್ರಣಾಧಿಕಾರಿಗಳಾದ ಪ್ರೊ| ಬಿ.ಆರ್‌. ಕೆರೂರ್‌, ವಿತ್ತಾಧಿಕಾರಿ ಶಿವಾನಂದಂ, ಎಲ್ಲ ನಿಕಾಯಗಳ ಡೀನ್‌ಗಳು, ವಿಭಾಗಗಳ ಮುಖ್ಯಸ್ಥರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು. ಕುಮಾರಿ ಕದಂಬಿನಿ ನಿರೂಪಿಸಿದರು. ಕುಮಾರಿ ಅಲಕ ಬಿ.ಜಿ. ಸ್ವಾಗತಿಸಿದರು, ಕುಮಾರಿ ಸೀಮಾ ಶಾಸ್ತ್ರೀ ವಂದಿಸಿದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.