ಸಿಕ್ಕಿಂನಲ್ಲಿ ಭಾರೀ ಹಿಮಪಾತ: 150 ಪ್ರವಾಸಿಗರನ್ನು ರಕ್ಷಿಸಿದ ಸೇನೆ
Team Udayavani, Jan 10, 2019, 5:50 AM IST
ಹೊಸದಿಲ್ಲಿ : ಭಾರೀ ಹಿಮಪಾತ ಸಂಭವಿಸುತ್ತಿರುವ ಉತ್ತರ ಸಿಕ್ಕಿಂ ನಲ್ಲಿ ಸಿಲುಕಿಕೊಂಡಿದ್ದ ಸುಮಾರು 150 ಪ್ರವಾಸಿಗರನ್ನು ಭಾರತೀಯ ಸೇನೆ ಬುಧವಾರ ಸಂಜೆ ನಡೆಸಿದ ಎರಡು ತಾಸುಗಳ ಮಿಂಚಿನ ರಕ್ಷಣಾ ಕಾರ್ಯಾಚರಣೆಯಲ್ಲಿ ಎಲ್ಲ ಪ್ರವಾಸಿಗರನ್ನು ಪಾರು ಮಾಡಿ ಸರ್ವತ್ರ ಮೆಚ್ಚುಗೆ, ಪ್ರಶಂಸೆಗೆ ಪಾತ್ರವಾಗಿದೆ.
ಭಾರೀ ಹಿಮಪಾತದಿಂದಾಗಿ ಉತ್ತರ ಸಿಕ್ಕಿಂ ನಲ್ಲಿ ಶೂನ್ಯಕ್ಕಿಂತ ಕಡಿಮೆ ತಾಪ ಮಾನವಿದ್ದು ಮನುಷ್ಯನ ದೇಹ ಮರಗಟ್ಟುವಷ್ಟು ಚಳಿ ಇದೆ. ಇಲ್ಲೀಗ ಆಗುತ್ತಿರುವ ಭಾರೀ ಹಿಮಪಾತವು ಅಭೂತಪೂರ್ವವೆಂದು ಹೇಳಲಾಗಿದೆ.
150ರಷ್ಟು ಪ್ರವಾಸಿಗರು ಹಿಮಪಾತದ ನಡುವೆ ಸಿಲುಕಿಕೊಂಡಿದ್ದಾರೆ ಎಂಬ ಸುದ್ದಿ ತಿಳಿದೊಡನೆಯೇ ತ್ರಿಶಕ್ತಿ ಪಡೆಗೆ ಸೇರಿದ ಸೈನಿಕರು ಅತ್ಯಂತ ತ್ವರಿತಗತಿಯಲ್ಲಿ ಕಾರ್ಯಾಚರಣೆ ನಡೆಸಿದರು.
ಸಿಲುಕಿಕೊಂಡಿದ್ದ ಪ್ರವಾಸಿಗರಿಗೆ ಸೈನಿಕರು ಒಡನೆಯೇ ವೈದ್ಯಕೀಯ ತುರ್ತು ಉಪಚಾರ ನೀಡಿದರು. ಮಾತ್ರವಲ್ಲದೆ ತತ್ಕ್ಷಣ ವಾಹನಗಳನ್ನು ದೊರಕಿಸಿ ಪ್ರವಾಸಿಕರನ್ನು ಸಮೀಪದ ಸೇನಾ ಶಿಬಿರಗಳಿಗೆ ಒಯ್ದರು ಎಂದು ಪೂರ್ವ ಕಮಾಂಡ್ನ ಓರ್ವ ಹಿರಿಯ ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು