ಬಿಎಸ್‌ವೈ,ಶೆಟ್ಟರ್‌,ಅಶೋಕ್‌ ವಿರುದ್ಧದ ಅರ್ಜಿ ಇತ್ಯರ್ಥ


Team Udayavani, Jan 10, 2019, 12:55 AM IST

bsy-ashok.jpg

ಬೆಂಗಳೂರು: ನಗರದ ಆರ್‌.ಎಂ.ವಿ ಬಡಾವಣೆ 2ನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎ ವಶಪಡಿಸಿಕೊಂಡಿದ್ದ 14 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್‌ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ವಿರುದ್ಧ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಇತ್ಯರ್ಥಪಡಿಸಿದೆ.

ಪ್ರಕರಣದ ಕುರಿತು ಮರು ತನಿಖೆ ನಡೆಸಲು ಭ್ರಷ್ಟಚಾರ ನಿಗ್ರಹ ದಳಕ್ಕೆ (ಎಸಿಬಿ)ನಿರ್ದೇಶಿಸುವಂತೆ ಕೋರಿ ನಿವೃತ್ತ ವಿಂಗ್‌
ಕಮಾಂಡರ್‌ ಜಿ.ಬಿ.ಅತ್ರಿ ಸಲ್ಲಿಸಿರುವ ಪಿಐಎಲ್‌, ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ.ಅರವಿಂದ್‌ ಕುಮಾರ್‌ ಅವರಿದ್ದ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂತು.

ವಿಚಾರಣೆ ವೇಳೆ ಬಿಡಿಎ ಪರ ವಕೀಲರು ಆಕ್ಷೇಪಣೆ ಸಲ್ಲಿಸಿ, ವಿವಾದಿತ ಜಮೀನನ್ನು ಆರ್‌.ಅಶೋಕ್‌ 2011ರಲ್ಲೇ ಬಿಡಿಎಗೆ ದಾನಪತ್ರ ಮಾಡಿಕೊಟ್ಟಿದ್ದು, ಸದ್ಯ ಜಮೀನು ಬಿಡಿಎ ವಶದಲ್ಲೇ ಇದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. 

ಅಲ್ಲದೆ, ಈ ಪ್ರಕರಣದ ಬಗ್ಗೆ ಈಗಾಗಲೇ ತನಿಖೆ ನಡೆಸಿರುವ ಲೋಕಾಯುಕ್ತ ಬಿ-ರಿಪೋರ್ಟ್‌ ಸಲ್ಲಿಸಿದೆ. ವಿಶೇಷ ಸನ್ನಿವೇಶಗಳನ್ನು ಹೊರತುಪಡಿಸಿ ಈ ರೀತಿ ಒಂದು ತನಿಖಾ ಸಂಸ್ಥೆ ಮುಕ್ತಾಯಗೊಳಿಸಿದ ಪ್ರಕರಣವನ್ನು ಮತ್ತೂಂದು ತನಿಖಾ ಸಂಸ್ಥೆ ಅದನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಎಸಿಬಿ ಹೇಳಿತು.

ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರು ಆಕ್ಷೇಪಿಸಿದ್ದ ಜಮೀನು ಈಗಾಗಲೇ ಬಿಡಿಎ ವಶದಲ್ಲಿದ್ದು, ಅರ್ಜಿಯು ಸಾರ್ವಜನಿಕ ಹಿತಾಸಕ್ತಿಯ ವ್ಯಾಪ್ತಿಯನ್ನು ಕಳೆದುಕೊಂಡಿದೆ.

ಒಂದು ವೇಳೆ ಅಗತ್ಯವೆನಿಸಿದರೆ ಅರ್ಜಿದಾರರು ಕಾನೂನಿನಲ್ಲಿ ಲಭ್ಯವಿರುವ ಪರ್ಯಾಯ ಮಾರ್ಗದ ಮೂಲಕ ಸಮಸ್ಯೆಗೆ
ಪರಿಹಾರ ಕಂಡುಕೊಳ್ಳಬಹುದು ಎಂದು ಅವಕಾಶ ನೀಡಿ ಅರ್ಜಿ ಇತ್ಯರ್ಥಪಡಿಸಿತು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.