ಏರ್ಯರಿಗೆ ರಂಗಭೂಮಿ ಪ್ರಶಸ್ತಿ


Team Udayavani, Jan 11, 2019, 12:30 AM IST

q-7.jpg

ಅವಿಭಕ್ತ ದ.ಕ. ಜಿಲ್ಲೆಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿರುವ ಏರ್ಯ ಲಕ್ಷ್ಮೀ ನಾರಾಯಣ ಆಳ್ವರಿಗೆ ಸಾಹಿತ್ಯವಲ್ಲದೆ ಯಕ್ಷಗಾನ-ನಾಟಕಗಳು ಅತ್ಯಂತ ಆಸಕ್ತಿಯ ಕ್ಷೇತ್ರಗಳು. ಅವರು ಮಂಗಳೂರಿನಲ್ಲಿ ನಾಟಕದ ಚಟುವಟಿಕೆಗಳು ಹೆಚ್ಚಲಿಕ್ಕಾಗಿ “ಭೂಮಿಕಾ’ ಎಂಬ ಹವ್ಯಾಸಿ ನಾಟಕ ಸಂಸ್ಥೆಯನ್ನು ಕಟ್ಟಿ ಸ್ಥಾಪಕಾಧ್ಯಕ್ಷರಾದರು. “ಭಾವಗಂಗೋತ್ರಿ’ ಸಂಸ್ಥೆಯ ಅಧ್ಯಕ್ಷರಾದರು. ಸಾಲಿಗ್ರಾಮ ಮಕ್ಕಳ ಮೇಳದ ಆಡಳಿತ ಮಂಡಳಿ ಉಪಾಧ್ಯಕ್ಷರಾದರು. ಜಿಲ್ಲಾ ಲೈಬ್ರೆರಿ ಅಥಾರಿಟಿ ಸಂಸ್ಥೆಯ ಉಪಾಧ್ಯಕ್ಷರಾಗಿ 6 ವರ್ಷ ದುಡಿದರು. ಎಲ್ಲಕ್ಕಿಂತ ಹೆಚ್ಚಾಗಿ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ಸಿದ್ಧಗೊಂಡ ತುಳು ನಿಘಂಟು ಯೋಜನೆಯ (1979-1997) ಸಲಹಾ ಸಮಿತಿಯಲ್ಲಿದ್ದು ಭಾಷಾ ತಜ್ಞರಾಗಿಯೂ ಕೆಲಸ ಮಾಡಿದರು. 19-03-1926ರಂದು ಜನಿಸಿದ ಏರ್ಯರು ಈಗ 93ರ ಹಿರಿಯರು. ಹಲ್ಲು ಹೋದರು ಬೆನ್ನು ಬಾಗಿಲ್ಲ; ನೆನಪು ಮಾಸಿಲ್ಲ; ಉತ್ಸಾಹ ಕುಂದಿಲ್ಲ; ನಡಿಗೆಯ ವೇಗ ಕುಂಠಿತವಾಗಿಲ್ಲ; ಕಿರಿಯರಿಗೆ ಪ್ರೋತ್ಸಾಹ ನೀಡಿ ಬೆನ್ನು ಚಪ್ಪರಿಸಿ, ಉತ್ಸಾಹಗೊಳಿಸುವ ಕ್ರಮ ಹಿಂದೆ ಬಿದ್ದಿಲ್ಲ. ಸತತ ಚಟುವಟಿಕೆಗಳಿಗೆ-ಜೀವನೋತ್ಸಾಹಕ್ಕೆ ಮಾದರಿ ಏರ್ಯದ ಆಳ್ವರು. ಅವರಿಂದ ಕಲಿತು ಅಳವಡಿಸಿಕೊಳ್ಳಬೇಕಾದ ವಿಷಯಗಳು ಹತ್ತು ಹಲವು. ಹಿರಿಯ ಸಾಹಿತಿ, ಸಂಘಟಕ, ಕಲಾಪ್ರೋತ್ಸಾಹಕ, ಸಹಕಾರಿ ಧುರೀಣ, ಅನುಭವಗಳ ಖನಿ ಏರ್ಯ ಲಕ್ಷ್ಮೀನಾರಾಯಣ ಆಳ್ವರಿಗೆ ಉಡುಪಿಯ ರಂಗಭೂಮಿ ಸಂಸ್ಥೆ ಜ.12ರಂದು “ಸಾಹಿತ್ಯ ಕಲಾಶೇವಧಿ’ ಎಂಬ ಬಿರುದಿನೊಂದಿಗೆ ಪುರಸ್ಕರಿಸಲಿದೆ. 

ಪಾದೇಕಲ್ಲು ವಿಷ್ಣು ಭಟ್ಟ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.