2 ಏಕದಿನ ನಿಷೇಧದ ಭೀತಿಯಲ್ಲಿ ಹಾರ್ದಿಕ್‌, ರಾಹುಲ್‌


Team Udayavani, Jan 11, 2019, 12:40 AM IST

hardik-pandya-kl-rahuldddd.jpg

ನವದೆಹಲಿ: ಬಾಲಿವುಡ್‌ ನಿರ್ದೇಶಕ ಕರಣ್‌ ಜೋಹರ್‌ ಟೀವಿ ಕಾರ್ಯಕ್ರಮ, ಕಾಫಿ ವಿತ್‌ ಕರಣ್‌ನಲ್ಲಿ ಭಾಗವಹಿಸಿ ಪಶ್ಚಾತ್ತಾಪ ಪಡುತ್ತಿರುವುದಲ್ಲದೇ, ಭಾರೀ ಅಪಾಯಕ್ಕೂ ಎದೆಯೊಡ್ಡಬೇಕಾದ ಸಂದಿಗ್ಧ ಸ್ಥಿತಿಗೆ ಹಾರ್ದಿಕ್‌ ಪಾಂಡ್ಯ, ಕೆ.ಎಲ್‌.ರಾಹುಲ್‌ ತಲುಪಿದ್ದಾರೆ. 

ಮಾಡಿರುವ ತಪ್ಪಿಗೆ ಹಾರ್ದಿಕ್‌ ಕ್ಷಮೆಯಾಚಿಸಿದ್ದರೂ, ಅದು ತನಗೆ ಸಮಾಧಾನ ತಂದಿಲ್ಲ. ಇಬ್ಬರನ್ನೂ 2 ಏಕದಿನ ಪಂದ್ಯಗಳ ಮಟ್ಟಿಗೆ ನಿಷೇಧಿಸಲು ಶಿಫಾರಸು ಮಾಡಿದ್ದೇನೆ. ಸಹ ಆಡಳಿತಾಧಿಕಾರಿ ಡಯಾನ ಎಡುಲ್ಜಿ ಈ ಬಗ್ಗೆ ಕಾನೂನಾತ್ಮಕ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಅದಾದ ಬಳಿಕ ಅಂತಿಮ ನಿರ್ಧಾರ ಮಾಡಲಾಗುವುದೆಂದು ವಿನೋದ್‌ ರಾಯ್‌ ಹೇಳಿದ್ದಾರೆ.

ಕಾಫಿ ವಿತ್‌ ಕರಣ್‌ ಕಾರ್ಯಕ್ರಮದಲ್ಲಿ ಮಹಿಳೆಯರೊಂದಿಗೆ ತನಗಿರುವ ಸಂಬಂಧವನ್ನು ಬಹಳ ದೊಡ್ಡ ಸಾಧನೆಯೆಂಬಂತೆ ಹಾರ್ದಿಕ್‌ ವರ್ಣಿಸಿದ್ದರು. ಹಲವಾರು ಮಹಿಳೆಯರೊಂದಿಗೆ ತಾನು ಸಂಬಂಧ ನಿಭಾಯಿಸುತ್ತೇನೆ, ಜೊತೆಗೆ ಅವನ್ನೆಲ್ಲ ಪೋಷಕರಿಗೆ ಹೇಳಿಯೇ ಮಾಡುತ್ತೇನೆ ಎಂದು ಹಾರ್ದಿಕ್‌ ಹೇಳಿಕೊಂಡಿದ್ದರು. ಇದು ಮಹಿಳೆಯರ ಬಗ್ಗೆ ಅವರಿಗಿರುವ ಪೂರ್ವಾಗ್ರಹ ಪೀಡಿತ ಹಾಗೂ ಅಶ್ಲೀಲ ಭಾವನೆಯನ್ನು ಪ್ರತಿಧ್ವನಿಸುತ್ತದೆ ಎಂದು ವಿವಾದವೆದ್ದಿತ್ತು. ಇದೇ ಸಂದರ್ಶನದಲ್ಲಿ ಸಚಿನ್‌ಗಿಂತ ವಿರಾಟ್‌ ಕೊಹ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್‌ ಎಂದಿದ್ದೂ ಚರ್ಚೆಗೆ ಕಾರಣವಾಗಿತ್ತು.ವಿವಾದವೆದ್ದ ಬೆನ್ನಲ್ಲೇ ಬಿಸಿಸಿಐ ಇಬ್ಬರಿಗೂ ನೋಟಿಸ್‌ ನೀಡಿ, 24 ಗಂಟೆಯೊಳಗಾಗಿ ಉತ್ತರ ನೀಡುವಂತೆ ಸೂಚಿಸಿತ್ತು. 

ಕೂಡಲೇ ಪ್ರತಿಕ್ರಿಯಿಸಿದ ಹಾರ್ದಿಕ್‌ ಪಾಂಡ್ಯ, ತಾನು ಉದ್ದೇಶಪೂರ್ವಕವಾಗಿ ಹಾಗೆ ಮಾಡಿಲ್ಲ. ಯಾರನ್ನೂ ನೋಯಿಸುವ ಉದ್ದೇಶ ತನಗಿರಲಿಲ್ಲ. ಆ ಶೋ ಇದ್ದಿದ್ದೆ ಹಾಗೆ. ಅದಕ್ಕೆ ತಕ್ಕಂತೆ ನಾನು ಮುಂದುವರಿದೆ ಅಷ್ಟೇ ಎಂದಿದ್ದರು. ಈ ವಿವರಣೆ ತನಗೆ ತೃಪ್ತಿ ತಂದಿಲ್ಲ ಎಂದು ಬಿಸಿಸಿಐ ಹೇಳಿದೆ. 

ಆದರೆ ಇದುವರೆಗೆ ಕೆ.ಎಲ್‌.ರಾಹುಲ್‌ ಏನು ಪ್ರತಿಕ್ರಿಯೆ ನೀಡಿದ್ದಾರೆಂದು ಗೊತ್ತಾಗಿಲ್ಲ.

ಡಯಾನ ಅಭಿಪ್ರಾಯದ ಬಳಿಕೆ ನಿರ್ಧಾರ: ಭಾರತ ಮಹಿಳಾ ಕ್ರಿಕೆಟ್‌ ತಂಡಕ್ಕೆ ಹೊಸ ತರಬೇತುದಾರರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಡಯಾನ ಎಡುಲ್ಜಿಯಿಂದ‌ ವಿರೋಧ ಎದುರಿಸಿದ್ದ ವಿನೋದ್‌ ರಾಯ್‌, ಪ್ರಸ್ತುತ ಪ್ರಕರಣದಲ್ಲಿ ಜಾಣ್ಮೆಯ ಹೆಜ್ಜೆಯಿಡಲು ನಿರ್ಧರಿಸಿದಂತಿದೆ. 2 ಪಂದ್ಯಗಳ ನಿಷೇಧಕ್ಕೆ ವಿನೋದ್‌ ಮನಸ್ಸು ಮಾಡಿದ್ದರೂ, ಈ ಬಗ್ಗೆ ಕಾನೂನು ಏನು ಹೇಳುತ್ತದೆ ಎಂದು ತಿಳಿಯಲು ಡಯಾನ ನಿರ್ಧರಿಸಿದ್ದಾರೆ. ಆದ್ದರಿಂದ ಅವರ ಅಭಿಪ್ರಾಯ ಪಡೆದು ಮುಂದುವರಿಯುವುದಾಗಿ ವಿನೋದ್‌ ಹೇಳಿದ್ದಾರೆ.

ಆಸೀಸ್‌ ವಿರುದ್ಧ 2 ಏಕದಿನಕ್ಕೆ ಅಲಭ್ಯ?
ಒಂದು ವೇಳೆ ಇಬ್ಬರೂ ನಿಷೇಧಕ್ಕೊಳಗಾದರೆ ಆಸ್ಟ್ರೇಲಿಯ ವಿರುದ್ಧ ಜ.12ರಿಂದ ಆರಂಭವಾಗುವ 3 ಪಂದ್ಯಗಳ ಏಕದಿನ ಸರಣಿಯ, ಮೊದಲೆರಡು ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ಅದು ಮುಂದಿನ ಏಕದಿನ ವಿಶ್ವಕಪ್‌ ಹಿನ್ನೆಲೆಯಲ್ಲಿ ಇಬ್ಬರ ಪಾಲಿಗೆ ಮಾರಕವಾಗಿ ಪರಿಣಮಿಸುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.