ಮಳೆ ಪ್ರಮಾಣ ಹೆಚ್ಚಿದ್ದರೂ ಅಂತರ್ಜಲ ಮಟ್ಟ ಕುಸಿತ 


Team Udayavani, Jan 10, 2019, 5:31 AM IST

10-january-3.jpg

ಸುಳ್ಯ: ಜಿಲ್ಲೆಯಲ್ಲಿ ಈ ವರ್ಷ ಮಳೆಯ ಪ್ರಮಾಣ ಹೆಚ್ಚಾಗಿದ್ದರೂ ಅಂತರ್ಜಲ ಮಟ್ಟ ಕುಸಿದಿದೆ. ಇದು ಎಚ್ಚರಿಕೆಯ ಕರೆ ಗಂಟೆಯಾಗಿದೆ. ಕಳೆದ ಎರಡು ವರ್ಷಗಳ ಜನವರಿಯಿಂದ ಡಿಸೆಂಬರ್‌ ತನಕದ ಅಂಕಿ-ಅಂಶಗಳ ಪ್ರಕಾರ 2018ರ ಸ್ಥಿತಿಯಿದು. ಹೊಸ ವರ್ಷದ ಆರಂಭದ ತಿಂಗಳಲ್ಲೇ ನೀರಿನ ಹಾಹಾಕಾರ ಉಂಟಾಗಬಹುದು ಎನ್ನುವ ಮುನ್ಸೂಚನೆ ಇದಾಗಿದೆ. ಹಾಗಾಗಿ ಜಲ ಸಂರಕ್ಷಣೆಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಾಮುಖ್ಯ ನೀಡಬೇಕು ಎನ್ನುವುದು ಇನ್ನಾದರೂ ಅರಿವಾಗಬೇಕು.

ಗರಿಷ್ಠ ಕುಸಿತ
ಐದು ವರ್ಷಗಳ ಅಂಕಿ-ಅಂಶ ಗಮನಿಸಿದರೆ ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿರುವುದು ಗಮನಕ್ಕೆ ಬರುತ್ತದೆ. ಆದರೆ ಕುಸಿದಿದ್ದ ಮಳೆ ಪ್ರಮಾಣ 2018ರಲ್ಲಿ ಏರಿಕೆ ಕಂಡಿದೆ. ಅದು ಪ್ರಾಕೃತಿಕ ವಿಕೋಪದ ಪರಿಣಾಮ ಆಗಿರಬಹುದಾಗಿದೆ. ಹೊಸ ವರ್ಷದಲ್ಲಿ ಮುಂದುವರಿಯುತ್ತದೆ ಎನ್ನುವಂತಿಲ್ಲ.

2017ರಲ್ಲಿ ಮಂಗಳೂರು ತಾಲೂಕಿನಲ್ಲಿ 14.52 ಮೀ.ನಲ್ಲಿದ್ದ ಅಂತರ್ಜಲ ಮಟ್ಟ 2018ರಲ್ಲಿ 16.68 ಮೀ., ಪುತ್ತೂರಿನಲ್ಲಿ 6.83 ಮೀ.ನಿಂದ 8.88 ಮೀ., ಬೆಳ್ತಂಗಡಿಯಲ್ಲಿ 11.02ರಿಂದ 11.04 ಮೀ., ಬಂಟ್ವಾಳದಲ್ಲಿ 7.45ರಿಂದ 8.61 ಮೀ.ಗೆ ಕುಸಿದಿದೆ. ಸುಳ್ಯ ತಾಲೂಕಿನಲ್ಲಿ 9.53 ಮೀ.ನಲ್ಲಿದ್ದುದು 9.36 ಮೀ.ಗೆ ಏರಿದೆ. ಅರಣ್ಯ ನಾಶ, ಪ್ರಕೃತಿ ವಿರೋಧಿ ಕೃತ್ಯ, ನೀರಿಂಗಿಸಲು ಪೂರಕ ಕ್ರಮಗಳು ಇಲ್ಲದಿರುವುದು ಸತತವಾಗಿ ಅಂತರ್ಜಲ ಮತ್ತು ಮಳೆ ಕುಸಿತಕ್ಕೆ ಕಾರಣ ಎಂದು ಅಧ್ಯಯನಗಳು ತಿಳಿಸಿವೆ.

1.04 ಮೀ. ಕುಸಿತ
2017ಕ್ಕೆ ಹೋಲಿಸಿದರೆ 2018ರಲ್ಲಿ ಅಂತರ್ಜಲ ಮಟ್ಟ 1.04 ಮೀ.ನಷ್ಟು ಕೆಳಕ್ಕೆ ಕುಸಿದಿದೆ. 2017ರಲ್ಲಿ 9.87 ಮೀ.ನಲ್ಲಿದ್ದ ಮಟ್ಟ 2018ರಲ್ಲಿ 10.91 ಮೀ.ಗೆ ಜಾರಿದೆ. ಜನವರಿಯಿಂದ ಡಿಸೆಂಬರ್‌ ತನಕದ ಪ್ರತಿ ತಿಂಗಳ ಜಲಮಟ್ಟ ಗಮನಿಸಿದರೆ ಹೆಚ್ಚಾಗಿ ಕುಸಿತವೇ ದಾಖಲಾಗಿದೆ. ಸುಳ್ಯದಲ್ಲಿ ಮಾತ್ರಕೊಂಚ ಸುಧಾರಣೆ ಬಿಟ್ಟರೆ ಬಾಕಿ ಎಲ್ಲ ತಾ| ಗಳಲ್ಲಿ ಗ್ರಾಫ್‌ ಇಳಿಮುಖವೇ ಇದೆ.

ಜನಜಾಗೃತಿ ಅವಶ್ಯ
ಮಳೆ ನೀರು ಸದ್ಬಳಕೆ, ಅಂತರ್ಜಲ ಮಟ್ಟ ಸುಧಾರಣೆಗೆ ಹೆಚ್ಚು ಒತ್ತು ನೀಡಬೇಕಿದೆ. ಸ್ವಂತ ಜಮೀನಿನಲ್ಲಿ ಇಂಗುಗುಂಡಿಯಂತಹ ಅಂತರ್ಜಲ ವೃದ್ಧಿಗೆ ಸಹಕಾರಿಯಾದ
ಪೂರಕ ಕ್ರಮಗಳನ್ನು ಗರಿಷ್ಠ ಪ್ರಮಾಣದಲ್ಲಿ ಅನುಷ್ಠಾನಿಸಬೇಕು. ಜಲಸಂರಕ್ಷಣೆ ಕುರಿತು ಜನಜಾಗೃತಿ ಅತ್ಯವಶ್ಯವಾಗಿದೆ.
-ಜಾನಕಿ,
ಭೂ ವಿಜ್ಞಾನಿ, ಅಂತರ್ಜಲ ವಿಭಾಗ,
ಮಂಗಳೂರು

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Martin’s team announced the release date of the film

Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

1-hunsur

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Martin’s team announced the release date of the film

Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

1-hunsur

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.